ಗೆಲ್ಲುವ ನಿರೀಕ್ಷೆಯಲ್ಲಿ ಕೃತಿಕಾ


Team Udayavani, Feb 12, 2019, 5:46 AM IST

kruthika.jpg

ನಟಿ ಕೃತಿಕಾ ಈಗ ಖುಷಿಯಲ್ಲಿದ್ದಾರೆ. ಅವರ ಖುಷಿಗೆ ಕಾರಣ “ಯಾರಿಗೆ ಯಾರುಂಟು’. ಹೌದು, ಇದೇ ಮೊದಲ ಸಲ ಅವರು ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಚಿತ್ರದ ಪಾತ್ರ ಕೂಡ ತೂಕ ಹೆಚ್ಚಿಸಿದ್ದು, ಎಲ್ಲರೂ ಹೊಸ ಕೃತಿಕಾಳನ್ನಿಲ್ಲಿ ಕಾಣಬಹುದು ಎಂಬ ಸಂತಸ ಅವರದು. ಅಂದಹಾಗೆ, ಇದೇ ಮೊದಲ ಬಾರಿಗೆ ಕೃತಿಕಾ ಪಕ್ಕಾ ಕಮರ್ಷಿಯಲ್‌ ಚಿತ್ರದಲ್ಲಿ ನಟಿಸಿದ್ದಾರೆ.

ಅದರಲ್ಲೂ ಕಥೆ ಎಲ್ಲಾ ವರ್ಗಕ್ಕೂ ಇಷ್ಟವಾಗುವಂತಿದ್ದರಿಂದಲೇ ಅವರು, ಚಿತ್ರದಲ್ಲಿ ಚಾಲೆಂಜಿಂಗ್‌ ಆಗಿರುವ ಪಾತ್ರವನ್ನು ಎಂಜಾಯ್‌ ಮಾಡಿಕೊಂಡೇ ನಿರ್ವಹಿಸಿದ್ದಾರಂತೆ. ಇನ್ನೊಂದು ವಿಷಯವನ್ನು ಹೆಮ್ಮೆಯಿಂದ ಹೇಳಿಕೊಳ್ಳುವ ಕೃತಿಕಾ, “ಯಾರಿಗೆ ಯಾರುಂಟು’ ಚಿತ್ರ ಜನರಿಗೆ ಎಷ್ಟರಮಟ್ಟಿಗೆ ನಿರೀಕ್ಷೆ ಹೆಚ್ಚಿಸಿದೆಯೋ ಗೊತ್ತಿಲ್ಲ, ಆದರೆ, ನನಗಂತೂ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಮೊದಲ ಸಲ, ಸಿನಿಮಾದೊಳಗಿನ ಸಿನಿಮಾ ಸೆಲೆಬ್ರಿಟಿಯಾಗಿ ನಟಿಸಿದ್ದು, ಆ ಪಾತ್ರದಲ್ಲಿ ನಾನು ಹೇಗೆ ಕಾಣಿಸುತ್ತೇನೆ ಎಂದು ನೋಡುವ ಕಾತುರ ಇದೆ’ ಎಂಬುದು ಕೃತಿಕಾ ಮಾತು. “ಪಟ್ರೆ ಲವ್ಸ್‌ ಪದ್ಮ’ ಚಿತ್ರದ ಬಳಿಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಕೃತಿಕಾ, ಅಲ್ಲಿ ಮಿಂಚಿ, ಸಿನಿಮಾಗೆ ಬರಬೇಕು ಅಂತ ಒಳ್ಳೆಯ ಕಥೆಗಳನ್ನು ಎದುರು ನೋಡುತ್ತಿದ್ದರು. ಸಿಕ್ಕ ಎರಡು ಚಿತ್ರಗಳಲ್ಲೂ ನಟಿಸಿದರು. ಸದ್ಯಕ್ಕೆ “ಕೆಂಗುಲಾಬಿ’ ಮತ್ತು “ಶಾದೂಲ’ ಬಿಡುಗಡೆಯಾಗಬೇಕಿದೆ.

