ಗೆಲ್ಲುವ ನಿರೀಕ್ಷೆಯಲ್ಲಿ ಕೃತಿಕಾ


Team Udayavani, Feb 12, 2019, 5:46 AM IST

kruthika.jpg

ನಟಿ ಕೃತಿಕಾ ಈಗ ಖುಷಿಯಲ್ಲಿದ್ದಾರೆ. ಅವರ ಖುಷಿಗೆ ಕಾರಣ “ಯಾರಿಗೆ ಯಾರುಂಟು’. ಹೌದು, ಇದೇ ಮೊದಲ ಸಲ ಅವರು ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಚಿತ್ರದ ಪಾತ್ರ ಕೂಡ ತೂಕ ಹೆಚ್ಚಿಸಿದ್ದು, ಎಲ್ಲರೂ ಹೊಸ ಕೃತಿಕಾಳನ್ನಿಲ್ಲಿ ಕಾಣಬಹುದು ಎಂಬ ಸಂತಸ ಅವರದು. ಅಂದಹಾಗೆ, ಇದೇ ಮೊದಲ ಬಾರಿಗೆ ಕೃತಿಕಾ ಪಕ್ಕಾ ಕಮರ್ಷಿಯಲ್‌ ಚಿತ್ರದಲ್ಲಿ ನಟಿಸಿದ್ದಾರೆ.

ಅದರಲ್ಲೂ ಕಥೆ ಎಲ್ಲಾ ವರ್ಗಕ್ಕೂ ಇಷ್ಟವಾಗುವಂತಿದ್ದರಿಂದಲೇ ಅವರು, ಚಿತ್ರದಲ್ಲಿ ಚಾಲೆಂಜಿಂಗ್‌ ಆಗಿರುವ ಪಾತ್ರವನ್ನು ಎಂಜಾಯ್‌ ಮಾಡಿಕೊಂಡೇ ನಿರ್ವಹಿಸಿದ್ದಾರಂತೆ. ಇನ್ನೊಂದು ವಿಷಯವನ್ನು ಹೆಮ್ಮೆಯಿಂದ ಹೇಳಿಕೊಳ್ಳುವ ಕೃತಿಕಾ, “ಯಾರಿಗೆ ಯಾರುಂಟು’ ಚಿತ್ರ ಜನರಿಗೆ ಎಷ್ಟರಮಟ್ಟಿಗೆ ನಿರೀಕ್ಷೆ ಹೆಚ್ಚಿಸಿದೆಯೋ ಗೊತ್ತಿಲ್ಲ, ಆದರೆ, ನನಗಂತೂ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಮೊದಲ ಸಲ, ಸಿನಿಮಾದೊಳಗಿನ ಸಿನಿಮಾ ಸೆಲೆಬ್ರಿಟಿಯಾಗಿ ನಟಿಸಿದ್ದು, ಆ ಪಾತ್ರದಲ್ಲಿ ನಾನು ಹೇಗೆ ಕಾಣಿಸುತ್ತೇನೆ ಎಂದು ನೋಡುವ ಕಾತುರ ಇದೆ’ ಎಂಬುದು ಕೃತಿಕಾ ಮಾತು. “ಪಟ್ರೆ ಲವ್ಸ್‌ ಪದ್ಮ’ ಚಿತ್ರದ ಬಳಿಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಕೃತಿಕಾ, ಅಲ್ಲಿ ಮಿಂಚಿ, ಸಿನಿಮಾಗೆ ಬರಬೇಕು ಅಂತ ಒಳ್ಳೆಯ ಕಥೆಗಳನ್ನು ಎದುರು ನೋಡುತ್ತಿದ್ದರು. ಸಿಕ್ಕ ಎರಡು ಚಿತ್ರಗಳಲ್ಲೂ ನಟಿಸಿದರು. ಸದ್ಯಕ್ಕೆ “ಕೆಂಗುಲಾಬಿ’ ಮತ್ತು “ಶಾದೂಲ’ ಬಿಡುಗಡೆಯಾಗಬೇಕಿದೆ.

