ಫೆಬ್ರವರಿಗೆ ಪ್ರೇಕ್ಷಕರ ಮುಂದೆ ಮಟಾಶ್‌


Team Udayavani, Jan 24, 2019, 5:47 AM IST

mataash.jpg

ಈ ಹಿಂದೆ “ಮಟಾಶ್‌’ ಚಿತ್ರದ ಬಗ್ಗೆ ಇದೇ ಬಾಲ್ಕನಿಯಲ್ಲಿ ಬಿಡುಗಡೆ ಕುರಿತು ಹೇಳಲಾಗಿತ್ತು. ಆದರೆ, ಚಿತ್ರ ಬಿಡುಗಡೆ ಮುಂದಕ್ಕೆ ಹೋಗುತ್ತಲೇ ಬಂತು. ಅದಕ್ಕೆ ಕಾರಣ ತಾಂತ್ರಿಕ ದೋಷ ಮತ್ತು ಸಮಯಕ್ಕೆ ಸರಿಯಾಗಿ ಸಿಗದ ಚಿತ್ರಮಂದಿರಗಳ ಸಮಸ್ಯೆ. ಇವೆಲ್ಲಾ ಕಾರಣಗಳಿಂದಾಗಿ ನಿರ್ದೇಶಕ ಎಸ್‌.ಡಿ.ಅರವಿಂದ್‌, ಚಿತ್ರ ಬಿಡುಗಡೆ ಮುಂದೂಡಿದ್ದರು. ಈಗ ಚಿತ್ರವನ್ನು ಬಿಡುಗಡೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಫೆಬ್ರವರಿ 1 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. “ಚಿತ್ರದ ಎಲ್ಲಾ ಕೆಲಸ ಕಾರ್ಯಗಳನ್ನು ಮುಗಿಸಿ, ಇನ್ನೇನು ಪ್ರೇಕ್ಷಕರ ಮುಂದೆ ತರಬೇಕು ಎಂದು ಹಲವು ಡೇಟ್‌ಗಳನ್ನು ಘೋಷಣೆ ಮಾಡಿದ್ದರೂ, ಅದು ಸಾಧ್ಯವಾಗಿರಲಿಲ್ಲ. ಈಗ ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆ ಮುಂದಕ್ಕೆ ಹಾಕುವುದಿಲ್ಲ. ಫೆ.1 ರಂದು ಬಿಡುಗಡೆ ಮಾಡಲು ರೆಡಿ’ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ.

ಈಗಾಗಲೇ ಚಿತ್ರದ ಹಾಡುಗಳು ಮತ್ತು ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದೆ. ಸಂಕ್ರಾಂತಿ ಹಬ್ಬದಂದು ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿತ್ತು. ಆ ಹಾಡಲ್ಲಿ ಮತ್ತಿನ ಹಣಬೆಯಿಂದಾಗುವ ಯಡವಟ್ಟುಗಳ ಬಗ್ಗೆ ಹೇಳಲಾಗಿತ್ತು. ಅದನ್ನು ತಿಂದವರು ಮತ್ತಿನಲ್ಲೇ ಇರುತ್ತಾರೆ ಎಂಬ ಕುರಿತಾದ ಹಾಡು ಅದಾಗಿತ್ತು. “ರುಂ ರುಂ ರುರುಂ…’ ಎಂದು ಶುರುವಾಗುವ ಹಾಡು ಸದ್ಯಕ್ಕೆ ಹೊಸತನದ ಸೌಂಡಿಂಗ್‌ನಲ್ಲಿ ಮೂಡಿಬಂದಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂಬುದು ನಿರ್ದೇಶಕರ ಮಾತು.

ಅಂದಹಾಗೆ, ಗೋಲ್ಡ್‌ ಆ್ಯಂಡ್‌ ಡ್ರೀಮ್ಸ್‌ ಕ್ರೋಮ್ಸ್‌-ಬಾಲಮಣಿ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ  ಸತೀಶ್‌ ಪಾಠಕ, ಗಿರೀಶ್‌ ಪಟೇಲ್‌, ಚಂದ್ರಶೇಖರ್‌ ಮಣೂರ ಹಾಗೂ ಎಸ್‌.ಡಿ.ಅರವಿಂದ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ  ಸಮರ್ಥ್ ನರಸಿಂಹರಾಜು, ಐಶ್ವರ್ಯ ಸಿಂಧೋಗಿ, ರಜನಿ ಭಾರದ್ವಾಜ್‌, ರಘು ರಮಣಕೊಪ್ಪ, ವಿ.ಮನೋಹರ್‌, ನಂದಗೋಪಾಲ್‌, ಸದಾನಂದ್‌ ಕಾಳಿ, ರವಿಕಿರಣ್‌ ರಾಜೇಂದ್ರನ್‌, ಸಿದ್ದಾಂತ್‌ ಸುಂದರ್‌, ರಂಗಸ್ವಾಮಿ, ಅಮೋಘ ರಾಹುಲ್‌, ಗಣೇಶ್‌ ರಾಜ್‌, ಬಾಲಾಜಿ ಪಿ ಶೆಟ್ಟಿ, ಗೌತಮ್‌, ನಾಗಾರ್ಜುನ್‌, ಸಿದ್ದು, ಅರ್ಜುನ್‌ ಸೇರಿದಂತೆ ಹಲವರು ನಟಿಸಿದ್ದಾರೆ.

ರಾನಿ ಅಬ್ರಾಹಿಂ ಚಿತ್ರಕ್ಕೆ ಕ್ಯಾಮೆರಾ ಹಿಡಿದರೆ, ನಿರ್ದೇಶಕ ಎಸ್‌.ಡಿ.ಅರವಿಂದ್‌ ಅವರೇ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತಕ್ಕೆ ವಿಜಯ್‌ ಕೃಷ್ಣ ಸಾಥ್‌ ನೀಡಿದ್ದಾರೆ. ಅವಿನಾಶ್‌ ನರಸಿಂಹರಾಜು ಕಲಾ ನಿರ್ದೇಶನ, ವಿನೋದ್‌ ಸಂಕಲನವಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.