ದರ್ಶನ್‌ ರಾಬರ್ಟ್‌ ಪೋಸ್ಟರ್‌ ಬಂತು


Team Udayavani, Dec 26, 2018, 11:20 AM IST

robert.jpg

ತರುಣ್‌ ಸುಧೀರ್‌ ನಿರ್ದೇಶನದ ಚಿತ್ರದಲ್ಲಿ ದರ್ಶನ್‌ ಅಭಿನಯಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತು. ಆ ಚಿತ್ರದ ಶೀರ್ಷಿಕೆ ಬಗ್ಗೆ ಒಂದಷ್ಟು ಅಂತೆ-ಕಂತೆಗಳಿದ್ದವು. ಅದಕ್ಕೀಗ ಚಿತ್ರತಂಡ ತೆರೆ ಎಳೆದಿದೆ. ಹೌದು, ಕ್ರಿಸ್ಮಸ್‌ ಹಬ್ಬದ ದಿನದಂದ ದರ್ಶನ್‌ ತಮ್ಮ ಅಭಿಮಾನಿಗಳಿಗೆ “ರಾಬರ್ಟ್‌’ ಚಿತ್ರದ ಶೀರ್ಷಿಕೆ ಜೊತೆಗೊಂದು ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ವಿಶೇಷ ಕೊಡುಗೆ ನೀಡಿದ್ದಾರೆ. ಮಂಗಳವಾರ ತಮ್ಮ ಟ್ವಿಟರ್‌ ಹಾಗು ಫೇಸ್‌ಬುಕ್‌ ಖಾತೆಯಲ್ಲಿ ಅವರು “ರಾಬರ್ಟ್‌’ ಶೀರ್ಷಿಕೆ ಇರುವ ಚಿತ್ರದ ಪೋಸ್ಟರ್‌ ಅನಾವರಣಗೊಳಿಸಿದ್ದಾರೆ.

ಸಾಕಷ್ಟು ಕುತೂಹಲ ಕೆರಳಿಸಿದ್ದ ದರ್ಶನ್‌ ಹಾಗೂ ತರುಣ್‌ ಸುಧೀರ್‌ ಕಾಂಬಿನೇಷನ್‌ನ ಚಿತ್ರಕ್ಕೆ ಅಂತೂ ಶೀರ್ಷಿಕೆ ಪಕ್ಕಾ ಆಗಿದೆ. ಮಂಗಳವಾರ ಬೆಳಗ್ಗೆ ದರ್ಶನ್‌ ಅವರ ಫೇಸ್‌ಬುಕ್‌, ಟ್ವೀಟರ್‌ ಖಾತೆಯಲ್ಲಿ ಹೊಸ ಚಿತ್ರದ ಟೈಟಲ್‌ ಪೋಸ್ಟರ್‌ ಲಾಂಚ್‌ ಆಗಿದ್ದೇ, ತಡ, ಅವರ ಅಭಿಮಾನಿ ವರ್ಗ ಮೆಚ್ಚುಗೆ ಸೂಚಿಸಿದ್ದಲ್ಲದೆ, ಸಾಕಷ್ಟು ಕಾಮೆಂಟ್ಸ್‌ ಮೂಲಕ ಶುಭಾಶಯಗಳ ಸುರಿಮಳೆಗೈದಿದೆ. ಈ ಹಿಂದೆ ತರುಣ್‌ ಸುಧೀರ್‌ ನಿರ್ದೇಶನದ “ಚೌಕ’ ಚಿತ್ರದಲ್ಲಿ ದರ್ಶನ್‌ ಅವರು ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಅಲ್ಲಿ “ರಾಬರ್ಟ್‌’ ಎಂಬ ಪಾತ್ರ ಅವರದ್ದಾಗಿತ್ತು. ಈಗ ಅದೇ ಹೆಸರನ್ನು ಚಿತ್ರತಂಡ ಶೀರ್ಷಿಕೆಯನ್ನಾಗಿಸಿದೆ.

“ರಾಬರ್ಟ್‌’ ದರ್ಶನ್‌ ಅವರ 53ನೇ ಚಿತ್ರವಾಗಿದ್ದು, ಕಳೆದ ಬಾರಿ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆ ಮಾಡಡಲಾಗಿತ್ತು. ಆಗ ಆ ಪೋಸ್ಟರ್‌ನಲ್ಲಿ “ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು’ ಎಂಬ ಪಂಚಿಂಗ್‌ ಡೈಲಾಗ್‌ ಹರಿಬಿಡಲಾಗಿತ್ತು. ಆ ಡೈಲಾಗ್‌ ಸಖತ್‌ ವೈರಲ್‌ ಕೂಡ ಆಗಿತ್ತು. ಈಗ ಚಿತ್ರದ ಶೀರ್ಷಿಕೆ “ರಾಬರ್ಟ್‌’ ಎಂಬುದು ಪಕ್ಕಾ ಆಗಿದೆ. ಇನ್ನೊಂದು ವಿಶೇಷವೆಂದರೆ, ಪೋಸ್ಟರ್‌ವೊಂದು ಸಾಕಷ್ಟು ಕುತೂಹಲ ಕೆರಳಿಸಿದೆ.

