ನೆಗೆಟಿವ್‌ ಶೇಡ್‌ನ‌ ಪಾಸಿಟಿವ್‌ ಸಿನಿಮಾ “ಧರ್ಮಸ್ಯ’


Team Udayavani, Jan 13, 2019, 6:27 AM IST

yada-yada.jpg

ಭಗವದ್ಗೀತೆಯಲ್ಲಿ ಬರುವ “ಯದಾ ಯದಾ ಹೀ ಧರ್ಮಸ್ಯ’ ಎಂಬ ಸಾಲನ್ನು ನೀವೆಲ್ಲ ಕೇಳಿರುತ್ತೀರಿ. ಈಗ ಇದೇ ಸಾಲು ಕನ್ನಡ ಚಿತ್ರವೊಂದರ ಶೀರ್ಷಿಕೆಯಾಗಿ ತೆರೆಮೇಲೆ ಬರುತ್ತಿದೆ. ಹೌದು, ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ “ಯದಾ ಯದಾ ಹೀ ಧರ್ಮಸ್ಯ’ ಚಿತ್ರ ತೆರೆಗೆ ಬರೋದಕ್ಕೆ ತೆರೆಮರೆಯಲ್ಲೇ ಸಿದ್ಧತೆ ನಡೆಸುತ್ತಿದೆ. ಸದ್ಯ ಚಿತ್ರದ ಪ್ರಮೋಷನ್‌ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕಸರತ್ತು ನಡೆಸುತ್ತಿದೆ. 

ಭರಪೂರ ಮನರಂಜನೆ: “ಯದಾ ಯದಾ ಹೀ ಧರ್ಮಸ್ಯ’ ಚಿತ್ರಕ್ಕೆ ನವ ಪ್ರತಿಭೆ ವಿರಾಜ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ, ತಮಿಳು ಮತ್ತು ತೆಲುಗಿನ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ವಿರಾಜ್‌, ಮೊದಲ ಬಾರಿಗೆ “ಯದಾ ಯದಾ ಹೀ ಧರ್ಮಸ್ಯ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ವಿರಾಜ್‌, “ಇದೊಂದು ಕಂಪ್ಲೀಟ್‌ ಕಮರ್ಷಿಯಲ್‌ ಎಂಟರ್‌ಟೈನ್ಮೆಂಟ್‌ ಚಿತ್ರ. ಆ್ಯಕ್ಷನ್‌ ಕಥಾಹಂದರ ಚಿತ್ರದಲ್ಲಿದೆ. ಉಳಿದಂತೆ ಲವ್‌, ಆ್ಯಕ್ಷನ್‌, ಮೆಲೋಡಿ ಸಾಂಗ್ಸ್‌, ಮಸ್ತ್ ಡ್ಯಾನ್ಸ್‌ ಹೀಗೆ ಪಕ್ಕಾ ಎಂಟರ್‌ಟೈನ್ಮೆಂಟ್‌ ಸಿನಿಮಾದಲ್ಲಿ ಆಡಿಯನ್ಸ್‌ ಏನೇನು ನಿರೀಕ್ಷೆ ಮಾಡುತ್ತಾರೋ, ಅದೆಲ್ಲವೂ “ಯದಾ ಯದಾ ಹೀ ಧರ್ಮಸ್ಯ’ ಚಿತ್ರದಲ್ಲಿದೆ. ಇಡೀ ಸಿನಿಮಾ ಆಡಿಯನ್ಸ್‌ಗೆ ಭರಪೂರ ಮನರಂಜನೆ ನೀಡೋದು ಗ್ಯಾರೆಂಟಿ’ ಎನ್ನುತ್ತಾರೆ. 

