ಶಿವರಾಜಕುಮಾರ್‌ ಕವಚ ಮುಂದಕ್ಕೆ


Team Udayavani, Jan 14, 2019, 6:17 AM IST

kavacha1.jpg

ಶಿವರಾಜಕುಮಾರ್‌ ಅವರ “ಕವಚ’ ಚಿತ್ರ ಬಿಡುಗಡೆಗೆ ಸರಿಯಾದ ಮುಹೂರ್ತವೇ ಕೂಡಿಬರುತ್ತಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಡಿಸೆಂಬರ್‌ನಲ್ಲಿ ತೆರೆಕಾಣಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆ ಮುಂದಕ್ಕೆ ಹೋಯಿತು. ಆ ನಂತರ ಚಿತ್ರತಂಡ ಎಲ್ಲಾ ಪಕ್ಕಾ ಮಾಡಿಕೊಂಡು ಈ ಬಾರಿ ಬಿಡುಗಡೆ ಮಾಡಿಯೇ ಬಿಡೋದು ಎಂದು ತೀರ್ಮಾನಿಸಿ ಇದೇ ಜ.18ಕ್ಕೆ ಚಿತ್ರ ಬಿಡುಗಡೆಯ ಡೇಟ್‌ ಅನೌನ್ಸ್‌ ಮಾಡಿತ್ತು ಚಿತ್ರತಂಡ.

ಈ ಬಾರಿ ಮತ್ತೆ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಜ.18 ರ ಬದಲು ಚಿತ್ರ ಫೆಬ್ರವರಿಯಲ್ಲಿ ತೆರೆಕಾಣಲಿದೆ. ಎಲ್ಲಾ ಓಕೆ, ಈ ಬಾರಿ “ಕವಚ’ ಬಿಡುಗಡೆ ಮುಂದೆ ಹೋಗಲು ಕಾರಣವೇನು ಎಂದು ಕೇಳಬಹುದು. ಅದಕ್ಕೆ ಉತ್ತರ ತಾಂತ್ರಿಕ ಸಮಸ್ಯೆ. ಸಿಂಕ್‌ ಸೌಂಡ್‌ ವಿಚಾರದಲ್ಲಿ ಈ ಬಾರಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಚಿತ್ರದಲ್ಲಿ ಬಳಸಿದ ಪದವೊಂದರ ಬದಲಿಗೆ ಅದಕ್ಕೆ ಸಮಾನಾರ್ಥ ಕೊಡುವ ಬೇರೆ ಪದ ಬಳಸುವಂತೆ ಸೆನ್ಸಾರ್‌ ಮಂಡಳಿ ಸೂಚಿಸಿದ್ದು, ಆ ಕೆಲಸಗಳು ಕೂಡಾ ನಡೆಯುತ್ತಿವೆ.

ಇನ್ನು ಚಿತ್ರದ ಚಿತ್ರದ ಕೆಲಸಗಳು ಚೆನ್ನೈ, ಹೈದರಬಾದ್‌ನಲ್ಲಿ ನಡೆಯುತ್ತಿದ್ದು, ಎಲ್ಲರೂ ಹಬ್ಬದ ಮೂಡ್‌ನ‌ಲ್ಲಿದ್ದಾರೆ. ಹಾಗಾಗಿ, ತಾಂತ್ರಿಕ ಕೆಲಸಗಳು ತಡವಾಗುತ್ತಿವೆ. ಎಲ್ಲಾ ಓಕೆ, ಹಾಗಾದರೆ ಮುಂದೆ “ಕವಚ’ ಯಾವಾಗ ಬಿಡುಗಡೆಯಾಗುತ್ತದೆ ಎಂದು ನೀವು ಹೇಳಬಹುದು. ಅದಕ್ಕೆ ಉತ್ತರ ಫೆಬ್ರವರಿ. ಚಿತ್ರವನ್ನು ಫೆಬ್ರವರಿ 22 ರಂದು ತೆರೆಗೆ ತರುವ ಬಗ್ಗೆಯೂ ಚಿತ್ರತಂಡ ಯೋಚಿಸುತ್ತಿದೆ. ಕಳೆದ ವರ್ಷ ಫೆ.23 ರಂದು ಶಿವರಾಜಕುಮಾರ್‌ ಅವರ “ಟಗರು’ ಚಿತ್ರ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು.

ಆ ಕಾರಣದಿಂದ ಈ ಬಾರಿ “ಕವಚ’ವನ್ನು ಫೆಬ್ರವರಿಯಲ್ಲಿ ತೆರೆಗೆ ತರುವ ಬಗ್ಗೆ ಯೋಚಿಸುತ್ತಿದೆ ಚಿತ್ರತಂಡ. “ಕವಚ’ ಚಿತ್ರದಲ್ಲಿ ನಟ ಶಿವರಾಜ ಕುಮಾರ್‌ ಮೊದಲ ಬಾರಿಗೆ ಅಂಧನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರ ಅಂಧರಿಗೆ ಬದುಕಿಗೆ ಸ್ಪೂರ್ತಿ, ಪ್ರೇರಣೆ ನೀಡುವಂಥದ್ದಾಗಿದೆ ಎನ್ನುತ್ತದೆ ಚಿತ್ರತಂಡ. “ಕವಚ’ ಚಿತ್ರದ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆದಿದ್ದು ಹೈದರಾಬಾದ್‌ನಲ್ಲಿ. ಹಾಗಾಗಿ ಚಿತ್ರ ಡಿ.ಐ ಸೇರಿದಂತೆ ಹಲವು ಕೆಲಸಗಳನ್ನು ಅಲ್ಲಿನ ನುರಿತ ತಂತ್ರಜ್ಞರು ನಿರ್ವಹಿಸಿದ್ದಾರೆ.

ಈ ವೇಳೆ ಚಿತ್ರವನ್ನು ನೋಡಿದ ಅಲ್ಲಿನ ತಂತ್ರಜ್ಞರು ಶಿವಣ್ಣ ಅಭಿನಯ ನೋಡಿ ಫಿದಾ ಆಗಿದ್ದಾರೆ ಎನ್ನುತ್ತದೆ ಚಿತ್ರತಂಡ.  “ಕವಚ’ ಚಿತ್ರದಲ್ಲಿ ಶಿವರಾಜಕುಮಾರ್‌ ಅವರೊಂದಿಗೆ ಇಶಾ ಕೊಪ್ಪಿಕರ್‌, ರವಿಕಾಳೆ, ಕೃತಿಕಾ, ರಾಜೇಶ್‌ ನಟರಂಗ, ವಸಿಷ್ಠ ಸಿಂಹ, ಬೇಬಿ ಮೀನಾಕ್ಷಿ, ಜಯಪ್ರಕಾಶ್‌ ಮೊದಲಾದ ಕಲಾವಿದರ ದೊಡ್ಡ ತಾರಾಗಣವಿದೆ. “ಹೆಚ್‌.ಎಂ.ಎ ಸಿನಿಮಾ’ ಬ್ಯಾನರ್‌ನಲ್ಲಿ ಎಂ.ವಿ.ವಿ ಸತ್ಯ ನಾರಾಯಣ್‌ “ಕವಚ’ ಚಿತ್ರವನ್ನು ನಿರ್ಮಿಸಿದ್ದಾರೆ. ರಾಮ್‌ಗೊಪಾಲ್‌ ವರ್ಮಾ (ಆರ್‌ಜಿವಿ) ಅವರ ಜೊತೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಜಿವಿಆರ್‌ ವಾಸು ಮೊದಲ ಬಾರಿಗೆ ಕನ್ನಡದಲ್ಲಿ “ಕವಚ’ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.