ಶರಣರ ಮುಂದೆ ಎಲ್ಲವೂ ಗೌಣ


Team Udayavani, Dec 11, 2018, 11:56 AM IST

sharan-1.jpg

ಕನ್ನಡದಲ್ಲಿ ಪ್ರತಿಯೊಬ್ಬ ನಾಯಕ ನಟನಿಗೂ ಅವರವರ ಅಭಿಮಾನಿಗಳು ಒಂದೊಂದು ಬಿರುದು ಕೊಡುವ ಮೂಲಕ ಪ್ರೀತಿಯಿಂದ ಕರೆಯುತ್ತಾರೆ. ಬಹುತೇಕ ಸ್ಟಾರ್‌ ನಟರಿಂದ ಹಿಡಿದು, ಈಗೀಗ ಸಿನಿಮಾಗೆ ಎಂಟ್ರಿಕೊಡುತ್ತಿರುವ ಯುವ ನಾಯಕರೂ ಸಹ ಒಂದೊಂದು ಬಿರುದು ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ಬಹುತೇಕ ನಟರ ಅಭಿಮಾನಿಗಳು ಅಭಿಮಾನದಿಂದ “ಸ್ಟಾರ್‌’ ಅಂತ ಕರೆಯುವಾಗ, ಶರಣ್‌ ಮಾತ್ರ ಅದರಿಂದ ಬಲು ದೂರವೇ ಉಳಿದಿದ್ದಾರೆ.

ಹೌದು, ಸಾಲು ಸಾಲು ಯಶಸ್ವಿ ಚಿತ್ರಗಳನ್ನು ಕೊಟ್ಟರೂ ಈ ತಮ್ಮ ಹೆಸರಿನ ಮುಂದೆ ಯಾವುದೇ ಸ್ಟಾರ್‌ ಬಿರುದು ಬೇಡವೇ ಬೇಡ ಅಂತ ದೂರ ಸರಿಯುತ್ತಿದ್ದಾರೆ ಶರಣ್‌. ತಮ್ಮ ಹಾಸ್ಯ ಚಿತ್ರಗಳ ಮೂಲಕ ಪ್ರೇಕ್ಷಕರಿಗೆ ಕಚಗುಳಿ ಕೊಡುತ್ತ, ಮನರಂಜಿಸುತ್ತಲೇ ಇರುವ ಶರಣ್‌ಗೆ ಯಾವ ಬಿರುದೂ ಬೇಕಿಲ್ಲ. ಅಭಿಮಾನಿಗಳ ಚಪ್ಪಾಳೆ, ಶಿಳ್ಳೆ, ಪ್ರೀತಿ ಮಾತ್ರ ಸಾಕು ಎಂಬುದು ಅವರ ಮಾತು.

ಇತ್ತೀಚೆಗೆ ಬರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುತೇಕ ಯುವ ನಟರು ಸೇರಿದಂತೆ ಬಹುತೇಕರಿಗೆ ತಮ ಹೆಸರ ಮುಂದೆ ಆ “ಸ್ಟಾರ್‌’, ಈ “ಸ್ಟಾರ್‌’ ಎಂಬ ಬಿರುದು ಇದೆ. ಅದು ಅಭಿಮಾನಿಗಳೇ ಕೊಟ್ಟ ಪ್ರೀತಿಯ ಬಿರುದು. ಹೀಗಿರುವಾಗ, ಈವರೆಗೆ ಕನ್ನಡ ಚಿತ್ರರಂಗದಲ್ಲಿ ಸುಮಾರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದ ಶರಣ್‌, ಕಳೆದ ಏಳೆಂಟು ವರ್ಷಗಳಿಂದ ಸಾಲು ಸಾಲು ಹಾಸ್ಯಮಯ ಚಿತ್ರಗಳನ್ನು ಕೊಟ್ಟಿರುವ ಶರಣ್‌ ಯಾಕೆ ತಮ್ಮ ಹೆಸರಿನ ಮುಂದೆ ಯಾವುದೇ “ಸ್ಟಾರ್‌’ ಬಿರುದು ಹಾಕಿಕೊಳ್ಳುತ್ತಿಲ್ಲ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಅದಕ್ಕೆ ತಮ್ಮದೇ ಧಾಟಿಯಲ್ಲಿ ಶರಣ್‌ ಉತ್ತರಿಸಿದ್ದು ಹೀಗೆ.

