ಗಿಣಿ ಕಥೆ ಕೇಳಿದ ಧ್ರುವಸರ್ಜಾ
Team Udayavani, Dec 12, 2018, 11:35 AM IST
ಬಹುತೇಕ ರಂಗಭೂಮಿ ಕಲಾವಿದರೇ ಸೇರಿ ಮಾಡಿರುವ ‘ಗಿಣಿ ಹೇಳಿದ ಕಥೆ’ ಚಿತ್ರಕ್ಕೆ ನಟ ಧ್ರುವಸರ್ಜಾ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. ಬುದ್ಧ ಚಿತ್ರಾಲಯ ಬ್ಯಾನರ್ನಲ್ಲಿ ದೇವರಾಜು ನಿರ್ಮಿಸಿರುವ ‘ಗಿಣಿ ಹೇಳಿದ ಕಥೆ’ ಚಿತ್ರಕ್ಕೆ ನಾಗರಾಜು ಉಪ್ಪುಂದ ಅವರು ನಿರ್ದೇಶಕರು.
ಛಾಯಾಗ್ರಹಣ ಕೂಡ ಅವರದೇ. ಇನ್ನು, ಇತ್ತೀಚೆಗೆ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೆಟ್ ನೀಡಿದೆ. ಹಿತನ್ ಹಾಸನ್ ಚಿತ್ರಕ್ಕೆ ಸಂಗೀತ ನೀಡಿದರೆ, ದೇವ್ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಜಾಗ್ವಾರ್ ಸಣ್ಣಪ್ಪ ಸಾಹಸವಿದೆ. ರವಿಚಂದ್ರ ಕುಮಾರ್ ಅವರ ಸಂಕಲನವಿದೆ.
ಚಿತ್ರದಲ್ಲಿ ದೇವ್, ಗೀತಾಂಜಲಿ, ಮಾಲತೇಶ್, ನೀತುರಾಯ್, ಹಾವೇರಿ ಶ್ರೀಧರ್, ಮಹಾಂತೇಶ್ ಸೇರಿದಂತೆ ಇನ್ನೂ ಹಲವು ಕಲಾವಿದರು ನಟಿಸಿದ್ದಾರೆ. ಅಮದಹಾಗೆ, “ಗಿಣಿ ಹೇಳಿದ ಕಥೆ’ ಒಂದು ಟ್ಯಾಕ್ಸಿ ಡ್ರೈವರ್ ಒಬ್ಬನ ಪ್ರಯಾಣದಲ್ಲಿ ನಡೆಯುವ ಕಥೆ. ಚಿತ್ರದಲ್ಲಿ 5 ಹಾಡುಗಳಿದ್ದು, ಬೆಂಗಳೂರು, ಮೈಸೂರು , ಮಡಿಕೇರಿ, ದಕ್ಷಿಣ ಕನ್ನಡ ಸೇರಿದಂತೆ ಇತರೆಡೆ ಚಿತ್ರೀಕರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