ಕಥೆಯಲ್ಲಿ ಮತ್ತು ಪಾತ್ರಗಳಲ್ಲಿ ನೆಗೆಟೀವ್‌ ಶೇಡ್‌: ಚಿತ್ರತಂಡ ಹೇಳುವ ಪ್ರಕಾರ “ಯದಾ ಯದಾ ಹೀ ಧರ್ಮಸ್ಯ’ ಚಿತ್ರದ ಬಹುಭಾಗದ ಕಥಾಹಂದರ ಮತ್ತು ಬಹುತೇಕ ಪಾತ್ರಗಳು ಅವುಗಳ ನಿರೂಪಣೆ ನೆಗೆಟೀವ್‌ ಶೇಡ್‌ನ‌ಲ್ಲಿ ಸಾಗುತ್ತದೆಯಂತೆ. ಚಿತ್ರದಲ್ಲಿ ಡೈಲಾಗ್‌ ಕಿಂಗ್‌ ಸಾಯಿಕುಮಾರ್‌ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರದ್ದು ಸಂಪೂರ್ಣ ನೆಗೆಟೀವ್‌ ಶೇಡ್‌ ಪಾತ್ರವಂತೆ.

ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದಲ್ಲಿರುವ “ಮಾರಿ’ ಎನ್ನುವ ಖಳನಾಯಕನ ಪಾತ್ರದಲ್ಲಿ ಸಾಯಿಕುಮಾರ್‌ ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಯಾವ ಚಿತ್ರದಲ್ಲೂ ಕಾಣದ ಹೊಸಗೆಟಪ್‌ ಸಾಯಿಕುಮಾರ್‌ ಅವರಿಗೆ ಈ ಪಾತ್ರದಲ್ಲಿ ಸಿಕ್ಕಿದೆಯಂತೆ. ಇನ್ನು ವಿಜಯ ರಾಘವೇಂದ್ರ ಚಿತ್ರದ ನಾಯಕ ನಟನಾದರೂ, ಅವರ ಪಾತ್ರದಲ್ಲೂ ನೆಗೆಟೀವ್‌ ಶೇಡ್‌ ಕಾಣಬಹುದು ಎನ್ನುತ್ತದೆ ಚಿತ್ರತಂಡ. 

ಕನ್ನಡದ ಮೇಲಿನ ಪ್ರೀತಿಗೆ ಇಂಧೋರ್‌ ನಿರ್ಮಾಪಕ: ಇನ್ನೊಂದು ವಿಶೇಷವೆಂದರೆ, “ಯದಾ ಯದಾ ಹೀ ಧರ್ಮಸ್ಯ’ ಚಿತ್ರವನ್ನು ನಿರ್ಮಿಸುತ್ತಿರುವವರು ಇಂಧೋರ್‌ ಮೂಲದ ಅಕ್ಷರ ತಿವಾರಿ. ಕನ್ನಡ ಬಾರದಿದ್ದರೂ, ಕನ್ನಡದ ಮೇಲಿನ ಪ್ರೀತಿ, ಮತ್ತು ಇತ್ತೀಚೆಗೆ ಬರುತ್ತಿರುವ ಹೊಸತರದ ಕನ್ನಡ ಚಿತ್ರಗಳ ಮೇಲಿನ ಆಸಕ್ತಿಯಿಂದಾಗಿ ಅಕ್ಷರ ತಿವಾರಿ, “ಅಕ್ಷರ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಪ್ರಥಮ ಚಿತ್ರವಾಗಿ “ಯದಾ ಯದಾ ಹೀ ಧರ್ಮಸ್ಯ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

“ಇತ್ತೀಚೆಗೆ ಬರುತ್ತಿರುವ ಕನ್ನಡದ ಚಿತ್ರಗಳು ಹೊಸಪ್ರಯೋಗಗಳಿಂದ ಗಮನ ಸೆಳೆಯುತ್ತಿವೆ. ಹೊಸಬರು ಹೊಸಥರದ ಚಿತ್ರಗಳನ್ನು ಕೊಡುತ್ತಿದ್ದಾರೆ. ಕನ್ನಡ ಪ್ರೇಕ್ಷಕರು ಕೂಡ ಇಂಥ ಚಿತ್ರಗಳನ್ನು ಸ್ವೀಕರಿಸುತ್ತಿದ್ದಾರೆ. ಈ ಚಿತ್ರ ಕೂಡ ಸಾಕಷ್ಟು ಹೊಸತನದಿಂದ ಕೂಡಿದ್ದು, ಕನ್ನಡದ ಪ್ರೇಕ್ಷಕರು ಸ್ವೀಕರಿಸುತ್ತಾರೆ ಎಂಬ ನಂಬಿಕೆಯಿಂದ ಇದನ್ನು ನಿರ್ಮಿಸುತ್ತಿದ್ದೇವೆ’ ಎನ್ನುತ್ತಾರೆ ನಿರ್ಮಾಪಕ ಅಕ್ಷರ ತಿವಾರಿ. ಇಂಧೋರ್‌ ಮೂಲದ ಮತ್ತೂಬ್ಬ ಕನ್ನಡ ಸಿನಿಮಾಸಕ್ತ ವಿಶಾಲ್‌ ತಿವಾರಿ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. 

