ದರ್ಶನ್‌ ಬರ್ತ್‌ಡೇಗೆ “ಡಿ 55′ ಅನೌನ್ಸ್‌…!


Team Udayavani, Feb 12, 2019, 5:46 AM IST

darshan.jpg

ನಟ ದರ್ಶನ್‌ ಅವರ ಕೈಯಲ್ಲೀಗ ಸಾಲು ಸಾಲು ಚಿತ್ರಗಳಿವೆ. ಬಿಡುವಿಲ್ಲದಂತೆ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಒಂದು ಕಡೆ “ಒಡೆಯ’, ಮತ್ತೂಂದು ಕಡೆ “ರಾಬರ್ಟ್‌’, ಇನ್ನೊಂದು ಕಡೆ “ಗಂಡುಗಲಿ ಮದಕರಿ ನಾಯಕ’ ಚಿತ್ರಗಳಿವೆ. ಈ ಮಧ್ಯೆ ಮಾ.1 ರಂದು “ಯಜಮಾನ’ ಬಿಡುಗಡೆಯಾಗುತ್ತಿದೆ. ಇನ್ನು, ಫೆಬ್ರವರಿ 16 ರಂದು ದರ್ಶನ್‌ ಅವರ ಹುಟ್ಟುಹಬ್ಬ. ಅಂದು ಅಭಿಮಾನಿಗಳಿಗೆ ದರ್ಶನ್‌ ಹೊಸ ಗಿಫ್ಟ್ ಕೊಡಲಿದ್ದಾರೆ. ಹೌದು, ದರ್ಶನ್‌ ಹುಟ್ಟು ಹಬ್ಬದಂದು ಹೊಸ ಚಿತ್ರದ ಫ‌ಸ್ಟ್‌ಲುಕ್‌ ಬರುತ್ತಿದೆ.

ಎಲ್ಲಾ ಸರಿ, ದರ್ಶನ್‌ ಅವರ ಮುಂದಿನ ಚಿತ್ರ ಯಾವುದು ಎಂಬ ಕುತೂಹಲದ ಪ್ರಶ್ನೆಗೆ ಉತ್ತರ “ಡಿ 55′. ಹೌದು, ದರ್ಶನ್‌ಗಾಗಿ ನಿರ್ಮಾಪಕ ಎಂ.ಜಿ.ರಾಮಮೂರ್ತಿ ಅವರು ಹೊಸದೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಈಗಾಗಲೇ ಜೋರು ತಯಾರಿ ನಡೆಸಿರುವ ನಿರ್ಮಾಪಕರು, “ಡಿ 55′ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುವ ಮೂಲಕ ದರ್ಶನ್‌ ಬರ್ತ್‌ಡೇಗೆ ಅವರ ಅಭಿಮಾನಿಗಳ ಮೊಗದಲ್ಲಿ ಮಂದಹಾಸದ ಗೆರೆ ಮೂಡಿಸಲು ಸಜ್ಜಾಗುತ್ತಿದ್ದಾರೆ.

ಈ ಹಿಂದೆ ದರ್ಶನ್‌ ಅವರಿಗೆ “ಮೆಜೆಸ್ಟಿಕ್‌’ ಚಿತ್ರ ನಿರ್ಮಿಸಿದ್ದ ಎಂ.ಜಿ.ರಾಮಮೂರ್ತಿ, “ಧರ್ಮ’ ಚಿತ್ರವನ್ನೂ ನಿರ್ಮಿಸಿದ್ದರು. ಅದಾದ ಬಳಿಕ ಮಾಡುತ್ತಿರುವ ಮೂರನೇ ಚಿತ್ರವಿದು. ಹದಿನೈದು ವರ್ಷಗಳ ದೊಡ್ಡ ಗ್ಯಾಪ್‌ ಬಳಿಕ ಸಕ್ಸಸ್‌ ಜೋಡಿ ಮತ್ತೆ ಒಂದಾಗಿ “ಡಿ 55′ ಚಿತ್ರ ಮಾಡುತ್ತಿದೆ ಎಂಬುದು ಈ ಹೊತ್ತಿನ ವಿಶೇಷ. ಎಲ್ಲವೂ ಸರಿ, ಈ “ಡಿ 55′ ಅಂದರೇನು? ಎಲ್ಲರಿಗೂ “ಡಿ 55′ ಅಂದರೆ ದರ್ಶನ್‌ ಅವರ 55 ನೇ ಸಿನಿಮಾದ ಹೆಸರು ಎಂಬ ಪ್ರಶ್ನೆ ಇದೆ.

