“ಇಂದಿಗೂ ಅವರ ಮಾತನ್ನು ನೆನಪಿಸಿಕೊಳ್ಳುತ್ತಿದ್ದೇನೆ’: ಶಿವಣ್ಣ
Team Udayavani, Jan 22, 2019, 9:59 AM IST
ನಡೆದಾಡುವ ದೇವರು ಸಿದ್ಧಗಂಗಾಶ್ರೀ ಡಾ.ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ್ದರಿಂದ ಸ್ಯಾಂಡಲ್ವುಡ್ನಲ್ಲೂ ದುಃಖದ ವಾತಾವರಣ ಮಡುಗಟ್ಟಿದೆ. ಸಾವಿರಾರು ಕಲಾವಿದರು ಶ್ರೀಗಳ ಇಹಲೋಕ ತ್ಯಜಿಸಿರೋ ಸುದ್ದಿಯಿಂದ ಕಣ್ಣೀರಿಡುತ್ತಿದ್ದು, ಅಂತಿಮ ದರ್ಶನವನ್ನು ಪಡೆದಿದ್ದಾರೆ. ಇದೀಗ ನಟ ಹ್ಯಾಟ್ರಿಕ್ ಹಿರೋ ಶಿವರಾಜ್ಕುಮಾರ್ ಸಂತಾಪ ಸೂಚಿಸಿದ್ದಾರೆ. ಕಾರ್ಯಕ್ರಮದ ನಿಮಿತ್ತ ಅಮೆರಿಕದಲ್ಲಿರುವ ಅವರು, ಅಲ್ಲಿಂದಲೇ ವಿಡಿಯೋ ಮೂಲಕ ಸ್ವಾಮೀಜಿ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.
“ಸ್ವಾಮೀಜಿಗಳು ನಮ್ಮನ್ನು ಬಿಟ್ಟು ಹೋಗಿದ್ದಾರೆ ಅಂತಾ ಹೇಳಲು ಇಷ್ಟಪಡುವುದಿಲ್ಲ. ಅವರ ನೆನಪು ನಮ್ಮಲ್ಲಿದೆ. ಅವರನ್ನು ಇಲ್ಲ ಎಂದು ಊಹಿಸಿಕೊಳ್ಳುವುದಕ್ಕೆ ಕಷ್ಟವಾಗುತ್ತೆ, ನೋವಾಗುತ್ತೆ, ಇವತ್ತು ಅವರು ನಮ್ಮನ್ನು ಬಿಟ್ಟು ಶಿವನ ಪಾದ ಸೇರಿದ್ದಾರೆ. ಅಲ್ಲಿಂದಲೇ ನಮಗೆ ಆಶೀರ್ವಾದ ಮಾಡುತ್ತಾರೆ. ಅದರ ಜತೆಗೆ ನಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಅವರು ಖಂಡಿತಾ ಬಯಸುತ್ತಾರೆ.
ತುಮಕೂರಿನಲ್ಲಿ ಮಠ ನಿರ್ಮಾಣ ಮಾಡಿ ಅಲ್ಲಿ ಸಾವಿರಾರು ಮಕ್ಕಳಿಗೆ ಆಶ್ರಯ ಕೊಟ್ಟಿದ್ದಾರೆ. ಆಶ್ರಯದ ಜೊತೆಗೆ ವಿದ್ಯಾರ್ಥಿಗಳಿಗೆ ವಿದ್ಯೆ, ಊಟ ಕೊಟ್ಟಿದ್ದಾರೆ. ಆ ವಿದ್ಯೆ ಮತ್ತು ಊಟದಲ್ಲಿ ಶ್ರೀಗಳು ಇದ್ದಾರೆ. ಅಷ್ಟೇ ಅಲ್ಲದೇ ಇಡೀ ಕರ್ನಾಟಕದ ಜನತೆಯ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು. ಅಲ್ಲದೇ ಶ್ರೀಗಳ ಸಾವಿನ ಸುದ್ದಿ ಕೇಳಿದ ತಕ್ಷಣ ಬೇಸರವಾಯಿತು. ಅವರು ಮಾತನಾಡುವ ರೀತಿ ತುಂಬಾ ಇಷ್ಟವಾಗಿತ್ತು. ಇಂದಿಗೂ ಅವರ ಮಾತನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಶ್ರೀಗಳು ನಮ್ಮನ್ನು ಬಿಟ್ಟು ಹೋಗಿಲ್ಲ, ಸದಾ ನಮ್ಮ ಮನದಲ್ಲಿ ಇರುತ್ತಾರೆ ಎಂದು ಶಿವಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