ಕೊಡಗು ಸಂತ್ರಸ್ತರ ನೆರವಿಗೆ ಕುರುಕ್ಷೇತ್ರ ವಿಶೇಷ ಪ್ರದರ್ಶನ
Team Udayavani, Nov 18, 2018, 11:28 AM IST
ಕನ್ನಡದಲ್ಲಿ ಬಹುಕೋಟಿ ವೆಚ್ಚದ ಬಹುತಾರಾಗಣದಲ್ಲಿ ತಯಾರಾಗುತ್ತಿರುವ ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂದು ಕಳೆದ ಮೂರ್ನಾಲ್ಕು ತಿಂಗಳಿನಿಂದ ಕಾದು ಕುಳಿತಿದ್ದ ಚಿತ್ರ ಪ್ರೇಮಿಗಳಿಗೆ ಕಡೆಗೂ ಚಿತ್ರದ ನಿರ್ಮಾಪಕ ಮುನಿರತ್ನ ಒಂದು ಸಿಹಿಸುದ್ದಿಯನ್ನು ನೀಡಿದ್ದಾರೆ.
ಸದ್ಯ ಪೋಸ್ಟ್ ಪ್ರೊಡಕ್ಷನ್ನ ಅಂತಿಮ ಹಂತದ ಕೆಲಸಗಳಲ್ಲಿರುವ ಕುರುಕ್ಷೇತ್ರ ಚಿತ್ರವನ್ನು ಶೀಘ್ರದಲ್ಲಿಯೇ ವೀಕ್ಷಿಸಲಿರುವ ಮುನಿರತ್ನ ಬಳಿಕ ಚಿತ್ರವನ್ನು ಜನವರಿ ತಿಂಗಳಿನಲ್ಲಿ ಪ್ರೇಕ್ಷಕರ ಮುಂದೆ ತರುವ ಘೋಷಣೆ ಮಾಡಿದ್ದಾರೆ.
ಇನ್ನು ಪ್ರಪಂಚದಾದ್ಯಂತ ಕುರುಕ್ಷೇತ್ರ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದರಿಸಿರುವ ಮುನಿರತ್ನ, ಚಿತ್ರದ ಬಿಡುಗಡೆಗೋ ಒಂದು ದಿನ ಮೊದಲೇ ಅಭಿಮಾನಿಗಳಿಗೆ ವಿಶೇಷ ಪ್ರದರ್ಶನ ಆಯೋಜಿಸಲಿದ್ದು, ಇದರಿಂದ ಬಂದ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಜೊತೆಗೆ ಈ ಪ್ರದರ್ಶನಕ್ಕೆ ಚಿತ್ರಮಂದಿರದ ಬಾಡಿಗೆಯನ್ನು ತಾನೇ ಭರಿಸುವುದಾಗಿ ಹಾಗೂ ಟಿಕೆಟ್ ದರವನ್ನು ಕೊಡಗು ಸಂತ್ರಸ್ತರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆಯೇ ನಿರ್ಧಾರ ಮಾಡಲಿದೆ ಎಂದು ಮುನಿರತ್ನ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