ಉಪ್ಪಿ ಹೊಸ ರುಚಿ; ಸದ್ದಿಲ್ಲದೆ ಹೊಸ ಚಿತ್ರ ಒಪ್ಪಿದ ಉಪೇಂದ್ರ


Team Udayavani, Feb 7, 2019, 10:12 AM IST

new-movie.jpg

ನಟ ಉಪೇಂದ್ರ ಅವರು ಸಿನಿಮಾಗೆ ಗುಡ್‌ಬೈ ಹೇಳಿ, ಸಂಪೂರ್ಣ ರಾಜಕೀಯಕ್ಕೆ ಎಂಟ್ರಿಯಾಗಿಬಿಡುತ್ತಾರೆ ಅಂದುಕೊಂಡವರಿಗೆ ಕ್ಲೈಮ್ಯಾಕ್ಸ್‌ನಲ್ಲೊಂದು ಹೊಸ ಬದಲಾವಣೆ ಇಟ್ಟರು. ಪುನಃ ಸಿನಿಮಾದತ್ತ ಮುಖ ಮಾಡಿದರು. ಹಾಗೆ ಸಿನಿಮಾಗೆ ವಾಲಿದ್ದೇ ತಡ, ಅವರು ‘ಐ ಲವ್‌ ಯು’ ಎನ್ನುವ ಮೂಲಕ ಜೋರು ಸುದ್ದಿಯಾಗಿಬಿಟ್ಟರು. ಸದ್ದಿಲ್ಲದೆಯೇ, ‘ಐ ಲವ್‌ ಯು’ ಸಿನಿಮಾ ಮುಗಿಸಿ, ಬಿಡುಗಡೆಗೆ ಎದುರು ನೋಡುತ್ತಿರುವ ಉಪೇಂದ್ರ, ಇದೀಗ ಸದ್ದಿಲ್ಲದೆಯೇ ಹೊಸದೊಂದು ಸಿನಿಮಾಗೆ ಜೈ ಎಂದಿದ್ದಾರೆ.

ಹೌದು, ಉಪೇಂದ್ರ ಹೆಸರಿಡದ ಚಿತ್ರಕ್ಕೆ ಹೀರೋ ಆಗಿದ್ದಾರೆ. ಅಂದಹಾಗೆ, ಆ ಚಿತ್ರವನ್ನು ಮೌರ್ಯ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಟಿ.ಆರ್‌.ಚಂದ್ರಶೇಖರ್‌ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ‘ಚಮಕ್‌’, ‘ಅಯೋಗ್ಯ’ ಮತ್ತು ‘ಬೀರ್‌ಬಲ್‌’ ಚಿತ್ರವನ್ನು ನಿರ್ಮಿಸಿದ್ದ ಚಂದ್ರಶೇಖರ್‌ಗೆ ಉಪೇಂದ್ರ ಅವರೊಂದಿಗೆ ಮೊದಲ ಕಾಂಬಿನೇಷನ್‌ ಇದು. ಉಪೇಂದ್ರ ಅವರ ಚಿತ್ರಕ್ಕೆ ಇನ್ನೂ ನಾಮಕರಣ ಮಾಡಿಲ್ಲ. ಆ ಚಿತ್ರದ ಹೆಸರು ಏನಿರಬಹುದು ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಒಂದಷ್ಟು ಕುತೂಹಲ ಕೆರಳಿಸಿದೆ.

ಇದಕ್ಕೆ ಕಾರಣ, ಉಪೇಂದ್ರ. ಅವರು ಯಾವುದೇ ಚಿತ್ರ ಒಪ್ಪಿದರೂ, ಅಲ್ಲೊಂದು ವಿಶೇಷವಿರುತ್ತೆ. ಕಥೆಯಲ್ಲೊಂದು ಹೊಸತನ ಇರುತ್ತೆ. ಹಾಗೆಯೇ ಶೀರ್ಷಿಕೆಯಲ್ಲೂ ಹೊಸದೇನೋ ಇರುತ್ತೆ ಎಂಬುದನ್ನು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಸಾಮಾನ್ಯವಾಗಿ ಉಪೇಂದ್ರ ಅವರ ನಿರ್ದೇಶನದ ಚಿತ್ರಗಳಲ್ಲಿ ವಿಡಂಬನೆ ಹೆಚ್ಚು. ಅದರಲ್ಲೂ ರಾಜಕಾರಣವನ್ನು ಹೆಚ್ಚು ಫೋಕಸ್‌ ಮಾಡಿ ಚಿತ್ರ ಮಾಡಿರುವುದುಂಟು. ಉಪೇಂದ್ರ ಅವರ ಶೈಲಿಯ ಚಿತ್ರಗಳನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ಈಗ ಹೊಸ ಚಿತ್ರದ ಸುದ್ದಿ ಓದುತ್ತಿದ್ದಂತೆಯೇ, ಈ ಚಿತ್ರದ ಕಥೆ ಏನಿರಬಹುದು, ಉಪೇಂದ್ರ ಅವರ ಪಾತ್ರ ಹೇಗಿರಬಹುದು, ಚಿತ್ರದ ಶೀರ್ಷಿಕೆ ಏನಾಗಿರಬಹುದು ಎಂಬ ಆಲೋಚನೆಯಲ್ಲಿರುವುದಂತೂ ಸತ್ಯ. ಆ ಎಲ್ಲಾ ಉತ್ತರಗಳಿಗೆ ಸ್ವಲ್ಪ ದಿನ ಕಾಯಬೇಕೆಂಬುದು ಚಿತ್ರತಂಡದ ಮಾತು.

ಅಂದಹಾಗೆ, ಉಪೇಂದ್ರ ಅಭಿನಯದ ಇನ್ನೂ ಹೆಸರಿಡದ ಚಿತ್ರಕ್ಕೆ ಗುರುಕಿರಣ್‌ ಅವರ ಸಂಗೀತವಿದೆ. ಉಪೇಂದ್ರ ಅವರ ಹಿಂದಿನ ಚಿತ್ರಗಳಿಗೆ ಗುರುಕಿರಣ್‌ ಸಂಗೀತದ ಸ್ಪರ್ಶವಿತ್ತು. ಅವರಿಬ್ಬರ ಕಾಂಬಿನೇಷನ್‌ ಮೋಡಿ ಮಾಡಿದ್ದು ಎಲ್ಲರಿಗೂ ಗೊತ್ತು. ಬಹಳ ದಿನಗಳ ಬಳಿಕ ಗುರುಕಿರಣ್‌ ಅವರು ಉಪೇಂದ್ರ ಅವರ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇನ್ನು, ಭರತ್‌ ಪರಶುರಾಮ್‌ ಅವರು ಚಿತ್ರದ ಛಾಯಾಗ್ರಹಣ ಮಾಡುತ್ತಿದ್ದಾರೆ. ರಾಮ್‌ ಕೆ. ಲಕ್ಷ್ಮಣ್‌ ಅವರು ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಸದ್ಯಕ್ಕೆ ಈ ಚಿತ್ರದ ಮಾಹಿತಿ ಇಷ್ಟು. ಚಿತ್ರದಲ್ಲಿ ಉಪೇಂದ್ರ ಅವರಿಗೆ ಯಾರು ನಾಯಕಿಯಾಗುತ್ತಾರೆ. ಇನ್ನುಳಿದಂತೆ ಯಾರೆಲ್ಲಾ ಇರುತ್ತಾರೆ ಎಂಬುದಕ್ಕೆ ಇನ್ನೂ ಸಮಯವಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.