ಕೆಮಿಸ್ಟ್ರಿ ವರ್ಕೌಟ್ ಆಯ್ತು: ಕರಿಯಪ್ಪನ ಹಾಡಿಗೆ ಮೆಚ್ಚುಗೆ
Team Udayavani, Jan 11, 2019, 6:10 AM IST
ಕನ್ನಡದಲ್ಲಿ ಈಗಾಗಲೇ ತರಹೇವಾರಿ ಶೀರ್ಷಿಕೆ ಇರುವಂತಹ ಚಿತ್ರಗಳು ಬಂದಿವೆ. ಆ ಸಾಲಿಗೆ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಎಂಬ ಚಿತ್ರವೂ ಒಂದು. ಈ ಚಿತ್ರ ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣಗೊಂಡು, ಬಿಡುಗಡೆಗೆ ಸಜ್ಜಾಗಿದೆ. ಅಷ್ಟೇ ಅಲ್ಲ, ಚಿತ್ರದ ಮೊದಲ ಹಾಡು ಕೂಡ ಹೊರಬಂದಿದೆ. ಹೌದು, ಸಂಗೀತ ನಿರ್ದೇಶಕ ನವೀನ್ ಸಜ್ಜು ಹಾಡಿರುವ “ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು, ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು…’ ಎಂಬ ಹಾಡು ಹೊರಬಂದಿದ್ದು, ಈಗಾಗಲೇ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ನಿರ್ದೇಶಕ ಕುಮಾರ್ ಅವರೇ ಈ ಚಿತ್ರದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಆರವ್ ರಿಶಿಕ್ ಚಿತ್ರಕ್ಕೆ ಸಂಗೀತ ನೀಡಿದ್ದು, ಕುಮಾರ್ ಬರೆದ ಹಾಡಿಗೆ ವಿಶೇಷ ಧ್ವನಿ ಬೇಕು ಎಂಬ ಕಾರಣಕ್ಕೆ, ನವೀನ್ ಸಜ್ಜು ಅವರಿಂದ ಹಾಡು ಹಾಡಿಸಲಾಗಿದೆ. ಈಗಾಗಲೇ ನವೀನ್ ಸಜ್ಜು ಅವರು ಹಾಡಿದ “ಎಣ್ಣೆ ನಮ್ದು ಊಟ ನಿಮ್ದು’ ಹಾಡು ಸಿಕ್ಕಾಪಟ್ಟೆ ಸದ್ದು ಮಾಡಿದ್ದು ಎಲ್ಲರಿಗೂ ಗೊತ್ತು. ನವೀನ್ ಸಜ್ಜು ಅವರೇ ಈ ಹಾಡನ್ನೂ ಹಾಡಬೇಕು ಎಂಬ ಕಾರಣದಿಂದ ನಿರ್ದೇಶಕರು ಅವರಿಂದ ಹಾಡನ್ನು ಹಾಡಿದ್ದಾರೆ.
ಎಂ ಸಿರಿ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಡಾ.ಮಂಜುನಾಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಶೂಟಿಂಗ್ ಮುಗಿಸಿದ್ದು, ಇದೀಗ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಆನಂದ್ ಆಡಿಯೋ ಸಂಸ್ಥೆ ಚಿತ್ರದ ಲಿರಿಕಲ್ ಆಡಿಯೋ ಬಿಡುಗಡೆ ಮಾಡಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲವ್ ಪ್ಯಾಥೋ ಸಾಂಗ್ ಇದಾಗಿದ್ದು, ಟಪ್ಪಾಂಗುಚ್ಚಿ ಶೈಲಿಯಲ್ಲೂ ಹಾಡು ಮೂಡಿ ಬಂದಿದೆ. ಯುವ ನಿರ್ದೇಶಕ ಕುಮಾರ್ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರದಲ್ಲಿ “ಕಿರಿಕ್ ಪಾರ್ಟಿ’ ಚಂದನ್ ಆಚಾರ್,
ಯುವ ನಾಯಕಿ ಸಂಜನಾ ಆನಂದ್, ತಬಲಾ ನಾಣಿ, ಸುಚೇಂದ್ರ ಪ್ರಸಾದ್ ಡಾ.ಮಂಜುನಾಥ್, ಮೈಕೋ ನಾಗರಾಜ್, ರಾಕ್’ಲೈನ್ ಸುಧಾಕರ್ ನಟಿಸಿದ್ದಾರೆ. ಸದ್ಯಕ್ಕೆ “ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು’ ಹಾಡು ಒಳ್ಳೆಯ ಮೆಚ್ಚುಗೆ ಪಡೆದಿರುವುದರಿಂದ ಸಂಕ್ರಾಂತಿ ಹಬ್ಬದ ದಿನದಂದ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ. ಈ ಚಿತ್ರಕ್ಕೆ ಸುಜಯ್ ಕುಮಾರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಶಿವಸೇನ ಅವರು ಛಾಯಾಗ್ರಹಣ ಮಾಡಿದ್ದಾರೆ. ವೆಂಕಿ ಅವರ ಸಂಕಲನವಿದೆ. ಲಕ್ಷ್ಮಿತ್ ವಿನಯ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