ಜನಪ್ರಿಯ ಕಲಾವಿದರು, ನುರಿತ ತಂತ್ರಜ್ಞರ ತಾರಾಗಣ: “ಯದಾ ಯದಾ ಹೀ ಧರ್ಮಸ್ಯ’ ಚಿತ್ರದಲ್ಲಿ ವಿಜಯ ರಾಘವೇಂದ್ರ, ಪ್ರಜ್ವಲ್‌ ದೇವರಾಜ್‌, ಸಾಯಿ ಕುಮಾರ್‌, ಶ್ರಾವ್ಯಾ, ಸಾಧುಕೋಕಿಲ, ಉಮೇಶ್‌, ಗಡ್ಡಪ್ಪ, ಪ್ರಥಮ್‌, ಪದ್ಮಾವಾಸಂತಿ ಮತ್ತಿತರ ಕಲಾವಿದರ ಬೃಹತ್‌ ತಾರಾಗಣವಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಜ್ಯೂಡಾ ಸ್ಯಾಂಡಿ ಮತ್ತು ಪರಾಗ್‌ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

ವಿರಾಜ್‌, ಗಿರಿದೇವ್‌, ಮೋಹನ್‌ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಇನ್ನು “ಯದಾ ಯದಾ ಹೀ ಧರ್ಮಸ್ಯ’ ಚಿತ್ರದ ದೃಶ್ಯಗಳನ್ನು ಛಾಯಾಗ್ರಹಕ ಶಂಕರ್‌ ಆರಾಧ್ಯ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಚಿತ್ರಕ್ಕೆ ಕೆ.ಎಂ ಪ್ರಕಾಶ್‌ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಚಿತ್ರದ ಹಾಡುಗಳಿಗೆ ಸ್ಟಾರ್‌ ನಾಗಿ, ಮನು ನೃತ್ಯ ಸಂಯೋಜಿಸಿದರೆ, ಚಿತ್ರದಲ್ಲಿ ಸುಮಾರು ಆರು ಭರ್ಜರಿ ಸಾಹಸ ದೃಶ್ಯಗಳಿಗೆ ವಿಜಯ್‌, ಮಾಸ್‌ ಮಾದ, ವಿನೋದ್‌ ಸಾಹಸ ಸಂಯೋಜನೆ ಮಾಡಿದ್ದಾರೆ. 

ತೆರೆಮೇಲೆ ಸುಂದರ ದೃಶ್ಯಗಳ ಚಿತ್ರಣ: “ಯದಾ ಯದಾ ಹೀ ಧರ್ಮಸ್ಯ’ ಚಿತ್ರವನ್ನು ಬೆಂಗಳೂರು, ಮುರುಡೇಶ್ವರ, ಗೋಕರ್ಣ, ಸಕಲೇಶಪುರ ಸ್ತುಮುತ್ತ ಮತ್ತು ಗೋವಾ, ಕೇರಳದ ಸುಂದರ ತಾಣಗಳಲ್ಲಿ ಸುಮಾರು 65 ದಿನಗಳ ಕಾಲ ಚಿತ್ರೀಕರಿಸಲಾಗಿದೆ. ಚಿತ್ರದ ಪ್ರತಿಯೊಂದು ದೃಶ್ಯಗಳು ಅದ್ಧೂರಿಯಾಗಿ ಮೂಡಿಬಂದಿದ್ದು, ನೋಡುಗರಿಗೆ ಹೊಸ ಅನುಭವ ನೀಡಲಿದೆ ಎಂಬ ವಿಶ್ವಾಸ ಚಿತ್ರತಂಡದ್ದು. “ಚಿತ್ರದಲ್ಲಿ ಯಾವುದಕ್ಕೂ ಕೊರತೆಯಾಗದಂತೆ ಅಂದುಕೊಂಡಿರುವುದನ್ನು ತೆರೆಮೇಲೆ ತರಲು ಯಶಸ್ವಿಯಾಗಿದ್ದೇವೆ. ನಮ್ಮ ಪ್ರಯತ್ನ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ’ ಎನ್ನುವ ಮಾತುಗಳನ್ನಾಡುತ್ತದೆ ಚಿತ್ರತಂಡ. 

