ಗೆಲ್ಲುವ ನಿರೀಕ್ಷೆಯಲ್ಲಿ ಕೃತಿಕಾ


Team Udayavani, Feb 12, 2019, 5:46 AM IST

kruthika.jpg

ನಟಿ ಕೃತಿಕಾ ಈಗ ಖುಷಿಯಲ್ಲಿದ್ದಾರೆ. ಅವರ ಖುಷಿಗೆ ಕಾರಣ “ಯಾರಿಗೆ ಯಾರುಂಟು’. ಹೌದು, ಇದೇ ಮೊದಲ ಸಲ ಅವರು ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಚಿತ್ರದ ಪಾತ್ರ ಕೂಡ ತೂಕ ಹೆಚ್ಚಿಸಿದ್ದು, ಎಲ್ಲರೂ ಹೊಸ ಕೃತಿಕಾಳನ್ನಿಲ್ಲಿ ಕಾಣಬಹುದು ಎಂಬ ಸಂತಸ ಅವರದು. ಅಂದಹಾಗೆ, ಇದೇ ಮೊದಲ ಬಾರಿಗೆ ಕೃತಿಕಾ ಪಕ್ಕಾ ಕಮರ್ಷಿಯಲ್‌ ಚಿತ್ರದಲ್ಲಿ ನಟಿಸಿದ್ದಾರೆ.

ಅದರಲ್ಲೂ ಕಥೆ ಎಲ್ಲಾ ವರ್ಗಕ್ಕೂ ಇಷ್ಟವಾಗುವಂತಿದ್ದರಿಂದಲೇ ಅವರು, ಚಿತ್ರದಲ್ಲಿ ಚಾಲೆಂಜಿಂಗ್‌ ಆಗಿರುವ ಪಾತ್ರವನ್ನು ಎಂಜಾಯ್‌ ಮಾಡಿಕೊಂಡೇ ನಿರ್ವಹಿಸಿದ್ದಾರಂತೆ. ಇನ್ನೊಂದು ವಿಷಯವನ್ನು ಹೆಮ್ಮೆಯಿಂದ ಹೇಳಿಕೊಳ್ಳುವ ಕೃತಿಕಾ, “ಯಾರಿಗೆ ಯಾರುಂಟು’ ಚಿತ್ರ ಜನರಿಗೆ ಎಷ್ಟರಮಟ್ಟಿಗೆ ನಿರೀಕ್ಷೆ ಹೆಚ್ಚಿಸಿದೆಯೋ ಗೊತ್ತಿಲ್ಲ, ಆದರೆ, ನನಗಂತೂ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಮೊದಲ ಸಲ, ಸಿನಿಮಾದೊಳಗಿನ ಸಿನಿಮಾ ಸೆಲೆಬ್ರಿಟಿಯಾಗಿ ನಟಿಸಿದ್ದು, ಆ ಪಾತ್ರದಲ್ಲಿ ನಾನು ಹೇಗೆ ಕಾಣಿಸುತ್ತೇನೆ ಎಂದು ನೋಡುವ ಕಾತುರ ಇದೆ’ ಎಂಬುದು ಕೃತಿಕಾ ಮಾತು. “ಪಟ್ರೆ ಲವ್ಸ್‌ ಪದ್ಮ’ ಚಿತ್ರದ ಬಳಿಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಕೃತಿಕಾ, ಅಲ್ಲಿ ಮಿಂಚಿ, ಸಿನಿಮಾಗೆ ಬರಬೇಕು ಅಂತ ಒಳ್ಳೆಯ ಕಥೆಗಳನ್ನು ಎದುರು ನೋಡುತ್ತಿದ್ದರು. ಸಿಕ್ಕ ಎರಡು ಚಿತ್ರಗಳಲ್ಲೂ ನಟಿಸಿದರು. ಸದ್ಯಕ್ಕೆ “ಕೆಂಗುಲಾಬಿ’ ಮತ್ತು “ಶಾದೂಲ’ ಬಿಡುಗಡೆಯಾಗಬೇಕಿದೆ.