“ಯಾರಿಗೆ ಯಾರುಂಟು’ ಚಿತ್ರ ಫೆ.22 ರಂದು ಬಿಡುಗಡೆ ಕಾಣುತ್ತಿದೆ. ನಿರ್ದೇಶಕ ಕಿರಣ್‌ ಗೋವಿ ಅವರು ಕಥೆ ಹೇಳಿದ್ದನ್ನು ಕೇಳಿದ ಕೃತಿಕಾ, ಕಥೆಯಲ್ಲಿ ಸಾಕಷ್ಟು ವಿಶೇಷತೆಗಳಿವೆ ಎಂಬುದನ್ನು ಅರಿತು ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಚಿತ್ರ ಅವರೇ ಅವರನ್ನು ಜಡ್ಜ್ ಮಾಡಿಕೊಳ್ಳುವಂತಹ ಚಿತ್ರ ಎಂಬುದು ಅವರ ಮಾತು. ಅಂದಹಾಗೆ, ಕೃತಿಕಾ ಅವರಿಲ್ಲಿ ಪಕ್ಕಾ ಗ್ಲಾಮರ್‌ ಆಗಿ ಕಾಣಿಸಿಕೊಂಡಿರುವುದಲ್ಲದೆ, ಯಾರನ್ನೂ ಹತ್ತಿರ ಬಿಟ್ಟುಕೊಳ್ಳದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅವರನ್ನು ಯಾರಾದರೂ ಕೆಣಕಿದರೆ, ಅವರು ತಮ್ಮ ವ್ಯಕ್ತಿತ್ವವನ್ನೇ ಬದಲಿಸಿಕೊಂಡು ತೆರೆಯ ಮೇಲೆ ಹೊಸ ರೂಪ ಪಡೆದುಕೊಳ್ಳವ ಚಾಲೆಂಜ್‌ ಪಾತ್ರವಂತೆ. ಇಲ್ಲಿ ಮೂರ್‍ನಾಲ್ಕು ಶೇಡ್‌ ಇರುವ ಪಾತ್ರ ಆಗಿದ್ದರಿಂದ ಸಾಕಷ್ಟು ಚರ್ಚಿಸಿ, ಕೆಲಸ ಮಾಡಿದ್ದೇನೆ. ಎರಡು ತಾಸು ಅರಾಮವಾಗಿ ಕುಳಿತು ಎಂಜಾಯ್‌ ಮಾಡಿಕೊಂಡು ನೋಡುವಂತಹ ಚಿತ್ರವಿದು. ಒಂದು ಮಾತಂತೂ ನಿಜ.

ಸಿನಿಮಾ ನೋಡಿ ಹೊರಬಂದವರಿಗೆ ಮೈಂಡ್‌ ರಿಫ್ರೆಶ್‌ ಆಗುವ ಗ್ಯಾರಂಟಿ ಕೊಡುತ್ತಾರೆ. ಮೂವರು ನಾಯಕಿಯರ ಪೈಕಿ ಕೃತಿಕಾ ಕೂಡ ಒಬ್ಬರಾಗಿದ್ದು, ಒಂದು ಆರೋಗ್ಯಧಾಮದಲ್ಲಿ ನಡೆಯುವಂತಹ ಅಪರೂಪದ ಕಥೆ ಚಿತ್ರದ ಹೈಲೈಟ್‌. ಸಾಮಾನ್ಯವಾಗಿ ಆಸ್ಪತ್ರೆ ಅಂದರೆ ಒಂದು ರೀತಿಯ ಭಯ, ಗೊಂದಲ, ಟೆನ್ಷನ್‌ ಕಾಮನ್‌. ಆದರೆ, ಇಲ್ಲಿ ಆರೋಗ್ಯಧಾಮದಲ್ಲೇ ಕಥೆ ಸಾಗುವುದರಿಂದ ಸಂಪೂರ್ಣ ಮನರಂಜನೆಯಲ್ಲೇ ಸಾಗುತ್ತದೆ ಎಂಬುದು ಅವರ ಮಾತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.