ಕನ್ನಡ ಚಿತ್ರರಂಗದಲ್ಲಿ ನೀರವ ಮೌನ


Team Udayavani, Nov 27, 2018, 11:39 AM IST

kannada.jpg

ಕನ್ನಡ ಚಿತ್ರರಂಗದಲ್ಲಿ ನೀರವ ಮೌನ ಆವರಿಸಿದೆ. ಮನೆಯ ಯಜಮಾನನ್ನು ಕಳೆದುಕೊಂಡ ಸೂತಕದಲ್ಲಿದೆ ಚಂದನವನ. ಆ ಸೂತಕದ ಛಾಯೆ ಅಂಬರೀಶ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಚಿತ್ರರಂಗದ ಮಂದಿಯ ಮುಖದಲ್ಲಿ ಎದ್ದು ಕಾಣುತ್ತಿತ್ತು. ಚಿತ್ರರಂಗದಲ್ಲಿ ಏನೇ ಸಮಸ್ಯೆ ಆದರೂ “ರೆಬೆಲ್‌ಸ್ಟಾರ್‌ ಇದ್ದಾರೆ, ಅವರು ಸರಿ ಮಾಡ್ತಾರೆ’ ಎಂದು ನಿಟ್ಟುಸಿರು ಬಿಡುತ್ತಿದ್ದ ಮಂದಿಗೆ ಮುಂದೆ ಹೇಗೋ ಎಂಬ ಪ್ರಶ್ನೆ ಕಾಡುತ್ತಿದೆ.

ಚಿತ್ರರಂಗದ ಹಾಗೂ ಚಿತ್ರರಂಗದ ಮಂದಿಯ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸುತ್ತಾ ಅಂಬರೀಶ್‌ ಚಿತ್ರರಂಗದ ಟ್ರಬಲ್‌ಶೂಟರ್‌ ಎನಿಸಿಕೊಂಡಿದ್ದೇ ಈ ಪ್ರಶ್ನೆಗೆ ಕಾರಣ. ಕಲರ್‌ಫ‌ುಲ್‌ ವ್ಯಕ್ತಿತ್ವದ, ಖಡಕ್‌ ನುಡಿಯ, ಮೃದು ಮನಸಿನ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅಂಬರೀಶ್‌ ಕನ್ನಡ ಚಿತ್ರರಂಗದಲ್ಲಿದ್ದಾರೆ, ಎಲ್ಲರ ಜೊತೆ ಆತ್ಮೀಯವಾಗಿ ಬೆರೆಯುತ್ತಿದ್ದಾರೆಂಬುದೇ ಒಂದು ಹೆಮ್ಮೆಯಾಗಿತ್ತು.

ಅದಕ್ಕೆ ಪೂರಕವಾಗಿ ಅಂಬಿ ಕೂಡಾ ಮುನಿಸಿಕೊಳ್ಳದೇ, ತುಂಬಾ ಪ್ರೀತಿಯಿಂದಲೇ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಿದ್ದರು. ಅಂಬರೀಶ್‌ಗೆ ಸ್ಟಾರ್‌ಗಳು ಎಷ್ಟು ಆತ್ಮೀಯರಾಗಿದ್ದರೋ, ಚಿತ್ರರಂಗಕ್ಕೆ ಆಗಷ್ಟೇ ಬಂದ ಹೊಸಬರು ಕೂಡಾ ಅಂಬಿಯವರನ್ನು ಪ್ರೀತಿಸುತ್ತಿದ್ದರು. ಆ ಪ್ರೀತಿಗೆ ಕಾರಣ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದ ಹೊಸಬರಿಗೆ ಅಂಬರೀಶ್‌ ನೀಡುತ್ತಿದ್ದ ಪ್ರೋತ್ಸಾಹ. ಹೊಸಬರ ಅದೆಷ್ಟೋ ಸಿನಿಮಾ ಕಾರ್ಯಕ್ರಮಗಳಿಗೆ ಹೋಗಿ ಪ್ರೋತ್ಸಾಹ ನೀಡುತ್ತಿದ್ದರು.

ತಮ್ಮ ಸಿನಿಮಾ ಮುಹೂರ್ತದ ಮೊದಲ ಆಹ್ವಾನ ಪತ್ರಿಕೆಯನ್ನು ಅಂಬರೀಶ್‌ ಅವರಿಗೆ ನೀಡಬೇಕು, ಅವರಿಂದ ಆಶೀರ್ವಾದ ಪಡೆಯಬೇಕು ಎಂದು ಬಯಸುತ್ತಿದ್ದ ಹೊಸಬರ ಮುಖ ಮಂಕಾಗಿದೆ. ನೀವೆಷ್ಟು ಸಂಪಾದಿಸಿದ್ದೀರಿ ಎನ್ನುವುದಕ್ಕಿಂತ ನೀವು ಸಂಪಾ ದಿಸಿದ ಅಭಿಮಾನ, ಸ್ನೇಹ, ಆತ್ಮೀಯತೆ ಎಂಥದ್ದು ಎಂಬುದು ಮುಖ್ಯವಾಗುತ್ತದೆ.

ಅಂಬರೀಶ್‌ ಸಂಪಾದಿಸಿದ ಜನರ ಸ್ನೇಹ, ಅಭಿಮಾನ, ಪ್ರೀತಿ ಯಾವ ಮಟ್ಟದ್ದು, ಅವರ ವ್ಯಕ್ತಿತ್ವ ಏನು ಎಂಬುದಕ್ಕೆ ಅಂಬರೀಶ್‌ ಅವರ ಅಂತಿಮ ಯಾತ್ರೆ ಸಾಕ್ಷಿಯಾಯಿತು. ಶನಿವಾರ ರಾತ್ರಿ ಅಂಬರೀಶ್‌ ಅವರ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆ ಅವರ ಅಂತಿಮ ದರ್ಶನ ಪಡೆಯಲು ಲಕ್ಷೋಪಾದಿಯಲ್ಲಿ ಅಭಿಮಾನಿಗಳು, ಆಪ್ತರು, ಹಿತೈಷಿಗಳು ಆಗಮಿಸಿದರು. ಅದಕ್ಕೆ ಕಾರಣ ಅಂಬಿ ಅವರ ನೇರನಡೆ, ನುಡಿ ಹಾಗೂ ವರ್ಣರಂಜಿತ ವ್ಯಕ್ತಿತ್ವ.

ಅದರಲ್ಲೂ ಚಿತ್ರರಂಗದ ಮಂದಿ ಅಂಬರೀಶ್‌ ಅವರ ಮೇಲಿಟ್ಟಿರುವ, ಪ್ರೀತಿ, ಅಭಿಮಾನ ಅವರ ಅಂತ್ಯಕ್ರಿಯೆಯಲ್ಲಿ ಎದ್ದು ಕಾಣುತ್ತಿತ್ತು. ತಮ್ಮ ಕುಟುಂಬದ ಯಜಮಾನನ್ನು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡಬೇಕು ಎಂಬ ಭಾವದೊಂದಿಗೆ ಕನ್ನಡ ಚಿತ್ರರಂಗದ ಬಹುತೇಕ ಎಲ್ಲರೂ ತೊಡಗಿಸಿಕೊಂಡಿದ್ದರು. ಪ್ರತಿಯೊಬ್ಬರು ಯಜಮಾನನ್ನು ಕಳೆದುಕೊಂಡ ನೋವು, ಅನಾಥ ಭಾವದೊಂದಿಗೆ ರೆಬೆಲ್‌ಸ್ಟಾರ್‌ಗೆ ಅಂತಿಮ ನಮನ ಸಲ್ಲಿಸಿದರು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.