ಇನ್ಸ್‌ಪೆಕ್ಟರ್‌ ವಿಕ್ರಂ ಜೊತೆ ರಘು ಮುಖರ್ಜಿ


Team Udayavani, Feb 11, 2019, 5:17 AM IST

inspector.jpg

ಪ್ರಜ್ವಲ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ದಿನ ಕಳೆದಂತೆ ಅತಿಥಿ ಪಾತ್ರಗಳ ಎಂಟ್ರಿ ಹೆಚ್ಚಾಗುತ್ತಲೇ ಇದೆ. ಈ ಹಿಂದೆ ದರ್ಶನ್‌ ಅವರು ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಸುದ್ದಿ ಜೋರಾಗಿತ್ತು. ಅದರ ಬೆನ್ನ ಹಿಂದೆಯೇ ರಮೇಶ್‌ ಅರವಿಂದ್‌ ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೂ ಸುದ್ದಿಯಾಗಿತ್ತು. ಈಗ ರಘು ಮುಖರ್ಜಿ ಅವರ ಸರದಿ. ಹೌದು, ರಘು ಮುಖರ್ಜಿ ಅವರು “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ, ರಘು ಮುಖರ್ಜಿ ಅವರು ಈ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇಂದಿನಿಂದ (ಫೆ.11) ಚಿತ್ರದ ಚಿತ್ರೀಕರಣ ಶುರುವಾಗಲಿದೆ. ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇದಾಗಿದ್ದು, 18 ದಿನಗಳ ಕಾಲ ನಡೆದರೆ, ಚಿತ್ರೀಕರಣ ಪೂರ್ಣಗೊಳ್ಳಲಿದೆ. ರಘುಮುಖರ್ಜಿ ಅವರಿಲ್ಲಿ ವಿಂಟೇಜ್‌ ಎಪಿಸೋಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೆಟ್ರೋ ಶೈಲಿಯ ದೃಶ್ಯಗಳು ಇರಲಿವೆ.

ನಾಯಕನ ಜೊತೆ ಅವರ ಜುಗಲ್‌ಬಂಧಿ ನಡೆಯಲಿದೆ. ಒಂದು ರೀತಿಯ ನಾನಾ-ನೀನಾ ಎನ್ನುವ ರೀತಿಯ ಪಾತ್ರ ಇಲ್ಲಿರಲಿದೆ. ಇದೇ ಮೊದಲ ಬಾರಿಗೆ ರಘುಮುಖರ್ಜಿ ಅವರು ನೆಗೆಟಿವ್‌ ಶೇಡ್‌ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಬಳಿಕ ಕಥೆ ಮತ್ತು ಪಾತ್ರದ ಬಗ್ಗೆ ವಿವರಿಸಿದಾಗ, ಮೊದಲು ಪಾತ್ರ ಮಾಡುವುದಾ, ಬಿಡುವುದಾ ಎಂಬ ಗೊಂದಲದಲ್ಲಿದ್ದರಂತೆ. ಕೊನೆಗೆ, ಪಾತ್ರ ಚೆನ್ನಾಗಿದೆ ಎಂದು ನೆಗೆಟಿವ್‌ ಶೇಡ್‌ ಪಾತ್ರ ಮಾಡ್ತೀನಿ ಅಂತ ಒಪ್ಪಿಕೊಂಡು ಮಾಡುತ್ತಿದ್ದಾರೆ ಎಂಬುದು ನಿರ್ಮಾಪಕ ವಿಖ್ಯಾತ್‌ ಅವರ ಮಾತು.

ಇಷ್ಟಕ್ಕೂ ರಘುಮುಖರ್ಜಿ ಅವರನ್ನೇ ಆ ನೆಗೆಟಿವ್‌ ಶೇಡ್‌ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲು ಕಾರಣದ ಬಗ್ಗೆ ವಿವರಿಸುವ, ವಿಖ್ಯಾತ್‌, ರಘುಮುಖರ್ಜಿ ಅವರದು ಬೇಸ್‌ ವಾಯ್ಸ ಇದೆ. ಇದುವರೆಗೆ ಆ ವಾಯ್ಸ ಪಾಸಿಟಿವ್‌ ಪಾತ್ರಗಳಿಗೆ ಸೀಮಿತವಾಗಿತ್ತು. ಆದರೆ, ಈ ಚಿತ್ರದಲ್ಲಿ ನೆಗೆಟಿವ್‌ ಶೇಡ್‌ ಇರುವ ಪಾತ್ರದಲ್ಲಿ ಅವರ ಬೇಸ್‌ ವಾಯ್ಸ ಕೇಳಲಿದೆ. ಇದೊಂದು ರೀತಿಯ ಹೊಸ ಪ್ರಯತ್ನದ ಪಾತ್ರ ಕಟ್ಟಿಕೊಡಲಾಗಿದೆ ಎನ್ನುವ ನಿರ್ಮಾಪಕರು, ಚಿತ್ರ ಕಳೆದ ಎರಡು ತಿಂಗಳ ಹಿಂದೆಯೇ ಮುಗಿಯಬೇಕಿತ್ತು. ಆದರೆ, ಹಲವು ಕಾರಣಗಳಿಂದ ಸಾಧ್ಯವಾಗಲಿಲ್ಲ.

ಈಗ ಕೊನೆಯ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗುತ್ತಿದೆ’ ಎನ್ನುತ್ತಾರೆ ಅವರು. “ಇನ್ಸ್‌ಪೆಕ್ಟರ್‌ ವಿಕ್ರಂ’ ಪ್ರಜ್ವಲ್‌ ದೇವರಾಜ್‌ ಅಭಿನಯದ 30 ನೇ ಸಿನಿಮಾ ಎಂಬುದು ವಿಶೇಷ. ನರಸಿಂಹ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಪ್ರಜ್ವಲ್‌ ದೇವರಾಜ್‌ ಅವರಿಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತುಂಬಾ ಸ್ಟೈಲಿಶ್‌ ಪಾತ್ರ ಕಟ್ಟಿಕೊಟ್ಟಿರುವ ನಿರ್ದೇಶಕರು, ಕ್ಲಾಸ್‌ ಜೊತೆಗೆ ಮಾಸ್‌ ಎಲಿಮೆಂಟ್ಸ್‌ ಇಟ್ಟುಕೊಂಡು ಈ ಚಿತ್ರವನ್ನು ಮಾಡುತ್ತಿದ್ದಾರೆ. ಇದೊಂದು ಫ‌ನ್‌ ಬೇಸ್ಡ್ ಆ್ಯಕ್ಷನ್‌ ಚಿತ್ರ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.