ಮನರಂಜನೆಯ ಜೊತೆಗೊಂದು ಸಂದೇಶವಿದೆ: “ಯದಾ ಯದಾ ಹೀ ಧರ್ಮಸ್ಯ’ ಔಟ್‌ ಆ್ಯಂಡ್‌ ಔಟ್‌ ಮಾಸ್‌ ಎಂಟರ್‌ಟೈನ್ಮೆಂಟ್‌ ಸಿನಿಮಾವಾದರೂ, ಅದರಲ್ಲಿ ಒಂದು ಸಂದೇಶವಿದೆ’ ಎನ್ನುತ್ತಾರೆ ನಿರ್ದೇಶಕ ವಿರಾಜ್‌. ಚಿಕ್ಕ ವಯಸ್ಸಿನಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತ ಬಂದ ವ್ಯಕ್ತಿ ದುಡ್ಡಿನ ಹಿಂದೆ ಬಿದ್ದಾಗ, ಅವನ ಹಿಂದೆ ಅವನಿಗೇ ಗೊತ್ತಿಲ್ಲದಂತೆ ಒಂದು ವ್ಯೂಹ ರಚನೆಯಾಗುತ್ತದೆ. ಮುಂದೆ ಅವನ ಜೀವನದಲ್ಲಿ ಏನೇನು ನಡೆಯುತ್ತದೆ ಎನ್ನುವುದು ಚಿತ್ರದ ಕಥೆಯ ಒಂದು ಎಳೆ. ಜೀವನದಲ್ಲಿ ದುಡ್ಡೇ ಎಲ್ಲದಕ್ಕಿಂತಲೂ ಮುಖ್ಯವಲ್ಲ. ಅದಕ್ಕಿಂತಲೂ ಮುಖ್ಯವಾದ ಅದೆಷ್ಟೋ ಸಂಗತಿಗಳು ನಮ್ಮ ನಡುವೆ ಇರುತ್ತದೆ. ಅದಕ್ಕೆ ಬೆಲೆ ಕಟ್ಟಲಾಗದು ಎಂಬ ಸಂದೇಶ ಕೂಡ ಚಿತ್ರದಲ್ಲಿದೆ. 

ತೆರೆಗೆ ಬರಲು ಸಿದ್ಧತೆ: ಚಿತ್ರತಂಡದ ಪ್ರಕಾರ “ಯದಾ ಯದಾ ಹೀ ಧರ್ಮಸ್ಯ’ ಚಿತ್ರದ ಕೆಲಸಗಳು ಸುಮಾರು ಎರಡು ವರ್ಷದ ಹಿಂದೆಯೇ ಆರಂಭವಾಗಿದ್ದು, ಇದೀಗ ಚಿತ್ರದ ಮೊದಲ ಪ್ರತಿ ಸಿದ್ಧವಾಗಿದ್ದು, ಚಿತ್ರ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಮುಂದಿದೆ. ಸೆನ್ಸಾರ್‌ ಅನುಮತಿ ಸಿಗುತ್ತಿದ್ದಂತೆ ಚಿತ್ರವನ್ನು ತೆರೆಮೇಲೆ ತರುವ ಸಿದ್ಧತೆಯಲ್ಲಿದೆ ಚಿತ್ರತಂಡ. ಇದೇ ಜ. 18ಕ್ಕೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಲಿದ್ದು, ಅದಾದ ಬಳಿಕ ಚಿತ್ರದ ಆಡಿಯೋ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ. ಎಲ್ಲ ಅಂದುಕೊಂಡಂತೆ ನಡೆದರೆ, ಫೆಬ್ರವರಿ ಎರಡನೇ ವಾರದೊಳಗೆ  ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಆಲೋಚನೆಯಲ್ಲಿದ್ದೇವೆ ಎನ್ನುತ್ತದೆ ಚಿತ್ರತಂಡ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.