“ಯಾರಿಗೆ ಯಾರುಂಟು’ ಚಿತ್ರ ಫೆ.22 ರಂದು ಬಿಡುಗಡೆ ಕಾಣುತ್ತಿದೆ. ನಿರ್ದೇಶಕ ಕಿರಣ್‌ ಗೋವಿ ಅವರು ಕಥೆ ಹೇಳಿದ್ದನ್ನು ಕೇಳಿದ ಕೃತಿಕಾ, ಕಥೆಯಲ್ಲಿ ಸಾಕಷ್ಟು ವಿಶೇಷತೆಗಳಿವೆ ಎಂಬುದನ್ನು ಅರಿತು ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಚಿತ್ರ ಅವರೇ ಅವರನ್ನು ಜಡ್ಜ್ ಮಾಡಿಕೊಳ್ಳುವಂತಹ ಚಿತ್ರ ಎಂಬುದು ಅವರ ಮಾತು. ಅಂದಹಾಗೆ, ಕೃತಿಕಾ ಅವರಿಲ್ಲಿ ಪಕ್ಕಾ ಗ್ಲಾಮರ್‌ ಆಗಿ ಕಾಣಿಸಿಕೊಂಡಿರುವುದಲ್ಲದೆ, ಯಾರನ್ನೂ ಹತ್ತಿರ ಬಿಟ್ಟುಕೊಳ್ಳದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅವರನ್ನು ಯಾರಾದರೂ ಕೆಣಕಿದರೆ, ಅವರು ತಮ್ಮ ವ್ಯಕ್ತಿತ್ವವನ್ನೇ ಬದಲಿಸಿಕೊಂಡು ತೆರೆಯ ಮೇಲೆ ಹೊಸ ರೂಪ ಪಡೆದುಕೊಳ್ಳವ ಚಾಲೆಂಜ್‌ ಪಾತ್ರವಂತೆ. ಇಲ್ಲಿ ಮೂರ್‍ನಾಲ್ಕು ಶೇಡ್‌ ಇರುವ ಪಾತ್ರ ಆಗಿದ್ದರಿಂದ ಸಾಕಷ್ಟು ಚರ್ಚಿಸಿ, ಕೆಲಸ ಮಾಡಿದ್ದೇನೆ. ಎರಡು ತಾಸು ಅರಾಮವಾಗಿ ಕುಳಿತು ಎಂಜಾಯ್‌ ಮಾಡಿಕೊಂಡು ನೋಡುವಂತಹ ಚಿತ್ರವಿದು. ಒಂದು ಮಾತಂತೂ ನಿಜ.

ಸಿನಿಮಾ ನೋಡಿ ಹೊರಬಂದವರಿಗೆ ಮೈಂಡ್‌ ರಿಫ್ರೆಶ್‌ ಆಗುವ ಗ್ಯಾರಂಟಿ ಕೊಡುತ್ತಾರೆ. ಮೂವರು ನಾಯಕಿಯರ ಪೈಕಿ ಕೃತಿಕಾ ಕೂಡ ಒಬ್ಬರಾಗಿದ್ದು, ಒಂದು ಆರೋಗ್ಯಧಾಮದಲ್ಲಿ ನಡೆಯುವಂತಹ ಅಪರೂಪದ ಕಥೆ ಚಿತ್ರದ ಹೈಲೈಟ್‌. ಸಾಮಾನ್ಯವಾಗಿ ಆಸ್ಪತ್ರೆ ಅಂದರೆ ಒಂದು ರೀತಿಯ ಭಯ, ಗೊಂದಲ, ಟೆನ್ಷನ್‌ ಕಾಮನ್‌. ಆದರೆ, ಇಲ್ಲಿ ಆರೋಗ್ಯಧಾಮದಲ್ಲೇ ಕಥೆ ಸಾಗುವುದರಿಂದ ಸಂಪೂರ್ಣ ಮನರಂಜನೆಯಲ್ಲೇ ಸಾಗುತ್ತದೆ ಎಂಬುದು ಅವರ ಮಾತು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.