ಚಂಬಲ್‌ ಕಣಿವೆಯಲ್ಲಿ ಪುನೀತ್‌


Team Udayavani, Jan 28, 2019, 5:40 AM IST

chambalsatish.jpg

ಕನ್ನಡದಲ್ಲಿ ಸದ್ಯಕ್ಕೆ ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳ ಪಟ್ಟಿಯಲ್ಲಿ ನೀನಾಸಂ ಸತೀಶ್‌ ಅಭಿನಯದ “ಚಂಬಲ್‌’ ಚಿತ್ರವೂ ಒಂದು. ಈ ಚಿತ್ರ ಈಗ ಬಿಡುಗಡೆಯ ತಯಾರಿಯಲ್ಲಿದೆ. ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯಾವುದೇ ಕಟ್‌ ಇಲ್ಲದೆ “ಯು/ಎ’ ಪ್ರಮಾಣ ಪತ್ರ ನೀಡಿದೆ. ಈಗ “ಚಂಬಲ್‌’ನ ಹೊಸ ಸುದ್ದಿಯೆಂದರೆ, ಅದು ಟ್ರೇಲರ್‌ ಬಿಡುಗಡೆ.

ಹೌದು, ಈ ಚಿತ್ರದ ಟ್ರೇಲರ್‌ ಜನವರಿ 31 ರಂದು ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಚಿತ್ರದ ಟ್ರೇಲರ್‌ಗೆ ಪುನೀತ್‌ರಾಜಕುಮಾರ್‌ ಅವರು ಚಾಲನೆ ನೀಡಲಿದ್ದಾರೆ. ಚಿತ್ರದ ಹೀರೋ ನೀನಾಸಂ ಸತೀಶ್‌ ಅವರಿಗೆ ಪುನೀತ್‌ ಅವರಿಂದಲೇ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿಸಬೇಕು ಎಂಬ ಆಸೆ. ಆ ಆಸೆಗೆ ಪುನೀತ್‌ ಕೂಡ ಗ್ರೀನ್‌ಸಿಗ್ನಲ್‌ ನೀಡುತ್ತಿದ್ದು, ಸತೀಶ್‌ ಅವರ ಆಸೆಯಂತೆ ಜನವರಿ 31 ರಂದು ಪುನೀತ್‌ ಅವರು ಟ್ರೇಲರ್‌ ಬಿಡುಗಡೆ ಮಾಡಲಿದ್ದಾರೆ.

ಈ ಹಿಂದೆ ಕೂಡ ಸತೀಶ್‌ ಅಭಿನಯದ “ಅಯೋಗ್ಯ’ ಚಿತ್ರದ ಹಾಡೊಂದನ್ನು ಪುನೀತ್‌ ಬಿಡುಗಡೆ ಮಾಡಿದ್ದರು. ಅದೇ ಖುಷಿಯಲ್ಲಿರುವ ಸತೀಶ್‌ ಅವರಿಂದ ಬಿಡುಗಡೆ ಮಾಡಿಸಲು ಮುಂದಾಗಿದ್ದಾರೆ. ಅಂದಹಾಗೆ, ಈ ಹಿಂದೆ ಪುನೀತ್‌ ಅವರಿಗೆ “ಪೃಥ್ವಿ’ ಚಿತ್ರವನ್ನು ನಿರ್ದೇಶಿಸಿದ್ದ ಜೇಕಬ್‌ ವರ್ಗಿಸ್‌ ಅವರೇ “ಚಂಬಲ್‌’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, “ಚಂಬಲ್‌’ ಅಂದಾಕ್ಷಣ, ಚಂಬಲ್‌ ಕಣಿವೆಯ ಡಕಾಯಿತರ ನೆನಪಾಗುತ್ತೆ. ಚಿತ್ರದಲ್ಲೂ ಆ ಅಂಶಗಳಿವೆಯಾ? ಎಂಬುದಕ್ಕೆ ಚಿತ್ರ ಬರುವವರೆಗೂ ಕಾಯಬೇಕು ಎಂಬುದು ಚಿತ್ರತಂಡದ ಮಾತು.

ಆದರೂ, ಟ್ರೇಲರ್‌ನಲ್ಲಿ ಒಂದಷ್ಟು ಸೂಕ್ಷ್ಮ ವಿಷಯಗಳಿವೆ. ಅದನ್ನು ನೋಡಿದವರಿಗೆ ಇದು ಯಾವ ರೀತಿಯ ಸಿನಿಮಾ ಎಂಬುದು ಗೊತ್ತಾಗಲಿದೆಯಂತೆ. ಕಥೆಯಲ್ಲಿ  ಒಬ್ಬ ಅಮಾಯಕ, ಒಂದು ಕೂಪದಲ್ಲಿ ಸಿಲುಕೊಂಡು, ಒದ್ದಾಡಿ, ಆ ಬಳಿಕ ಹೇಗೆ ಹೊರಬರುತ್ತಾನೆ ಎಂಬ ವಿಷಯ ಅಡಕವಾಗಿದೆಯಂತೆ. ಇನ್ನು, ಈ ಚಿತ್ರದಲ್ಲಿ ರೋಜರ್‌ ನಾರಾಯಣ್‌, ಸೋನು ಗೌಡ, ಸರ್ದಾರ್‌ ಸತ್ಯ, ಅಚ್ಯುತ್‌ ಕುಮಾರ್‌ ಸೇರಿದಂತೆ ಇತರರು ನಟಿಸಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ.

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.