“ಅವನೇ ಶ್ರೀಮನ್ನಾರಾಯಣ’ನಿಗೆ 200 ದಿನಗಳ ಚಿತ್ರೀಕರಣ


Team Udayavani, Feb 3, 2019, 5:41 AM IST

avane-srimannarayana.jpg

ಕನ್ನಡ ಸಿನಿಮಾವೊಂದರ ಚಿತ್ರೀಕರಣ ನೂರು ದಿನ ದಾಟಿದರೆ ಅನೇಕರು ಹುಬ್ಬೇರಿಸುವ ಸಮಯವೊಂದಿತ್ತು. ಆದರೆ, ಈಗ ನೂರು ದಿನ ದಾಟುವುದು ಸಹಜವಾಗಿದೆ. ಅದೆಷ್ಟೋ ಸಿನಿಮಾಗಳು 130, 160 ದಿನಗಳ ಚಿತ್ರೀಕರಣ ಮಾಡಿವೆ. ಆದರೆ, ಈಗ ಕನ್ನಡ ಚಿತ್ರವೊಂದು ಬರೋಬ್ಬರಿ 200 ದಿನಗಳ ಚಿತ್ರೀಕರಣದತ್ತ ದಾಪುಗಾಲು ಇಡುತ್ತಿದೆ. ಅದು ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರ.

ಸದ್ಯ ಬಹುನಿರೀಕ್ಷೆ ಹುಟ್ಟಿಸಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರೀಕರಣ ನಡೆಯುತ್ತಿದ್ದು, ಈಗಾಗಲೇ 160 ದಿನಗಳ ಕಾಲ ಚಿತ್ರೀಕರಣ ನಡೆದುಹೋಗಿದೆ. ಹಾಗಂತ ಅಷ್ಟಕ್ಕೇ ಚಿತ್ರೀಕರಣ ಮುಗಿದಿದೆ ಎಂದು ನೀವು ಭಾವಿಸುವಂತಿಲ್ಲ. ಇನ್ನೂ 40 ದಿನಗಳ ಕಾಲ ಚಿತ್ರೀಕರಣ ಬಾಕಿ ಇದೆ. ಅಲ್ಲಿಗೆ “ಶ್ರೀಮನ್ನಾರಾಯಣ’ನಿಗೆ 200 ದಿನ ಚಿತ್ರೀಕರಣ ಮಾಡಿದಂತಾಗುತ್ತದೆ. ಎಲ್ಲಾ ಓಕೆ, 200 ದಿನ ಚಿತ್ರೀಕರಣ ಮಾಡುವಂಥದ್ದೇನಿದೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ.

ಇದಕ್ಕೆ ನಿರ್ಮಾಪಕರಾದ ಪುಷ್ಕರ್‌ ಉತ್ತರಿಸುತ್ತಾರೆ. “ಆರಂಭದಲ್ಲಿ ನಾವು ಈ ಸಿನಿಮಾವನ್ನು 100 ದಿನಗಳಲ್ಲಿ ಮುಗಿಸಬೇಕೆಂದುಕೊಂಡಿದ್ದೆವು. ಆದರೆ, ಐದು ಭಾಷೆಗಳಲ್ಲಿ ಈ ಸಿನಿಮಾವನ್ನು ಮಾಡಲು ನಿರ್ಧರಿಸಿದ ನಂತರ ಹೆಚ್ಚು ಡೀಟೇಲ್‌ ಆಗಿ ಕೆಲಸ ಮಾಡಲು ಆರಂಭಿಸಿದೆವು. ಸಾಮಾನ್ಯವಾಗಿ ಹಾಡು, ಫೈಟ್‌ ಅಥವಾ ಕೆಲವು ದೃಶ್ಯಗಳಲ್ಲಿ ಅದ್ಧೂರಿತನವಿರುತ್ತದೆ. ಆದರೆ, ಈ ಸಿನಿಮಾದಲ್ಲಿ ಆರಂಭದಿಂದ ಕೊನೆವರೆಗೂ ಒಂದೇ ತೆರನಾದ ಅದ್ಧೂರಿತನವನ್ನು ಕಾಯ್ದುಕೊಂಡಿದ್ದೇವೆ. ಗುಣಮಟ್ಟಕ್ಕೆ ಹೆಚ್ಚು ಒತ್ತುಕೊಟ್ಟು ಚಿತ್ರ ಮಾಡುತ್ತಿರುವುದರಿಂದ ಚಿತ್ರೀಕರಣದ ದಿನಗಳು ಕೂಡಾ ಹೆಚ್ಚಾಗುತ್ತಿದೆ.

ಚಿತ್ರದ ಬಹುತೇಕ ಚಿತ್ರೀಕರಣ ಸೆಟ್‌ನಲ್ಲಿ ನಡೆದಿದೆ. ನಾಲ್ಕು ಹಾಡು ಹಾಗೂ ಫೈಟ್ಸ್‌ ಚಿತ್ರೀಕರಣಕ್ಕೆ 70 ರಿಂದ 80 ದಿನ ಬೇಕಾಯಿತು. ಈಗಾಗಲೇ 160 ದಿನಗಳ ಚಿತ್ರೀಕರಣವಾಗಿದ್ದು, ಇನ್ನೂ 40 ದಿನ ಬಾಕಿ ಇದೆ. ಬಹುಶಃ 200 ದಿನ ಚಿತ್ರೀಕರಣ ಮಾಡಿದ ಮೊದಲ ಕನ್ನಡ ಸಿನಿಮಾ ನಮ್ಮದೇ ಇರಬೇಕು’ ಎಂದು ವಿವರ ಕೊಡುತ್ತಾರೆ ಪುಷ್ಕರ್‌. ಮಾರ್ಚ್‌ ಕೊನೆಯ ವೇಳೆಗೆ ಚಿತ್ರೀಕರಣ  ಮುಗಿಯಲಿದ್ದು, ಜುಲೈನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ. “ಅವನೇ ಶ್ರೀಮನ್ನಾರಾಯಣ’ ಚಿತ್ರ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.