ರಾಮಕೃಷ್ಣ ಡಬಲ್‌ ಸೆಂಚುರಿ


Team Udayavani, Jan 9, 2019, 9:02 AM IST

ramakrishna.jpg

ಹಿರಿಯ ನಟ ರಾಮಕೃಷ್ಣ ಇದೀಗ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರು, “ಸಿನಿಮಾರಂಗದ ದಿಗ್ಗಜರೆಲ್ಲಾ ಆರಂಭದ ದಿನಗಳಲ್ಲಿ ನನ್ನ ಬೆನ್ನುತಟ್ಟಿದ್ದರು. ಅಷ್ಟೇ ಅಲ್ಲ, ಚೆನ್ನಾಗಿ ಕೆಲಸ ಮಾಡು ಎಂದು ಆಶೀರ್ವದಿಸಿದ್ದರು. ಆದರೆ, ನಾನು ಅವರ ನಂಬಿಕೆಯನ್ನು ಎಷ್ಟರ ಮಟ್ಟಿಗೆ ಉಳಿಸಿಕೊಂಡಿದ್ದೇನೆ, ಇಲ್ಲಿಯವರೆಗೂ ನಾನೇನೂ ಮಾಡಿಯೇ ಇಲ್ಲವಲ್ಲಾ ಎಂಬ ಫೀಲ್‌’ ಇದೆ ಎಂದು ಹೇಳಿಕೊಂಡಿದ್ದರು.

ಈಗೇಕೆ ಅವರ ಮಾತಿನ ಪ್ರಸ್ತಾಪ ಎಂಬ ಪ್ರಶ್ನೆ ಎದುರಾಗಬಹುದು. ವಿಷಯ ಇದೆ. ಅವರೀಗ 200 ಚಿತ್ರಗಳನ್ನು ಪೂರ್ಣಗೊಳಿಸಿದ್ದಾರೆ. ಹೌದು, ರಾಮಕೃಷ್ಣ ಅವರು ಅಲ್ಲಿಂದ ಇಲ್ಲಿಯವರೆಗೆ ಮಾಡಿರುವ ಬಹುತೇಕ ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳೇ ಸಿಕ್ಕಿವೆ. ಸಿಕ್ಕ ಪಾತ್ರವನ್ನು ಅಷ್ಟೇ ಶ್ರದ್ಧೆಯಿಂದ ನಿರ್ವಹಿಸುವ ಮೂಲಕ ತಮ್ಮ ಕೆಲಸವನ್ನು ಪ್ರೀತಿಯಿಂದ ಮಾಡಿಕೊಂಡು ಬಂದಿದ್ದಾರೆ.

ಹಳಬರು, ಹೊಸಬರು ಎಂಬ ಭೇದ-ಭಾವ ಇಲ್ಲದೆ, ಪಾತ್ರಕ್ಕೆ ಏನು ಬೇಕೋ, ನಿರ್ದೇಶಕ ಏನು ಹೇಳುತ್ತಾನೋ ಅಷ್ಟು ಮಾಡುವ ಮೂಲಕ ಸಿನಿಮಾವನ್ನು ಪ್ರೀತಿಸಿಕೊಂಡು ಬಂದಿದ್ದಾರೆ. ಈಗ ಅವರು ಡಬ್ಬಲ್‌ ಸೆಂಚುರಿ ಬಾರಿಸಿದ್ದಾರೆ. ಹೊಸಬರೇ ಸೇರಿ ಮಾಡುತ್ತಿರುವ “ಅಗ್ರಸೇನ’ ಎಂಬ ಚಿತ್ರದಲ್ಲಿ ರಾಮಕೃಷ್ಣ ನಟಿಸಿದ್ದಾರೆ. “ಅಗ್ರಸೇನ’ ಅವರ ಅಭಿನಯದ 200 ನೇ ಸಿನಿಮಾ ಎಂಬುದು ವಿಶೇಷತೆಗಳಲ್ಲೊಂದು.

ಈ ಚಿತ್ರಕ್ಕೆ ಎನ್‌.ಕೆ.ಮುರುಗೇಶ್‌ ನಿರ್ದೇಶಕರು. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಇವರೇ ಬರೆದಿದ್ದಾರೆ. ನೃತ್ಯ ನಿರ್ದೇಶಕ ಕಮ್‌ ನಿರ್ದೇಶಕ ಹರ್ಷ ಜೊತೆ ಕೆಲಸ ಮಾಡಿದ್ದ ಮುರುಗೇಶ್‌, ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ಮಮತಾ ಜಯರಾಮರೆಡ್ಡಿ ಈ ಚಿತ್ರದ ನಿರ್ಮಾಪಕರು. ಈ ಚಿತ್ರದಲ್ಲಿ ರಾಮಕೃಷ್ಣ ಅವರಿಗೆ ಎರಡು ಶೇಡ್‌ ಪಾತ್ರಗಳಿವೆ ಎಂಬುದು ನಿರ್ದೇಶಕರ ಮಾತು.

ಇದು 80 ರ ದಶಕದಲ್ಲಿ ನಡೆಯೋ ಕಥೆ. ಹಾಗಂತ ಚಿತ್ರದುದ್ದಕ್ಕೂ ಅದೇ ಇರುವುದಿಲ್ಲವಂತೆ. ಒಂದು ವರ್ಷನ್‌ ಮಾತ್ರ ಆ ಕಾಲದ ಕಥೆ ಸಾಗಿದರೆ, ಇನ್ನೊಂದು ವರ್ಷನ್‌ ಈಗಿನ ವಸ್ತುಸ್ಥಿತಿಯ ಕಥೆ ಹೇಳಲಿದೆಯಂತೆ. ರಾಮಕೃಷ್ಣ ಅವರು ಹಳ್ಳಿಯೊಂದರ ಮುಖಂಡರಾಗಿ ಕಾಣಿಸಿಕೊಂಡಿದ್ದಾರಂತೆ.

ಅದೊಂದು ಫ್ಯಾಶ್‌ಬ್ಯಾಕ್‌ ಕಥೆಯಾಗಿದ್ದರಿಂದ, ರಾಮಕೃಷ್ಣ ಅವರಿಗೆ ವಿಶೇಷ ಗೆಟಪ್‌ ಹಾಕಿಸಿ, ಪಾತ್ರ ಮಾಡಿಸಲಾಗಿದೆ ಎನ್ನುವ ಚಿತ್ರತಂಡ, ಇದೊಂದು ಕೌಟುಂಬಿಕ ಹಿನ್ನೆಲೆಯ ಕಥೆಯಾಗಿದ್ದು, ಚಿತ್ರದಲ್ಲಿ ಬಹುತೇಕ ಹೊಸ ಪ್ರತಿಭೆಗಳೇ ಇವೆ. ಇಲ್ಲಿ ಅಮರ್‌, ಯತ್ವಿಕೃಷ್ಣ ನಾಯಕರಾದರೆ, ರಚನಾ ದಶರಥ, ಉಗ್ರಂ ಮಂಜು ಇತರರು ನಟಿಸಿದ್ದಾರೆ. ಚಿತ್ರಕ್ಕೆ ಆರ್‌.ಪಿ.ರೆಡ್ಡಿ ಛಾಯಾಗ್ರಹಣವಿದೆ. ತ್ಯಾಗು ಅವರ ಸಂಗೀತವಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.