“ನನಗೆ ಯಾವುದೇ ಹೀರೋಯಿಸಂ ಮೇಲೆ ನಂಬಿಕೆ ಇಲ್ಲ. ನನ್ನ ಪ್ರತಿ ಚಿತ್ರದ ಟೈಟಲ್‌ ಕಾರ್ಡ್‌ನಲ್ಲೂ ಶರಣ್‌ ಅಂತಾನೇ ಇರುತ್ತದೆ. ಪ್ರತಿಸಲ ಚಿತ್ರದ ಟೈಟಲ್‌ ಮಾಡುವಾಗ ಚಿತ್ರತಂಡದವರು, ನಿಮ್ಮ ಹೆಸರಿನ ಮುಂದೆ ಏನಾದ್ರೂ ಸೇರಿಸೋಣವಾ? ಅಂಥ ಕೇಳುತ್ತಾರೆ. ಆದರೆ, ನಾನೇ ಅದೆಲ್ಲ ಏನೂ ಬೇಡ ಅಂತ ಹೇಳುತ್ತೇನೆ. ಯಾಕೆಂದರೆ, ಈ ಹೆಸರಿನ ಹಿಂದೆ ಒಂದು ಕಥೆ ಇದೆ’ ಎನ್ನುತ್ತಲೇ ಅದರ ಒಂದು ಸಣ್ಣ ಕಥೆ ಹೇಳುತ್ತಾರೆ. 

“ಗುಬ್ಬಿ ನಾಟಕ ಕಂಪೆನಿ ಯಾದಗಿರಿ ಕ್ಯಾಂಪ್‌ನಲ್ಲಿರುವಾಗ ನನ್ನ ತಾಯಿ ಗರ್ಭಿಣಿಯಾಗಿದ್ದರಂತೆ. ನಾನು ಅವರ ಹೊಟ್ಟೆಯಲ್ಲಿದ್ದಾಗ, ಏನಾಯ್ತೋ, ಏನೋ, ನನ್ನ ತಾಯಿಯನ್ನು ಪರೀಕ್ಷಿಸಿದ ಡಾಕ್ಟರ್‌ ಮಗು ಡೇಂಜರ್‌ ಸ್ಥಿತಿಯಲ್ಲಿದೆ. ತೆಗೆಸಿಬಿಡುವುದು ಒಳ್ಳೆಯದು. ಇಲ್ಲದಿದ್ರೆ ತಾಯಿ-ಮಗು ಇಬ್ಬರ ಜೀವಕ್ಕೂ ಅಪಾಯ ಎಂದರಂತೆ. ಆದರೆ, ನಮ್ಮ ತಾಯಿ ಮಾತ್ರ ಗರ್ಭದಲ್ಲಿದ್ದ ಮಗುವನ್ನು ತೆಗೆಸಲು ತಯಾರಿರಲಿಲ್ಲ.

ಕೂಡಲೇ ಅಲ್ಲಿಯೇ ಇದ್ದ ಶ್ರೀ ಶರಣ ಬಸವೇಶ್ವರ ಸನ್ನಿಧಿಗೆ ಹೋಗಿ ಯಾವುದೇ ತೊಂದರೆಯಾಗದೆ ಮಗು ಹುಟ್ಟಿದರೆ, ಅದಕ್ಕೆ ನಿನ್ನ ಹೆಸರು ಇಡುತ್ತೇನೆ ಎಂದು ಹರಕೆ ಕಟ್ಟಿಕೊಂಡು ಬಂದಿದ್ದಾರೆ. ಅದಾದ ನಂತರವೇ ನಾನು ಹುಟ್ಟಿದ್ದೇನೆ. ನಮ್ಮ ತಾಯಿಯ ಹರಕೆಯಂತೆ ನನಗೆ ಶರಣ ಅಂಥ ಹೆಸರಿಟ್ಟಿದ್ದಾರೆ. ಯಾವುದೇ ನಕ್ಷತ್ರ, ಗಳಿಗೆ, ಜಾತಕ ಅಂತ ನೋಡದೆ ಗರ್ಭದಲ್ಲಿರುವಾಗಲೇ ಈ ಹೆಸರು ಇಟ್ಟಿದ್ದರು. ಶರಣ್‌ ಎಂಬ ಹೆಸರೆ ಇಲ್ಲಿಯವರೆಗೆ ತುಂಬ ತಂದುಕೊಟ್ಟಿದೆ. ಇದಕ್ಕಿಂತ ಹೆಸರಿನ ಹಿಂದೆ ಮುಂದೆ ಏನು ಬೇಕು ಅಂಥ ಅನಿಸಲಿಲ್ಲ’ ಎಂದು ತಮ್ಮ ಹೆಸರಿನ ಹಿಂದಿನ ವೃತ್ತಾಂತವನ್ನು ತೆರೆದಿಡುತ್ತಾರೆ ಶರಣ್‌.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.