ಕೆಮಿಸ್ಟ್ರಿ ವರ್ಕೌಟ್‌ ಆಗುವ ನಿರೀಕ್ಷೆಯಲ್ಲಿ ಸಂಜನಾ


Team Udayavani, Feb 10, 2019, 5:47 AM IST

chemistry-kariyapp.jpg

ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ ಸಂಜನಾ ಆನಂದ್‌ ಎಂಬ ಹುಡುಗಿಯ ಆಗಮನವಾಗಿದೆ. ಯಾರು ಈ ಸಂಜನಾ ಆನಂದ್‌ ಎಂಬ ಪ್ರಶ್ನೆ ಎದುರಾದರೆ, ಅದಕ್ಕೆ ಉತ್ತರ “ಕೆಮಿಸ್ಟ್ರಿ ಆಫ್ ಕರಿಯಪ್ಪ’. ಈಗಾಗಲೇ ಟ್ರೇಲರ್‌ ಮತ್ತು ಸಾಂಗ್‌ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ನಾಯಕಿ ಈ ಸಂಜನಾ ಆನಂದ್‌. ಇದು ಇವರ ಮೊದಲ ಚಿತ್ರ.

ಹಾಗೆ ನೋಡಿದರೆ, ಸಂಜನಾ ಆನಂದ್‌ಗೆ ಸಿನಿಮಾ ರಂಗ ಹೊಸದು. ಎಂಜಿನಿಯರಿಂಗ್‌ ಓದಿ, ಎರಡು ವರ್ಷ ಡೆಲ್‌ ಕಂಪೆನಿಯಲ್ಲಿ ಕೆಲಸ ಮಾಡಿರುವ ಸಂಜನಾಗೆ ಸಿನಿಮಾ ಅವಕಾಶ ಬಂದಿದ್ದೇ ತಡ, ಕೆಲಸ ಮಾಡುವುದಾ ಅಥವಾ ಸಿನಿಮಾ ಮಾಡುವುದಾ ಎಂಬ ಪ್ರಶ್ನೆ ಎದುರಾಗಿದ್ದು ನಿಜ. ಕೊನೆಗೆ ಕಥೆ ಮತ್ತು ಪಾತ್ರ ಚೆನ್ನಾಗಿದೆ, ಹೇಗೋ ವೀಕೆಂಡ್‌ನ‌ಲ್ಲಿ ಮತ್ತು ಒಂದಷ್ಟು ರಜಾ ಪಡೆದು ಸಿನಿಮಾ ಮಾಡಿದರಾಯ್ತು ಅಂತ ಈ ಚಿತ್ರ ಒಪ್ಪಿಕೊಂಡ ಸಂಜನಾ ಆನಂದ್‌ಗೆ, ಅದು ಸುಲಭವಾಗಲಿಲ್ಲ.

ಕೊನೆಗೆ ತನ್ನ ಕೆಲಸಕ್ಕೆ ಗುಡ್‌ಬೈ ಹೇಳಿ, “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅವರಿಗೆ ಕೆಲಸ ಬಿಟ್ಟಿದ್ದಕ್ಕೂ ಖುಷಿ ಇದೆ. ಈ ಸಿನಿಮಾ ಒಪ್ಪಿಕೊಂಡಿದ್ದಕ್ಕೂ ಹೆಮ್ಮೆ ಇದೆ. ಆ ಬಗ್ಗೆ ಹೇಳುವ ಸಂಜನಾ ಆನಂದ್‌, “ನನಗೆ ಈ ಚಿತ್ರ ಗಂಭೀರವಾಗುತ್ತಾ ಹೋಯ್ತು. ಕೆಲಸ ಬಿಟ್ಟು, ಪೂರ್ಣಪ್ರಮಾಣದಲ್ಲಿ ಇಲ್ಲಿ ಕೆಲಸ ಮಾಡಿದೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ.

ನನಗೂ ಕೆಮಿಸ್ಟ್ರಿ ವರ್ಕೌಟ್‌ ಆಗುತ್ತೆ ಎಂಬ ಅದಮ್ಯ ವಿಶ್ವಾಸವಿದೆ. ಹಾಗೆ ನೋಡಿದರೆ, ನನಗೆ ನಟನೆ ಗೊತ್ತಿಲ್ಲ. ನಿರ್ದೇಶಕರು ವರ್ಕ್‌ಶಾಪ್‌ ನಡೆಸಿ, ಆ ನಂತರ ಕ್ಯಾಮೆರಾ ಮುಂದೆ ನಿಲ್ಲಿಸಿದರು’ ಎಂದು ವಿವರ ಕೊಡುತ್ತಾರೆ ಸಂಜನಾ. ಸಂಜನಾ ಅವರಿಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಆ ಬಗ್ಗೆ ಹೇಳುವ ಅವರು, “ಚಿತ್ರದಲ್ಲಿ ನನ್ನದು ಹಳ್ಳಿ ಹುಡುಗಿ ಪಾತ್ರ. ಸಂಭಾಷಣೆ ಮತ್ತು ಬಾಡಿಲಾಂಗ್ವೇಜ್‌ ಬಗ್ಗೆ ಏನೇನೂ ಗೊತ್ತಿರಲಿಲ್ಲ.

ಸಿನಿಮಾ ಮಾಡುತ್ತಲೇ ಎಲ್ಲವನ್ನೂ ಕಲಿತಿದ್ದೇನೆ. ಈಗ ಧೈರ್ಯ ಬಂದಿದೆ. ಸಿನಿಮಾದಲ್ಲೇ ಗಟ್ಟಿ ನೆಲೆ ಕಾಣುವ ವಿಶ್ವಾಸವೂ ಇದೆ. ಹಾಗಂತ, ಇಲ್ಲಿ ಅಂದುಕೊಂಡಂತೆ ನಡೆಯದಿದ್ದರೂ, ಎಜುಕೇಶನ್‌ ಇದೆ ಪುನಃ ಯಾವುದಾದರೊಂದು ಕೆಲಸ ಮಾಡ್ತೀನಿ’ ಎನ್ನುವ ಸಂಜನಾ, ಭರತನಾಟ್ಯ ಡ್ಯಾನ್ಸರ್‌ ಕೂಡ ಹೌದು.

ಚಿತ್ರದಲ್ಲಿ ನಟ ತಬಲನಾಣಿ ಅವರ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಅವರು, ಚಿತ್ರದಲ್ಲಿ ಎಲ್ಲವನ್ನೂ ಕಲಿಯೋಕೆ ಕಾರಣ ಅವರೂ ಒಬ್ಬರು ಎನ್ನುವುದನ್ನು ಮರೆಯಲಿಲ್ಲ. ಚಿತ್ರೀಕರಣ ವೇಳೆ ಪ್ರತಿ ಸೀನ್‌ ಮತ್ತು ಡೈಲಾಗ್‌ ಬಗ್ಗೆ ಹೇಳಿಕೊಟ್ಟು, ತಿದ್ದಿದ್ದಾರೆ ಎಂದು ತಬಲನಾಣಿ ಅವರ ಸಹಕಾರವನ್ನು ಕೊಂಡಾಡುತ್ತಾರೆ. ಸದ್ಯ ಸಂಜನಾ, ಈ ಚಿತ್ರದ ಫ‌ಲಿತಾಂಶ ಎದುರು ನೋಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಚಿತ್ರ ರುಚಿಸುತ್ತದೆ ಎಂಬ ಗ್ಯಾರಂಟಿಯನ್ನೂ ಕೊಡುತ್ತಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.