ಸಾಹಸ ಮನೋಭಾವದ ಕೈಟ್‌ ಬ್ರದರ್ಸ್‌!


Team Udayavani, Nov 15, 2018, 3:19 PM IST

96.jpg

ಸರ್ಕಾರಿ ಶಾಲೆಯ ವಾಸ್ತವತೆ ಕುರಿತಂತೆ ವೃಷಭ್‌ ಶೆಟ್ಟಿ ನಿರ್ದೇಶನದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡುಗೆ ರಾಮಣ್ಣ ರೈ’ ಚಿತ್ರ ಜೋರು ಸುದ್ದಿ ಮಾಡಿದ್ದು ಎಲ್ಲರಿಗೂ ಗೊತ್ತು. ಕನ್ನಡದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಅನೇಕ ಚಿತ್ರಗಳು ಬಂದಿವೆ. ಒಂದಷ್ಟು ಸುದ್ದಿಯನ್ನೂ ಮಾಡಿವೆ. ಈಗ ಆ ಸಾಲಿಗೆ ಹೊಸಬರ “ಕೈಟ್‌ ಬ್ರದರ್ಸ್‌’ ಹೊಸ ಸೇರ್ಪಡೆ. ಈ ಶೀರ್ಷಿಕೆ ಕೇಳಿದಾಗ, ವಿಮಾನ ಕಂಡು ಹಿಡಿದ ರೈಟ್‌ ಬ್ರದರ್ಸ್‌ ನೆನಪಾಗುತ್ತೆ. ಆ ಸಹೋದರರಂತೆ, ಈ “ಕೈಟ್‌ ಬ್ರದರ್ಸ್‌’ರದ್ದು ಒಂದು ಯಶೋಗಾಥೆಯ ಚಿತ್ರಣ ಇಲ್ಲಿದೆ. ಈ ಚಿತ್ರದ ಮೂಲಕ ವಿರೇನ್‌ ಸಾಗರ್‌ ಬಗಾಡೆ ನಿರ್ದೇಶಕರಾಗುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಇವರದೇ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಇಷ್ಟರಲ್ಲೇ ಸೆನ್ಸಾರ್‌ ಮಂಡಳಿಗೆ ಹೋಗಲು ಅಣಿಯಾಗಿದೆ ಚಿತ್ರತಂಡ.

ಈ “ಕೈಟ್‌ ಬ್ರದರ್ಸ್‌’ ಕಥೆ ಏನು? “ಇದೊಂದು ಅಡ್ವೆಂಚರಸ್‌ ಡ್ರಾಮಾ’ ಎಂಬ ಉತ್ತರ ನಿರ್ದೇಶಕರದ್ದು. “ಮಕ್ಕಳ ಮೃದು ಮನಸ್ಸಿನೊಳಗೆ ಸಾಹಸ ಮನೋಭಾವ ಕೂಡ ಇರುತ್ತೆ. ಅವರನ್ನು ಪ್ರೋತ್ಸಾಹಿಸಿದರೆ, ಆ ಮಕ್ಕಳು ಏನು ಬೇಕಾದರೂ ಸಾಧಿಸಬಲ್ಲರು. ಅವರ ಮುಗ್ಧತೆ ಜೊತೆಗೊಂದು ಸಾಮಾಜಿಕ ಕಳಕಳಿ ಇರುವ ಅಂಶವೂ ಇದೆ ಎಂಬುದರ ಚಿತ್ರಣವಿಲ್ಲಿದೆ. ಇಲ್ಲಿ ಪ್ರಮುಖವಾಗಿ ಸರ್ಕಾರಿ ಶಾಲೆ ಕುರಿತ ವಿಷಯವಿದೆ. ಅದೇ ಚಿತ್ರದ ಹೈಲೈಟ್‌ ಕೂಡ. “ಸರ್ಕಾರಿ ಶಾಲೆ’ಯಿಂದ ತನ್ನ ಗೆಳೆಯರೆಲ್ಲರೂ ವಂಚಿತರಾಗುತ್ತಿದ್ದಾರೆ ಎಂಬ ತಿಳಿಯುವ ಸಾಹಸಿ ಮನೋಭಾವದ ಹುಡುಗನೊಬ್ಬ, ಕಾಳಜಿ ವಹಿಸಿ, ಪುನಃ ಹೇಗೆ ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಯನ್ನು ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಾನೆ ಎಂಬುದು ಕಥಾವಸ್ತು. ರಾಮಾಯಣದಲ್ಲಿ ಹನುಮಂತ ಶ್ರೀರಾಮನಿಗೋಸ್ಕರ ಸಾಗರ ದಾಟಿ ಹೇಗೆ ಲಂಕೆಗೆ ಹಾರಿದ್ದನೋ, ಇಲ್ಲಿ ಶ್ರೀರಾಮ ಎಂಬ ಗೆಳೆಯ ತನ್ನ ಮತ್ತೂಬ್ಬ ಗೆಳೆಯ ಹನುಮಂತನಿಗಾಗಿ ಹಳ್ಳಿ ಬಿಟ್ಟು, ಬೆಂಗಳೂರಿನಂತಹ ನಗರಕ್ಕೆ ಹೋಗಿ, ಅಲ್ಲಿಂದ ಇನ್ನೆಲ್ಲಿಗೋ ಸಾಗಿ ಯಾವ ಸಾಧನೆ ಮಾಡುತ್ತಾನೆ ಎಂಬುದೇ ಚಿತ್ರದ ಸಾರಾಂಶ’ ಎನ್ನುತ್ತಾರೆ ನಿರ್ದೇಶಕ ವಿರೇನ್‌ ಸಾಗರ್‌ ಬಗಾಡೆ.

