ಕೆಮಿಸ್ಟ್ರಿ ವರ್ಕೌಟ್‌ ಆಗುವ ನಿರೀಕ್ಷೆಯಲ್ಲಿ ಸಂಜನಾ


Team Udayavani, Feb 10, 2019, 5:47 AM IST

chemistry-kariyapp.jpg

ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ ಸಂಜನಾ ಆನಂದ್‌ ಎಂಬ ಹುಡುಗಿಯ ಆಗಮನವಾಗಿದೆ. ಯಾರು ಈ ಸಂಜನಾ ಆನಂದ್‌ ಎಂಬ ಪ್ರಶ್ನೆ ಎದುರಾದರೆ, ಅದಕ್ಕೆ ಉತ್ತರ “ಕೆಮಿಸ್ಟ್ರಿ ಆಫ್ ಕರಿಯಪ್ಪ’. ಈಗಾಗಲೇ ಟ್ರೇಲರ್‌ ಮತ್ತು ಸಾಂಗ್‌ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ನಾಯಕಿ ಈ ಸಂಜನಾ ಆನಂದ್‌. ಇದು ಇವರ ಮೊದಲ ಚಿತ್ರ.

ಹಾಗೆ ನೋಡಿದರೆ, ಸಂಜನಾ ಆನಂದ್‌ಗೆ ಸಿನಿಮಾ ರಂಗ ಹೊಸದು. ಎಂಜಿನಿಯರಿಂಗ್‌ ಓದಿ, ಎರಡು ವರ್ಷ ಡೆಲ್‌ ಕಂಪೆನಿಯಲ್ಲಿ ಕೆಲಸ ಮಾಡಿರುವ ಸಂಜನಾಗೆ ಸಿನಿಮಾ ಅವಕಾಶ ಬಂದಿದ್ದೇ ತಡ, ಕೆಲಸ ಮಾಡುವುದಾ ಅಥವಾ ಸಿನಿಮಾ ಮಾಡುವುದಾ ಎಂಬ ಪ್ರಶ್ನೆ ಎದುರಾಗಿದ್ದು ನಿಜ. ಕೊನೆಗೆ ಕಥೆ ಮತ್ತು ಪಾತ್ರ ಚೆನ್ನಾಗಿದೆ, ಹೇಗೋ ವೀಕೆಂಡ್‌ನ‌ಲ್ಲಿ ಮತ್ತು ಒಂದಷ್ಟು ರಜಾ ಪಡೆದು ಸಿನಿಮಾ ಮಾಡಿದರಾಯ್ತು ಅಂತ ಈ ಚಿತ್ರ ಒಪ್ಪಿಕೊಂಡ ಸಂಜನಾ ಆನಂದ್‌ಗೆ, ಅದು ಸುಲಭವಾಗಲಿಲ್ಲ.

ಕೊನೆಗೆ ತನ್ನ ಕೆಲಸಕ್ಕೆ ಗುಡ್‌ಬೈ ಹೇಳಿ, “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅವರಿಗೆ ಕೆಲಸ ಬಿಟ್ಟಿದ್ದಕ್ಕೂ ಖುಷಿ ಇದೆ. ಈ ಸಿನಿಮಾ ಒಪ್ಪಿಕೊಂಡಿದ್ದಕ್ಕೂ ಹೆಮ್ಮೆ ಇದೆ. ಆ ಬಗ್ಗೆ ಹೇಳುವ ಸಂಜನಾ ಆನಂದ್‌, “ನನಗೆ ಈ ಚಿತ್ರ ಗಂಭೀರವಾಗುತ್ತಾ ಹೋಯ್ತು. ಕೆಲಸ ಬಿಟ್ಟು, ಪೂರ್ಣಪ್ರಮಾಣದಲ್ಲಿ ಇಲ್ಲಿ ಕೆಲಸ ಮಾಡಿದೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ.

ನನಗೂ ಕೆಮಿಸ್ಟ್ರಿ ವರ್ಕೌಟ್‌ ಆಗುತ್ತೆ ಎಂಬ ಅದಮ್ಯ ವಿಶ್ವಾಸವಿದೆ. ಹಾಗೆ ನೋಡಿದರೆ, ನನಗೆ ನಟನೆ ಗೊತ್ತಿಲ್ಲ. ನಿರ್ದೇಶಕರು ವರ್ಕ್‌ಶಾಪ್‌ ನಡೆಸಿ, ಆ ನಂತರ ಕ್ಯಾಮೆರಾ ಮುಂದೆ ನಿಲ್ಲಿಸಿದರು’ ಎಂದು ವಿವರ ಕೊಡುತ್ತಾರೆ ಸಂಜನಾ. ಸಂಜನಾ ಅವರಿಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಆ ಬಗ್ಗೆ ಹೇಳುವ ಅವರು, “ಚಿತ್ರದಲ್ಲಿ ನನ್ನದು ಹಳ್ಳಿ ಹುಡುಗಿ ಪಾತ್ರ. ಸಂಭಾಷಣೆ ಮತ್ತು ಬಾಡಿಲಾಂಗ್ವೇಜ್‌ ಬಗ್ಗೆ ಏನೇನೂ ಗೊತ್ತಿರಲಿಲ್ಲ.

ಸಿನಿಮಾ ಮಾಡುತ್ತಲೇ ಎಲ್ಲವನ್ನೂ ಕಲಿತಿದ್ದೇನೆ. ಈಗ ಧೈರ್ಯ ಬಂದಿದೆ. ಸಿನಿಮಾದಲ್ಲೇ ಗಟ್ಟಿ ನೆಲೆ ಕಾಣುವ ವಿಶ್ವಾಸವೂ ಇದೆ. ಹಾಗಂತ, ಇಲ್ಲಿ ಅಂದುಕೊಂಡಂತೆ ನಡೆಯದಿದ್ದರೂ, ಎಜುಕೇಶನ್‌ ಇದೆ ಪುನಃ ಯಾವುದಾದರೊಂದು ಕೆಲಸ ಮಾಡ್ತೀನಿ’ ಎನ್ನುವ ಸಂಜನಾ, ಭರತನಾಟ್ಯ ಡ್ಯಾನ್ಸರ್‌ ಕೂಡ ಹೌದು.

ಚಿತ್ರದಲ್ಲಿ ನಟ ತಬಲನಾಣಿ ಅವರ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಅವರು, ಚಿತ್ರದಲ್ಲಿ ಎಲ್ಲವನ್ನೂ ಕಲಿಯೋಕೆ ಕಾರಣ ಅವರೂ ಒಬ್ಬರು ಎನ್ನುವುದನ್ನು ಮರೆಯಲಿಲ್ಲ. ಚಿತ್ರೀಕರಣ ವೇಳೆ ಪ್ರತಿ ಸೀನ್‌ ಮತ್ತು ಡೈಲಾಗ್‌ ಬಗ್ಗೆ ಹೇಳಿಕೊಟ್ಟು, ತಿದ್ದಿದ್ದಾರೆ ಎಂದು ತಬಲನಾಣಿ ಅವರ ಸಹಕಾರವನ್ನು ಕೊಂಡಾಡುತ್ತಾರೆ. ಸದ್ಯ ಸಂಜನಾ, ಈ ಚಿತ್ರದ ಫ‌ಲಿತಾಂಶ ಎದುರು ನೋಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಚಿತ್ರ ರುಚಿಸುತ್ತದೆ ಎಂಬ ಗ್ಯಾರಂಟಿಯನ್ನೂ ಕೊಡುತ್ತಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.