ಟ್ರೆಂಡಿಂಗ್‍ನಲ್ಲಿ “ಸೀತಾರಾಮ ಕಲ್ಯಾಣ’ ಟ್ರೈಲರ್: Watch


Team Udayavani, Jan 20, 2019, 9:46 AM IST

seertas.jpg

ಯುವರಾಜ ನಿಖಿಲ್‌ ಕುಮಾರ್‌, ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರದ ಟ್ರೈಲರ್, ಹಾಡುಗಳು ಬಿಡುಗಡೆಯಾಗಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ತತಂಡ ಚಿತ್ರದ ಮತ್ತೊಂದು ಟ್ರೈಲರನ್ನು ಬಿಡುಗಡೆ ಮಾಡಿದೆ. ಹೌದು, ಶನಿವಾರ ಸಂಜೆ ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ಅದ್ಧೂರಿಯಾಗಿ “ಸೀತಾರಾಮ ಕಲ್ಯಾಣ’ದ ಟ್ರೈಲರ್ ಬಿಡುಗಡೆಯಾಗಿದೆ. 

ಟ್ರೈಲರ್ ನಲ್ಲಿ ತುಂಟತನ ಪ್ರೀತಿ, ಕುಟುಂಬದವರ ನಡುವಿನ ಬಾಂಧವ್ಯ ತುಂಬಿದೆ. ಜೊತೆಗೆ ನಿಖಿಲ್ ಅವರ ಮಾಸ್ ಫೈಟ್ ಇದ್ದು, ಇದು ಪಕ್ಕಾ ಒಂದು ಸಾಂಪ್ರದಾಯಕ ಚಿತ್ರವಾಗಿದೆ. ಅಲ್ಲದೇ ಟ್ರೈಲರ್ ನಲ್ಲಿ ತಂದೆಯ ಪ್ರೀತಿಗೆ ನೀಡಿರುವ ಗೌರವ ಸಿನಿಮಾದ ವಿಶೇಷತೆ ಎಂದು ಹೇಳಬಹುದಾಗಿದೆ. ಈಗಾಗಲೇ ಟ್ರೈಲರ್ ಯುಟ್ಯೂಬ್​ನಲ್ಲಿ ಸಿಕ್ಕಾಪಟ್ಟೇ ಸದ್ದು ಮಾಡುತ್ತಿದ್ದು, ಟ್ರೆಂಡಿಂಗ್‍ನಲ್ಲಿದೆ.

ಇನ್ನು ಸಮಾರಂಭಕ್ಕೆ ಸ್ಯಾಂಡಲ್‍ವುಡ್ ತಾರೆಯರ ಭರ್ಜರಿ ಡ್ಯಾನ್ಸ್, ನಾಯಕ ನಿಖಿಲ್ ಕುಮಾರ್, ಚಿತ್ರದ ನಾಯಕಿ ರಚಿತ್ ರಾಮ್, ರಾಗಿಣಿ, ಆಶಿಕಾ ರಂಗನಾಥ್ ಸೇರಿದಂತೆ ಹಲವರು ಮಸ್ತ್ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಅಭಿಮಾನಿಗಳ ದಂಡೆ ಹರಿದು ಬಂದಿತ್ತು. ಹಲವು ನಟ-ನಟಿಯರು ಹಾಗೂ ಜೆಡಿಎಸ್ ಶಾಸಕರು ಸಾಕ್ಷಿಯಾಗಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಎಚ್.ಡಿ. ಕುಮಾರಸ್ವಾಮಿ, ಚಿತ್ರ ಅದ್ಧೂರಿಯಾಗಿ ಮೂಡಿ ಬಂದಿದ್ದು, ಒಂದೊಳ್ಳೆಯ ಕೌಟುಂಬಿಕ ಚಿತ್ರವನ್ನು ನಿರ್ಮಿಸಿದ ತೃಪ್ತಿ ಇದೆ ಎಂದು ಹೇಳಿದ್ದಾರೆ.

ಚೆನ್ನಾಂಬಿಕ ಫಿಲಂಸ್‌ ಬ್ಯಾನರ್‌ನಲ್ಲಿ ಶ್ರೀಮತಿ ಅನಿತಾ ಕುಮಾರಸ್ವಾಮಿ ನಿರ್ಮಾಣದ ಈ ಚಿತ್ರಕ್ಕೆ ಹರ್ಷ ಆ್ಯಕ್ಷನ್ ಕಟ್ ಹೇಳಿದ್ದಾರೆ. ರವಿಶಂಕರ್, ಶರತ್ ಕುಮಾರ್, ಮಧುಬಾಲಾ, ಆದಿತ್ಯ ಮೆನನ್, ಚಿಕ್ಕಣ್ಣ, ಸಾಧು ಕೋಕಿಲ, ನಯನಾ, ಗಿರಿಜಾ ಲೋಕೇಶ್, ಚೇತನ್ ಸೇರಿದಂತೆ ಹಲವರು ನಟಿಸಿದ್ದಾರೆ. ಸ್ವಾಮಿ ಛಾಯಾಗ್ರಹಣ, ಸುನೀಲ್‌ ಗೌಡ ಸಹ ನಿರ್ಮಾಣ, ಪ್ರಶಾಂತ್‌ ರಾಜಪ್ಪ, ಹಾಗೂ ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಅಂದಹಾಗೆ ಜನವರಿ 25 ರಂದು “ಸೀತಾರಾಮ ಕಲ್ಯಾಣ’ 400 ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.