“ಯಾರಿಗೆ ಯಾರುಂಟು’ ಚಿತ್ರ ಫೆ.22 ರಂದು ಬಿಡುಗಡೆ ಕಾಣುತ್ತಿದೆ. ನಿರ್ದೇಶಕ ಕಿರಣ್‌ ಗೋವಿ ಅವರು ಕಥೆ ಹೇಳಿದ್ದನ್ನು ಕೇಳಿದ ಕೃತಿಕಾ, ಕಥೆಯಲ್ಲಿ ಸಾಕಷ್ಟು ವಿಶೇಷತೆಗಳಿವೆ ಎಂಬುದನ್ನು ಅರಿತು ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಚಿತ್ರ ಅವರೇ ಅವರನ್ನು ಜಡ್ಜ್ ಮಾಡಿಕೊಳ್ಳುವಂತಹ ಚಿತ್ರ ಎಂಬುದು ಅವರ ಮಾತು. ಅಂದಹಾಗೆ, ಕೃತಿಕಾ ಅವರಿಲ್ಲಿ ಪಕ್ಕಾ ಗ್ಲಾಮರ್‌ ಆಗಿ ಕಾಣಿಸಿಕೊಂಡಿರುವುದಲ್ಲದೆ, ಯಾರನ್ನೂ ಹತ್ತಿರ ಬಿಟ್ಟುಕೊಳ್ಳದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅವರನ್ನು ಯಾರಾದರೂ ಕೆಣಕಿದರೆ, ಅವರು ತಮ್ಮ ವ್ಯಕ್ತಿತ್ವವನ್ನೇ ಬದಲಿಸಿಕೊಂಡು ತೆರೆಯ ಮೇಲೆ ಹೊಸ ರೂಪ ಪಡೆದುಕೊಳ್ಳವ ಚಾಲೆಂಜ್‌ ಪಾತ್ರವಂತೆ. ಇಲ್ಲಿ ಮೂರ್‍ನಾಲ್ಕು ಶೇಡ್‌ ಇರುವ ಪಾತ್ರ ಆಗಿದ್ದರಿಂದ ಸಾಕಷ್ಟು ಚರ್ಚಿಸಿ, ಕೆಲಸ ಮಾಡಿದ್ದೇನೆ. ಎರಡು ತಾಸು ಅರಾಮವಾಗಿ ಕುಳಿತು ಎಂಜಾಯ್‌ ಮಾಡಿಕೊಂಡು ನೋಡುವಂತಹ ಚಿತ್ರವಿದು. ಒಂದು ಮಾತಂತೂ ನಿಜ.

ಸಿನಿಮಾ ನೋಡಿ ಹೊರಬಂದವರಿಗೆ ಮೈಂಡ್‌ ರಿಫ್ರೆಶ್‌ ಆಗುವ ಗ್ಯಾರಂಟಿ ಕೊಡುತ್ತಾರೆ. ಮೂವರು ನಾಯಕಿಯರ ಪೈಕಿ ಕೃತಿಕಾ ಕೂಡ ಒಬ್ಬರಾಗಿದ್ದು, ಒಂದು ಆರೋಗ್ಯಧಾಮದಲ್ಲಿ ನಡೆಯುವಂತಹ ಅಪರೂಪದ ಕಥೆ ಚಿತ್ರದ ಹೈಲೈಟ್‌. ಸಾಮಾನ್ಯವಾಗಿ ಆಸ್ಪತ್ರೆ ಅಂದರೆ ಒಂದು ರೀತಿಯ ಭಯ, ಗೊಂದಲ, ಟೆನ್ಷನ್‌ ಕಾಮನ್‌. ಆದರೆ, ಇಲ್ಲಿ ಆರೋಗ್ಯಧಾಮದಲ್ಲೇ ಕಥೆ ಸಾಗುವುದರಿಂದ ಸಂಪೂರ್ಣ ಮನರಂಜನೆಯಲ್ಲೇ ಸಾಗುತ್ತದೆ ಎಂಬುದು ಅವರ ಮಾತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.