ಅಂದಹಾಗೆ, ಚಿತ್ರಕ್ಕೆ ಇತ್ತೀಚೆಗೆ ಹಾಡುಗಳ ಧ್ವನಿಮುದ್ರಣವಾಗಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅನೀಶ್‌ ಚೆರಿಯನ್‌ ಸಂಗೀತ ನೀಡಿದ್ದಾರೆ. ಅನನ್ಯ ಭಟ್‌, “ಚುಟು ಚುಟು’ ಖ್ಯಾತಿಯ ರವೀಂದ್ರ ಸೊರಗಾವಿ, ಬಾಲಿವುಡ್‌ ಗಾಯಕ ಕೇಶವ ಕುಮಾರ್‌ ಮತ್ತು ನಿರ್ದೇಶಕ ವಿರೇನ್‌ ಸಾಗರ್‌ ಬಗಾಡೆ ಕೂಡ ಹಾಡಿದ್ದಾರೆ. ಸಿಂಪಲ್‌ ಸುನೀ, ವಿರೇನ್‌ ಸಾಗರ್‌ ಬಗಾಡೆ ಸಾಹಿತ್ಯವಿದೆ. ಚಿತ್ರದಲ್ಲಿ ಸಮರ್ಥ್ ಆಶಿ, ಪ್ರಣೀಲ್‌ ನಾಡಿಗೇರ್‌ ಪ್ರಮುಖ ಆಕರ್ಷಣೆ. ಉಳಿದಂತೆ ಶ್ರೇಯಾ ಹರಿಹರ್‌, ವಿನೋದ್‌ ಬಗಾಡೆ, ಅನಂತ್‌ ದೇಶಪಾಂಡೆ, ಪ್ರಭು ಹಂಚನಾಳ್‌, ರಾಜೀವ ಸಿಂಗ್‌ ಹಲವಾಯಿ ಸೇರಿದಂತೆ ಉತ್ತರ ಕರ್ನಾಟಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ಅಶೋಕ್‌ ಕಶ್ಯಪ್‌ ಛಾಯಾಗ್ರಹಣವಿದೆ. ಸಂತೋಷ್‌ ರಾಧಾಕೃಷ್ಣನ್‌ ಸಂಕಲನ ಮಾಡಿದ್ದಾರೆ. ಭಜರಂಗ ಸಿನಿಮಾ ಬ್ಯಾನರ್‌ನಲ್ಲಿ ರಜನಿಕಾಂತ್‌ರಾವ್‌ ಬಳ್ವಿ ಮತ್ತು ಮಂಜುನಾಥ್‌ ಬಿ.ಎಸ್‌. ಚಿತ್ರ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.