ದಿಗಂತ್‌ ಈಗ ರಾಮ 


Team Udayavani, Jan 3, 2019, 7:31 AM IST

255.jpg

ನಟ ದಿಗಂತ್‌ ಇತ್ತೀಚೆಗಷ್ಟೇ ನಟಿ ಐಂದ್ರಿತಾ ರೇ ಅವರನ್ನು ಮದುವೆಯಾಗಿದ್ದಾರೆ. ಅದೊಂದು ದೊಡ್ಡ ಸುದ್ದಿಯಂತೂ ಹೌದು. ಈಗ ಮತ್ತೂಂದು ಹೊಸ ಸುದ್ದಿಯನ್ನೂ ಹರಿಬಿಟ್ಟಿದ್ದಾರೆ. ವಿಷಯ ಏನೆಂದರೆ, ಅವರೀಗ ಸದ್ದಿಲ್ಲದೆಯೇ ಹಿಂದಿ ಸಿನಿಮಾ ಮುಗಿಸಿ ಬಂದಿದ್ದಾರೆ. ಹೌದು, “ರಾಮ್‌ ಯುಗ್‌’ ಎಂಬ ಸಿನಿಮಾದಲ್ಲಿ ದಿಗಂತ್‌ ಸದ್ದಿಲ್ಲದೆಯೇ ನಟಿಸಿ ಬಂದಿದ್ದಾರೆ.

ಆ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಬಿಡುಗಡೆ ಕೆಲಸ ಜೋರಾಗಿ ನಡೆಯುತ್ತಿದೆ. ಅಂದಹಾಗೆ, “ರಾಮ್‌ ಯುಗ್‌’ ಚಿತ್ರಕ್ಕೆ ಕುನಾಲ್‌ ಕೋಹ್ಲಿ ನಿರ್ದೇಶಕರು. ಈ ಹಿಂದೆ “ಮುಜ್ಸೇ ದೋಸ್ತಿ ಕರೋಗೆ’, “ಹಮ್‌ ತುಮ್‌’, “ಫ‌ನ್ಹಾ’, “ತೋಡಾ ಪ್ಯಾರ್‌ ತೋಡಾ ಮ್ಯಾಜಿಕ್‌’, “ತೇರಿ ಮೇರಿ ಕಹಾನಿ’, “ಫಿರ್‌ ಸೇ..’, ಹೀಗೆ ಹಲವು ಸೂಪರ್‌ ಹಿಟ್‌ ಚಿತ್ರಗಳನ್ನು ನಿರ್ದೇಶಿಸಿದ್ದ ಕುನಾಲ್‌ ಕೋಹ್ಲಿ, “ರಾಮ್‌ ಯುಗ್‌’ ಚಿತ್ರ ನಿರ್ದೇಶಿಸಿ, ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಇನ್ನು, ಈ ಚಿತ್ರಕ್ಕೆ ಕಮಲೇಶ್‌ ಪಾಂಡೆ ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ ಇವರು “ತೇಜ್ಹಾಬ್‌’, “ಚಾಲ್‌ಬ್ಹಾಜ್‌’, “ರಂಗ್‌ ದೇ ಬಸಂತಿ’ ಮೊದಲಾದ ಚಿತ್ರಗಳಿಗೆ ಚಿತ್ರಕಥೆ ಬರೆದವರು. ಅಂದಹಾಗೆ, ಹಿಂದಿ ಚಿತ್ರದಲ್ಲಿ ನಟಿಸಿದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ದಿಗಂತ್‌, “ನಾನು ಈ ಚಿತ್ರದಲ್ಲಿ ರಾಮನ ಪಾತ್ರ ಮಾಡಿದ್ದೇನೆ.

