ಇನ್ಸ್ಪೆಕ್ಟರ್ ವಿಕ್ರಂ ಜೊತೆ ರಘು ಮುಖರ್ಜಿ
Team Udayavani, Feb 11, 2019, 5:17 AM IST
ಪ್ರಜ್ವಲ್ ಅಭಿನಯದ “ಇನ್ಸ್ಪೆಕ್ಟರ್ ವಿಕ್ರಂ’ ಚಿತ್ರದಲ್ಲಿ ದಿನ ಕಳೆದಂತೆ ಅತಿಥಿ ಪಾತ್ರಗಳ ಎಂಟ್ರಿ ಹೆಚ್ಚಾಗುತ್ತಲೇ ಇದೆ. ಈ ಹಿಂದೆ ದರ್ಶನ್ ಅವರು ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಸುದ್ದಿ ಜೋರಾಗಿತ್ತು. ಅದರ ಬೆನ್ನ ಹಿಂದೆಯೇ ರಮೇಶ್ ಅರವಿಂದ್ ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೂ ಸುದ್ದಿಯಾಗಿತ್ತು. ಈಗ ರಘು ಮುಖರ್ಜಿ ಅವರ ಸರದಿ. ಹೌದು, ರಘು ಮುಖರ್ಜಿ ಅವರು “ಇನ್ಸ್ಪೆಕ್ಟರ್ ವಿಕ್ರಂ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಂದಹಾಗೆ, ರಘು ಮುಖರ್ಜಿ ಅವರು ಈ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇಂದಿನಿಂದ (ಫೆ.11) ಚಿತ್ರದ ಚಿತ್ರೀಕರಣ ಶುರುವಾಗಲಿದೆ. ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇದಾಗಿದ್ದು, 18 ದಿನಗಳ ಕಾಲ ನಡೆದರೆ, ಚಿತ್ರೀಕರಣ ಪೂರ್ಣಗೊಳ್ಳಲಿದೆ. ರಘುಮುಖರ್ಜಿ ಅವರಿಲ್ಲಿ ವಿಂಟೇಜ್ ಎಪಿಸೋಡ್ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೆಟ್ರೋ ಶೈಲಿಯ ದೃಶ್ಯಗಳು ಇರಲಿವೆ.
ನಾಯಕನ ಜೊತೆ ಅವರ ಜುಗಲ್ಬಂಧಿ ನಡೆಯಲಿದೆ. ಒಂದು ರೀತಿಯ ನಾನಾ-ನೀನಾ ಎನ್ನುವ ರೀತಿಯ ಪಾತ್ರ ಇಲ್ಲಿರಲಿದೆ. ಇದೇ ಮೊದಲ ಬಾರಿಗೆ ರಘುಮುಖರ್ಜಿ ಅವರು ನೆಗೆಟಿವ್ ಶೇಡ್ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಬಳಿಕ ಕಥೆ ಮತ್ತು ಪಾತ್ರದ ಬಗ್ಗೆ ವಿವರಿಸಿದಾಗ, ಮೊದಲು ಪಾತ್ರ ಮಾಡುವುದಾ, ಬಿಡುವುದಾ ಎಂಬ ಗೊಂದಲದಲ್ಲಿದ್ದರಂತೆ. ಕೊನೆಗೆ, ಪಾತ್ರ ಚೆನ್ನಾಗಿದೆ ಎಂದು ನೆಗೆಟಿವ್ ಶೇಡ್ ಪಾತ್ರ ಮಾಡ್ತೀನಿ ಅಂತ ಒಪ್ಪಿಕೊಂಡು ಮಾಡುತ್ತಿದ್ದಾರೆ ಎಂಬುದು ನಿರ್ಮಾಪಕ ವಿಖ್ಯಾತ್ ಅವರ ಮಾತು.
ಇಷ್ಟಕ್ಕೂ ರಘುಮುಖರ್ಜಿ ಅವರನ್ನೇ ಆ ನೆಗೆಟಿವ್ ಶೇಡ್ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲು ಕಾರಣದ ಬಗ್ಗೆ ವಿವರಿಸುವ, ವಿಖ್ಯಾತ್, ರಘುಮುಖರ್ಜಿ ಅವರದು ಬೇಸ್ ವಾಯ್ಸ ಇದೆ. ಇದುವರೆಗೆ ಆ ವಾಯ್ಸ ಪಾಸಿಟಿವ್ ಪಾತ್ರಗಳಿಗೆ ಸೀಮಿತವಾಗಿತ್ತು. ಆದರೆ, ಈ ಚಿತ್ರದಲ್ಲಿ ನೆಗೆಟಿವ್ ಶೇಡ್ ಇರುವ ಪಾತ್ರದಲ್ಲಿ ಅವರ ಬೇಸ್ ವಾಯ್ಸ ಕೇಳಲಿದೆ. ಇದೊಂದು ರೀತಿಯ ಹೊಸ ಪ್ರಯತ್ನದ ಪಾತ್ರ ಕಟ್ಟಿಕೊಡಲಾಗಿದೆ ಎನ್ನುವ ನಿರ್ಮಾಪಕರು, ಚಿತ್ರ ಕಳೆದ ಎರಡು ತಿಂಗಳ ಹಿಂದೆಯೇ ಮುಗಿಯಬೇಕಿತ್ತು. ಆದರೆ, ಹಲವು ಕಾರಣಗಳಿಂದ ಸಾಧ್ಯವಾಗಲಿಲ್ಲ.
ಈಗ ಕೊನೆಯ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗುತ್ತಿದೆ’ ಎನ್ನುತ್ತಾರೆ ಅವರು. “ಇನ್ಸ್ಪೆಕ್ಟರ್ ವಿಕ್ರಂ’ ಪ್ರಜ್ವಲ್ ದೇವರಾಜ್ ಅಭಿನಯದ 30 ನೇ ಸಿನಿಮಾ ಎಂಬುದು ವಿಶೇಷ. ನರಸಿಂಹ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಅವರಿಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತುಂಬಾ ಸ್ಟೈಲಿಶ್ ಪಾತ್ರ ಕಟ್ಟಿಕೊಟ್ಟಿರುವ ನಿರ್ದೇಶಕರು, ಕ್ಲಾಸ್ ಜೊತೆಗೆ ಮಾಸ್ ಎಲಿಮೆಂಟ್ಸ್ ಇಟ್ಟುಕೊಂಡು ಈ ಚಿತ್ರವನ್ನು ಮಾಡುತ್ತಿದ್ದಾರೆ. ಇದೊಂದು ಫನ್ ಬೇಸ್ಡ್ ಆ್ಯಕ್ಷನ್ ಚಿತ್ರ ಎಂಬುದು ಚಿತ್ರತಂಡದ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