ಆ ಕುತೂಹಲ ಇಲ್ಲಿಯವರೆಗೆ ಹಾಗೆಯೇ ಇರುವುದು ನಿಜ. ಆದರೆ, ದರ್ಶನ್‌ ಅವರ ಹೊಸ ಚಿತ್ರಕ್ಕೆ “ಡಿ 55′ ಎಂಬ ಶೀರ್ಷಿಕೆಯೇ ಅಂತಿಮವಾಗುತ್ತಾ? ಗೊತ್ತಿಲ್ಲ. ಆದರೆ, ನಿರ್ಮಾಣ ಮಾಡಲಿರುವ ಎಂ.ಜಿ.ರಾಮಮೂರ್ತಿ ಅವರು ಸದ್ಯಕ್ಕೆ ದರ್ಶನ್‌ ಅವರಿಗೆ ಚಿತ್ರ ನಿರ್ಮಿಸಲು ತಯಾರಾಗಿದ್ದು, ಅದೊಂದು ಬಿಗ್‌ಬಜೆಟ್‌ ಚಿತ್ರ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸದ್ಯ ಕೈಯಲ್ಲಿರುವ ಚಿತ್ರಗಳ ಜೊತೆಗೆ “ಡಿ 55′ ಚಿತ್ರ ಶುರುವಾದರೂ ಅಚ್ಚರಿ ಇಲ್ಲ. “ಡಿ 55′ ಅನ್ನುವುದೇ ಅಷ್ಟೊಂದು ಪವರ್‌ಫ‌ುಲ್‌ ಆಗಿರುವಾಗ, ಇನ್ನು ಕಥೆ ಹೇಗಿರುತ್ತೆ ಎಂಬ ಪ್ರಶ್ನೆ ಕೂಡ ಬರುತ್ತದೆ. ಆದರೆ, ಆ ಚಿತ್ರದ ಕಥೆ ಏನು, ನಿರ್ದೇಶಕರು ಯಾರು, ಯಾರೆಲ್ಲಾ ಕಲಾವಿದರು ಇರುತ್ತಾರೆ, ತಾಂತ್ರಿಕ ವರ್ಗದಲ್ಲಿ ಯಾರೆಲ್ಲಾ ಕೆಲಸ ಮಾಡುತ್ತಾರೆ ಎಂಬುದಕ್ಕೆ “ಡಿ 55′ ಸೆಟ್ಟೇರುವವರೆಗೂ ಕಾಯಬೇಕು.

ದರ್ಶನ್‌ ಅವರಿಗೆ “ಮೆಜೆಸ್ಟಿಕ್‌’ ದೊಡ್ಡ ಯಶಸ್ಸು ತಂದುಕೊಟ್ಟಿದ್ದು ನಿಜ. ಆ ಚಿತ್ರ ನಿರ್ಮಿಸಿದ್ದ ಎಂ.ಜಿ.ರಾಮಮೂರ್ತಿ ಅವರಿಗೂ ದರ್ಶನ್‌ ಜೊತೆ ಕೆಲಸ ಮಾಡಬೇಕು ಎಂಬ ಆಸೆ ಇತ್ತಾದರೂ, ಅದು ಕಳೆದ ಒಂದುವರೆ ದಶಕಗಳ ಕಾಲ ಆಗಿರಲಿಲ್ಲ. ಈಗ ಅದಕ್ಕೊಂದು ಒಳ್ಳೆಯ ಸಮಯ ಬರುತ್ತಿದೆ. ಈ ಹಿಂದೆ ಎಂ.ಜಿ.ರಾಮಮೂರ್ತಿ ಅವರು ದರ್ಶನ್‌ ಅವರಿಗಾಗಿಯೇ “ಮದಗಜ’ ಎಂಬ ಶೀರ್ಷಿಕೆ ನೋಂದಣಿ ಮಾಡಿಸಿ, ಚಿತ್ರ ನಿರ್ಮಿಸಲು ರೆಡಿಯಾಗಿದ್ದರು. ಆದರೆ, ದರ್ಶನ್‌ ಅವರೇ ಸ್ವತಃ ಆ ಶೀರ್ಷಿಕೆಯನ್ನು ಶ್ರೀಮುರಳಿ ಚಿತ್ರಕ್ಕೆ ಬಿಟ್ಟುಕೊಡುವ ಮೂಲಕ ಪ್ರೀತಿ ತೋರಿದ್ದರು.

ನಿರ್ಮಾಪಕರು ದರ್ಶನ್‌ ಜೊತೆಗೆ ಸಿನಿಮಾ ಮಾಡಬೇಕು ಅಂತ ಇಷ್ಟು ವರ್ಷ ಕಾದಿದ್ದರು. ದರ್ಶನ್‌ ಬಿಜಿಯಿದ್ದ ಕಾರಣ, ಅದು ಸಾಧ್ಯವಾಗಿರಲಿಲ್ಲ. ಈಗ ‘ಡಿ 55′ ಮೂಲಕ ಈಡೇರುತ್ತಿದೆ ಎನ್ನಲಾಗಿದ್ದು, ದರ್ಶನ್‌ ಅವರ ಬರ್ತ್‌ಡೇ ದಿನ “ಡಿ 55′ ಫ‌ಸ್ಟ್‌ಲುಕ್‌ನ ಝಲಕ್‌ ಕಾಣಲಿದೆ. ಅದು ಅಭಿಮಾನಿಗಳ ಪಾಲಿಗೆ ಮತ್ತೂಂದು ಸಂತಸದ ವಿಷಯವಂತೂ ಹೌದು. ಅಂದಹಾಗೆ, “ಡಿ.55’ ದರ್ಶನ್‌ ಅವರ 55 ನೇ ಸಿನಿಮಾ. ಆದರೆ, ಇದೇ ಆ ಚಿತ್ರದ ಶೀರ್ಷಿಕೆ ಎಂಬುದಕ್ಕಿನ್ನೂ ಉತ್ತರ ಸಿಕ್ಕಿಲ್ಲ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.