“ರಾಮ್‌ ಯುಗ್‌’ ಚಿತ್ರ ರಾಮಾಯಣದಲ್ಲಿ ಬರುವ ರಾಮ, ಸೀತೆ, ಲಕ್ಷ್ಮಣ, ಹನುಮಂತ ಹೀಗೆ ಪ್ರಮುಖ ಪಾತ್ರಗಳು ಮತ್ತು ಪ್ರಮುಖ ಸಂಗತಿಗಳ ಸುತ್ತ ಸಾಗಲಿದೆ. ಇನ್ನೊಂದು ವಿಷಯವೆಂದರೆ ಈ ಚಿತ್ರ ಎರಡು ಭಾಗಗಳಲ್ಲಿ ಬರುತ್ತಿದ್ದು, ಹಿಂದಿ ಮಾತ್ರವಲ್ಲದೆ ಭಾರತದ ಬೇರೆ ಬೇರೆ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಸುಮಾರು ಮೂರು ತಿಂಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು, ಬಿಗ್‌ ಬಜೆಟ್‌ನಲ್ಲಿ ಈ ಚಿತ್ರ ತಯಾರಾಗಿದೆ. ಸದ್ಯಕ್ಕೆ ಕಂಪ್ಯೂಟರ್‌ ಗ್ರಾಫಿಕ್ಸ್‌ ಮತ್ತಿತರ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಹೆಚ್ಚಿನ ಸಮಯ ಹಿಡಿಯುತ್ತಿದೆ. ಎಲ್ಲವೂ ಮುಗಿದ ನಂತರ ಚಿತ್ರ ಬಿಡುಗಡೆ’ ಎನ್ನುತ್ತಾರೆ.

ಅಂದಹಾಗೆ, ದಿಗಂತ್‌ ಅವರಿಗೆ ಹಿಂದಿ ಚಿತ್ರರಂಗ ಹೊಸದೇನಲ್ಲ. 2015ರಲ್ಲಿ “ವೆಡ್ಡಿಂಗ್‌ ಪುಲಾವ್‌’ ಎನ್ನುವ ಚಿತ್ರವೊಂದರಲ್ಲಿ ದಿಗಂತ್‌ ಅಭಿನಯಿಸಿದ್ದರು. ಆದರೆ “ಹಿಂದಿನ ಚಿತ್ರಕ್ಕಿಂತ “ರಾಮ್‌ ಯುಗ್‌’ ಸಂಪೂರ್ಣ ವಿಭಿನ್ನ ಅನುಭವ ನೀಡಿದೆ’ ಎನ್ನುವುದು ದಿಗಂತ್‌ ಮಾತು. “ನಮಗೆಲ್ಲ ರಾಮಾಯಣ ಅಂದರೆ ಕಿರೀಟ ತೊಟ್ಟ, ಬಿಲ್ಲು-ಬಾಣ ಹಿಡಿದ ರಾಮನ ಛಾಯೆ ಮನದಲ್ಲಿ ಮೂಡುತ್ತದೆ.

ಆದರೆ ಈ ಚಿತ್ರದಲ್ಲಿ ರಾಮನ ನೋಟವೇ ಸಂಪೂರ್ಣ ವಿಭಿನ್ನವಾಗಿರಲಿದೆ. ಇನ್ನು ಚಿತ್ರದ ಸಂಭಾಷಣೆಗಳು ಕೂಡ ಮಾಮೂಲಿ ಹಿಂದಿಗಿಂತ ತುಂಬಾ ಭಿನ್ನವಾಗಿರಲಿವೆ. ಪಾಳಿ, ಸಂಸ್ಕೃತ ಮಿಶ್ರಿತ ಹಳೆಯ ಹಿಂದಿ ಸಂಭಾಷಣೆಗಳು ಚಿತ್ರದಲ್ಲಿದೆ. ಅಂತಹ ಸಂಭಾಷಣೆ ಹೇಳುವುದೇ ದೊಡ್ಡ ಸವಾಲಾಗಿತ್ತು’ ಎನ್ನುವ ದಿಗಂತ್‌, ಮುಂಬರುವ ಏಪ್ರಿಲ್‌ ಅಥವಾ ಮೇ ವೇಳೆಗೆ “ರಾಮ್‌ ಯುಗ್‌’ ಚಿತ್ರದ ಮೊದಲ ಭಾಗ ತೆರೆಗೆ ಬರಲಿದೆ. ಅದಾದ ಮೂರ್‍ನಾಲ್ಕು ತಿಂಗಳ ಬಳಿಕ ಅದರ ಎರಡನೇ ಭಾಗ ಕೂಡ ತೆರೆಗೆ ಬರಲಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ವೇಳೆಗೆ ಚಿತ್ರದ ಟ್ರೇಲರ್‌ನ್ನು ಅಮೀರ್‌ ಖಾನ್‌ ಬಿಡುಗಡೆ ಮಾಡುವ ಸಾಧ್ಯತೆ ಇದೆ’ ಎನ್ನುತ್ತಾರೆ.

