ಪರದೇಸಿ ಹುಡುಗನ ಪರದಾಟ


Team Udayavani, Dec 12, 2018, 11:35 AM IST

paradesi-care-london-3.jpg

ವಿಜಯರಾಘವೇಂದ್ರ ಮೊನ್ನೆಯಷ್ಟೇ ತಮ್ಮ ಅದೃಷ್ಟ ಪರೀಕ್ಷಿಸಿದ್ದರು. ಅಂದರೆ, “ಕಿಸ್ಮತ್‌’ ಮೂಲಕ ನಿರ್ದೇಶಕರಾಗಿ ಕಾಣಿಸಿಕೊಂಡು ಕೊಂಚ ಮಟ್ಟಿಗೆ ಸೈ ಎನಿಸಿಕೊಂಡಿದ್ದರು. ಈಗ ಮತ್ತೂಂದು “ಅದೃಷ್ಟ’ ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ಹೌದು, “ಕಿಸ್ಮತ್‌’ ನಂತರ  ಅವರು ಅಭಿನಯಿಸಿರುವ “ಪರದೇಸಿ ಕೇರಾಫ್ ಲಂಡನ್‌’ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ರಾಜಶೇಖರ್‌ ನಿರ್ದೇಶನದ ಈ ಚಿತ್ರ ಎಲ್ಲವೂ ಅಂದುಕೊಂಡಂತೆ ನಡೆದರೆ, ಡಿಸೆಂಬರ್‌ ಅಂತ್ಯದಲ್ಲಿ ತೆರೆಗೆ ಬರಲಿದೆ.

ಚಿತ್ರದ ಶೀರ್ಷಿಕೆ ಕೇಳಿದರೆ, ಇದೊಂದು ಫ್ಯಾಮಿಲಿ ಡ್ರಾಮಾ ಎನಿಸುವುದುಂಟು. ಅದರೊಂದಿಗೆ ಪಕ್ಕಾ ಮಾಸ್‌ ಮತ್ತು ಕ್ಲಾಸ್‌ ಅಂಶಗಳೂ ಚಿತ್ರದಲ್ಲಿವೆ. ಜೊತೆಗೆ ಆರಂಭದಿಂದ ಅಂತ್ಯದವರೆಗೂ ಹಾಸ್ಯದೊಂದಿಗೆ ಚಿತ್ರದ ಕಥೆ ಸಾಗಲಿದೆ. ಕೊನೆಗೊಂದು ತಿರುವು ಬರಲಿದ್ದು, ಅದೇ ಚಿತ್ರದ ಜೀವಾಳ ಎಂಬುದು ಚಿತ್ರತಂಡದ ಮಾತು. ಈಗಾಗಲೇ ಟ್ರೇಲರ್‌ ಮತ್ತು ಹಾಡುಗಳಿಗೆ ಮೆಚ್ಚುಗೆ ಸಿಕ್ಕಿದೆ. ಹಾಗಾಗಿ ಚಿತ್ರತಂಡ ಚಿತ್ರ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ.

ಶೀರ್ಷಿಕೆ ಕೇಳಿದವರಿಗೆ, ಇದು ಜರ್ನಿಯ ಕಥೆ ಇರಬಹುದು ಅಂತೆನಿಸಿದರೂ ಇಲ್ಲೊಂದು ಪಕ್ಕಾ ಸೆಂಟಿಮೆಂಟ್‌ ಇದೆ. ನಾಯಕ ಇಲ್ಲಿ ಪರದೇಸಿಯಾಗಿರುತ್ತಾನಾ? ಅವನು ಲಂಡನ್‌ನಿಂದ ಬಂದು ಪ್ರೀತಿಗೆ ಬೀಳ್ತಾನಾ, ಆ ಪ್ರೀತಿ ಮೂಲಕ ಏನೆಲ್ಲಾ ಮಾಡುತ್ತಾನೆ, ಎಷ್ಟೆಲ್ಲಾ ಪರದಾಟಕ್ಕೆ ಸಿಲುಕುತ್ತಾನೆ ಎಂಬುದು ಸಸ್ಪೆನ್ಸ್‌. ಈ ಚಿತ್ರವನ್ನು ಬದರಿನಾರಾಯಣ ನಿರ್ಮಿಸಿದ್ದಾರೆ.

ಇದು ಅವರ ಮೊದಲ ಚಿತ್ರ. ಕಥೆ ಮೇಲಿನ ನಂಬಿಕೆಯಿಂದ ನಿರ್ಮಾಪಕರು ಹಣ ಹಾಕಿದ್ದಾರಂತೆ. ಚಿತ್ರ ಮೂಡಿಬಂದಿರುವ ರೀತಿ ಕಂಡು ಖುಷಿಗೊಂಡಿರುವ ನಿರ್ಮಾಪಕರು ಚಿತ್ರವನ್ನು ಬಿಡುಗಡೆ ಮಾಡಲು ಉತ್ಸಾಹದಲ್ಲಿದ್ದಾರೆ. ಈ ಚಿತ್ರದಲ್ಲಿ ರಾಶಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ತಬಲಾನಾಣಿ, ಪೆಟ್ರೋಲ್‌ ಪ್ರಸನ್ನ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ವೀರ್‌ ಸಮರ್ಥ್ ಸಂಗೀತವಿದೆ. ವಿ.ನಾಗೇಂದ್ರ ಪ್ರಸಾದ್‌, ಕವಿರಾಜ್‌, ಯೋಗರಾಜ ಭಟ್‌, ಶಿವು ಬೆರಗಿ ಗೀತೆ ಬರೆದಿದ್ದಾರೆ. ಶಶಾಂಕ್‌ ಶೇಷಗಿರಿ, ವಿಜಯಪ್ರಕಾಶ್‌, ರವೀಂದ್ರ ಸೊರಗಾವಿ, ಶಮಿತಾ ಮಲಾ°ಡ್‌, ಅನುರಾಧ ಭಟ್‌, ಹೇಮಂತ್‌, ಹೊಸ ಪ್ರತಿಭೆ ಗಂಗಮ್ಮ ಹಾಡಿದ್ದಾರೆ. ಚಿದಾನಂದ ಛಾಯಾಗ್ರಹಣ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಸಿರಗುಪ್ಪ ಸೇರಿದಂತೆ ಇತರೆ ಕಡೆ ಚಿತ್ರೀಕರಿಸಲಾಗಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.