ಅಷ್ಟೇ ಅಲ್ಲ, ಪೋಸ್ಟರ್‌ನಲ್ಲಿ ಆಂಜನೇಯ ತನ್ನ ಹೆಗಲ ಮೇಲೆ ಬಾಲ ರಾಮನನ್ನು ಕೂರಿಸಿಕೊಂಡಿದ್ದು, ಆ ಬಾಲ ರಾಮ ಕೈಯಲ್ಲಿ ಬಿಲ್ಲು, ಬಾಣ ಹಿಡಿದು ಗುರಿ ಇಟ್ಟಿರುವ ಭಾವಚಿತ್ರವೊಂದು ಅನೇಕ ಚರ್ಚೆಗೆ ಕಾರಣವಾಗಿದೆ. ಇದೊಂದು ಮಗುವಿನ ಜೊತೆ ಆಟ ಆಡಿಕೊಂಡಿರುವ ವಿಶೇಷವಾಗಿರುವ ಕಥೆ ಎಂದೇ ಹೇಳಲಾಗುತ್ತಿದೆ. ಆದರೂ, ಚಿತ್ರ ಬರುವವರೆಗೂ ಕಾಯಲೇಬೇಕು. ಅಂದಹಾಗೆ, ಈ ಚಿತ್ರಕ್ಕೆ ಉಮಾಪತಿ ನಿರ್ಮಾಪಕರು.”ರಾಬರ್ಟ್‌’ ಚಿತ್ರದಲ್ಲಿ ದರ್ಶನ್‌ ಅವರದು ವಿಶೇಷ ಗೆಟಪ್‌ ಇದ್ದು, ಅವರಿಲ್ಲಿ ಗಡ್ಡ ಬಿಟ್ಟಿರುವ ರಾಬರ್ಟ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2019 ರಲ್ಲಿ “ರಾಬರ್ಟ್‌’ಗೆ ಚಿತ್ರೀಕರಣ ನಡೆಯಲಿದೆ.

ರಾಬರ್ಟ್‌ನಲ್ಲಿ ದರ್ಶನ್‌ ಪುತ್ರ ಇರ್ತಾರಾ?: “ರಾಬರ್ಟ್‌’ ಚಿತ್ರದಲ್ಲಿ ಮಗು ಜೊತೆಗಿನ ಪಾತ್ರ ಮಾಡುತ್ತಿದ್ದಾರೆ ದರ್ಶನ್‌. ಹಾಗಾದರೆ ಈ ಚಿತ್ರದಲ್ಲಿ ಆ ಮಗು ಪಾತ್ರ ಯಾರು ಮಾಡ್ತಾರಾ? ದರ್ಶನ್‌ ಜೊತೆ ಈಗಾಗಲೇ “ಐರಾವತ’ ಹಾಗೂ “ಯಜಮಾನ’ ಚಿತ್ರಗಳಲ್ಲಿ ಅವರ ಪುತ್ರ ಕಾಣಿಸಿಕೊಂಡಿದ್ದಾರೆ. ಈಗ “ರಾಬರ್ಟ್‌’ ಚಿತ್ರದಲ್ಲೇನಾದರೂ ಕಾಣಿಸಿಕೊಳ್ಳುತ್ತಿದ್ದಾರಾ? ಇದಕ್ಕೆ ಉತ್ತರಿಸುವ ನಿರ್ದೇಶಕ ತರುಣ್‌ ಸುಧೀರ್‌, “ದರ್ಶನ್‌ ಪುತ್ರ ನಟಿಸುವ ಬಗ್ಗೆ ಇಲ್ಲಿವರೆಗೆ ಚಿಂತನೆ ನಡೆದಿಲ್ಲ. ಆರೇಳು ವರ್ಷದ ಮಗುವಿನ ಅಗತ್ಯವಿದೆ. ದರ್ಶನ್‌ ಅವರ ಪುತ್ರನಿಗೆ ಈಗ 10 ವರ್ಷ’ ಎನ್ನುತ್ತಾರೆ. 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.