ಫಾರ್ಚೂನರ್‌ ತೆರೆಗೆ: ನಟ ದಿಗಂತ್‌ ಈ ವಾರ “ಫಾರ್ಚುನರ್‌’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಮದುವೆ ಬಳಿಕ ಮೊದಲ ಚಿತ್ರ ತೆರೆ ಕಾಣುತ್ತಿರುವುದರಿಂದ, ದಿಗಂತ್‌ ಅವರಿಗೂ ತಮ್ಮ ಹಿಂದಿನ ಚಿತ್ರಗಳಿಗಿಂತ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿಯೇ ಇದೆ. ತಮ್ಮ ಹಿಂದಿನ ಚಿತ್ರಗಳಿಗಿಂತ “ಫಾರ್ಚೂನರ್‌’ ಚಿತ್ರದ ಬಗ್ಗೆ ದಿಗಂತ್‌ ಕೊಂಚ ಸೀರಿಯಸ್‌ ಆಗಿರುವಂತೆ ಕಾಣುತ್ತದೆ ಅದಕ್ಕೆ ಕಾರಣ ಅವರು ಚಿತ್ರದ ಬಗ್ಗೆ ಆಡಿರುವ ಮಾತುಗಳು.

ಇತ್ತೀಚೆಗೆ ಅವರು ಮದುವೆಯಾಗಿದ್ದಾರೆ. ಅದರ ಹಿಂದೆಯೇ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಇನ್ನು ಹೊಸ ವರ್ಷದ ಆರಂಭದಲ್ಲೇ ಅವರ ಮೊದಲ ಚಿತ್ರ ಬಿಡುಗಡೆಯಾಗುತ್ತಿದೆ. ಇವೆಲ್ಲದರ ಜೊತೆಗೆ ಚಿತ್ರದ ಸಬೆjಕ್ಟ್ ಚೆನ್ನಾಗಿರುವುದರಿಂದ ಸಾಕಷ್ಟು ನಿರೀಕ್ಷೆ ಅವರಿಗಿದೆ. ಇಲ್ಲಿಯವರೆಗೆ ಅವರು ಲವರ್‌ ಬಾಯ್‌ ಥರದ ಪಾತ್ರಗಳನ್ನು ಮಾಡುತ್ತಿದ್ದರು. ಆದರೆ, “ಫಾರ್ಚೂನರ್‌’ನಲ್ಲಿ ಮದುವೆಯಾದ ಹುಡುಗನ ಪಾತ್ರ ಮಾಡಿದ್ದಾರೆ. ಮದುವೆಯಾದ ನಂತರ ಅಂಥದ್ದೆ ಪಾತ್ರ ಮಾಡುವ ಚಾನ್ಸ್‌ ಈ ಚಿತ್ರದಲ್ಲಿ ಸಿಕ್ಕಿರುವುದು ದಿಗಂತ್‌ ಅವರಿಗೆ ಖುಷಿ ಹೆಚ್ಚಿಸಿದೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.