ವಿಲನ್‌ ತಂಡದ ಮೇಲೆ ಸುದೀಪ್‌ ಬೇಸರ?


Team Udayavani, Dec 8, 2018, 11:11 AM IST

villain.jpg

ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಬಹುನಿರೀಕ್ಷೆ ಹುಟ್ಟಿಸಿದ ಚಿತ್ರಗಳಲ್ಲಿ “ದಿ ವಿಲನ್‌’ ಕೂಡ ಒಂದು. ಶಿವರಾಜಕುಮಾರ್‌ ಹಾಗೂ ಸುದೀಪ್‌ ಮೊದಲ ಬಾರಿಗೆ ಜೊತೆಯಾಗಿ ನಟಿಸಿದ ಸಿನಿಮಾ ಎಂಬುದು ಒಂದು ಕಾರಣವಾದರೆ, ಆರು ವರ್ಷಗಳ ನಂತರ ಪ್ರೇಮ್‌ ನಿರ್ದೇಶನ ಮಾಡಿದ ಸಿನಿಮಾ ಎಂಬುದು ಇನ್ನೊಂದು ಕಾರಣ. ಹೀಗೆ ನಿರೀಕ್ಷೆಗಳ ಮೂಟೆಯೊಂದಿಗೆ ಬಂದ ಚಿತ್ರ ಕಲೆಕ್ಷನ್‌ನಲ್ಲಿ ಜೋರು ಸದ್ದು ಮಾಡಿತು.

ಆರಂಭದಲ್ಲಿ ಚಿತ್ರತಂಡ ಕೂಡಾ ಖುಷಿಯಿಂದ ಚಿತ್ರದ ಕಲೆಕ್ಷನ್‌, ಕನ್ನಡ ಸಿನಿಮಾವೊಂದು ಈ ಮಟ್ಟದ ಕಲೆಕ್ಷನ್‌ ಮಾಡಿದ ರೀತಿಯ ಬಗ್ಗೆ ಮಾತನಾಡಿತು. ಈಗ ಚಿತ್ರ 50 ದಿನ ಪೂರೈಸಿದೆ. ಆದರೆ, ಆ ಸಂಭ್ರಮ ಚಿತ್ರತಂಡದಲ್ಲಿ ಕಾಣುತ್ತಿಲ್ಲ. ಅಭಿಮಾನಿಗಳಷ್ಟೇ ಫೇಸ್‌ಬುಕ್‌, ಟ್ವೀಟರ್‌ನಲ್ಲಿ “ದಿ ವಿಲನ್‌’ ಪೋಸ್ಟರ್‌ ಹಾಕುತ್ತಾ ಸಂಭ್ರಮಿಸುತ್ತಿದ್ದಾರೆ. ಚಿತ್ರವೊಂದು 50 ದಿನ ಓಡಿದರೂ ಅದಕ್ಕೆ ಸಂಬಂಧಪಟ್ಟವರು ಆಸಕ್ತಿ ತೋರಿಸದೇ ಇರುವುದು ಸುದೀಪ್‌ ಅವರಿಗೆ ಬೇಸರ ತಂದಂತಿದೆ.

ಸುದೀಪ್‌ ತಮ್ಮ ಅಭಿಮಾನಿಯೊಬ್ಬರಿಗೆ ಉತ್ತರಿಸಿದ ಟ್ವೀಟರ್‌ನಲ್ಲಿ ಆ ಬೇಸರ ಎದ್ದು ಕಾಣುತ್ತಿದೆ. ಟ್ವೀಟರ್‌ನಲ್ಲೊಬ್ಬರು “ದಿ ವಿಲನ್‌’ ಚಿತ್ರದ 50 ದಿನ ಸಂಭ್ರಮದ ಕುರಿತಾಗಿ ಪೋಸ್ಟರ್‌ವೊಂದನ್ನು ಡಿಸೈನ್‌ ಮಾಡಿ ಅದನ್ನು ಸುದೀಪ್‌ ಅವರೊಂದಿಗೆ ಹಂಚಿಕೊಂಡಿದ್ದರು. ಇದಕ್ಕೆ ಉತ್ತರಿಸಿರುವ ಸುದೀಪ್‌, “ನೀವುಗಳೆಲ್ಲ ಪ್ರೀತಿಯಿಂದ ಪೋಸ್ಟರ್‌ ಮಾಡುತ್ತಿರುವುದನ್ನು ನೋಡಿ ಖುಷಿಯಾಗುತ್ತಿದೆ.

ಆದರೆ, ಚಿತ್ರಕ್ಕೆ ಸಂಬಂಧಪಟ್ಟವರು ಕಾರಣಾಂತಗಳಿಂದ ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ’ ಎಂದು ಟ್ವೀಟ್‌ ಮಾಡಿದ್ದಾರೆ. ಜೊತೆಗೆ, “ನಾನು ಯಾವತ್ತೂ ಹೇಳುವಂತೆ, ನಮ್ಮ ಸುತ್ತಮುತ್ತ ಅನೇಕ ಪಾಠಗಳಿರುತ್ತವೆ. ಅವುಗಳಿಂದ ಪಾಠ ಕಲಿತು ಮುಂದೆ ಸಾಗುತ್ತಿರಬೇಕು. ವಿಲನ್‌ ಸಿನಿಮಾ ಸಾಕಷ್ಟು ಒಳ್ಳೆಯ ನೆನಪುಗಳನ್ನು ನನಗೆ ಕೊಟ್ಟಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಈ ಮೂಲಕ ಚಿತ್ರ 50 ದಿನ ಪೂರೈಸಿದರೂ ಚಿತ್ರಕ್ಕೆ ಸಂಬಂಧಿಸಿದವರು ಆಸಕ್ತಿ ತೋರಿಸುತ್ತಿಲ್ಲ ಎಂಬ ಬೇಸರವನ್ನು ಸುದೀಪ್‌ ಹೊರಹಾಕಿದ್ದಾರೆ. 

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.