ದರ್ಶನ್‌ ಬರ್ತ್‌ಡೇಗೆ “ಡಿ 55′ ಅನೌನ್ಸ್‌…!


Team Udayavani, Feb 12, 2019, 5:46 AM IST

darshan.jpg

ನಟ ದರ್ಶನ್‌ ಅವರ ಕೈಯಲ್ಲೀಗ ಸಾಲು ಸಾಲು ಚಿತ್ರಗಳಿವೆ. ಬಿಡುವಿಲ್ಲದಂತೆ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಒಂದು ಕಡೆ “ಒಡೆಯ’, ಮತ್ತೂಂದು ಕಡೆ “ರಾಬರ್ಟ್‌’, ಇನ್ನೊಂದು ಕಡೆ “ಗಂಡುಗಲಿ ಮದಕರಿ ನಾಯಕ’ ಚಿತ್ರಗಳಿವೆ. ಈ ಮಧ್ಯೆ ಮಾ.1 ರಂದು “ಯಜಮಾನ’ ಬಿಡುಗಡೆಯಾಗುತ್ತಿದೆ. ಇನ್ನು, ಫೆಬ್ರವರಿ 16 ರಂದು ದರ್ಶನ್‌ ಅವರ ಹುಟ್ಟುಹಬ್ಬ. ಅಂದು ಅಭಿಮಾನಿಗಳಿಗೆ ದರ್ಶನ್‌ ಹೊಸ ಗಿಫ್ಟ್ ಕೊಡಲಿದ್ದಾರೆ. ಹೌದು, ದರ್ಶನ್‌ ಹುಟ್ಟು ಹಬ್ಬದಂದು ಹೊಸ ಚಿತ್ರದ ಫ‌ಸ್ಟ್‌ಲುಕ್‌ ಬರುತ್ತಿದೆ.

ಎಲ್ಲಾ ಸರಿ, ದರ್ಶನ್‌ ಅವರ ಮುಂದಿನ ಚಿತ್ರ ಯಾವುದು ಎಂಬ ಕುತೂಹಲದ ಪ್ರಶ್ನೆಗೆ ಉತ್ತರ “ಡಿ 55′. ಹೌದು, ದರ್ಶನ್‌ಗಾಗಿ ನಿರ್ಮಾಪಕ ಎಂ.ಜಿ.ರಾಮಮೂರ್ತಿ ಅವರು ಹೊಸದೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಈಗಾಗಲೇ ಜೋರು ತಯಾರಿ ನಡೆಸಿರುವ ನಿರ್ಮಾಪಕರು, “ಡಿ 55′ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುವ ಮೂಲಕ ದರ್ಶನ್‌ ಬರ್ತ್‌ಡೇಗೆ ಅವರ ಅಭಿಮಾನಿಗಳ ಮೊಗದಲ್ಲಿ ಮಂದಹಾಸದ ಗೆರೆ ಮೂಡಿಸಲು ಸಜ್ಜಾಗುತ್ತಿದ್ದಾರೆ.

ಈ ಹಿಂದೆ ದರ್ಶನ್‌ ಅವರಿಗೆ “ಮೆಜೆಸ್ಟಿಕ್‌’ ಚಿತ್ರ ನಿರ್ಮಿಸಿದ್ದ ಎಂ.ಜಿ.ರಾಮಮೂರ್ತಿ, “ಧರ್ಮ’ ಚಿತ್ರವನ್ನೂ ನಿರ್ಮಿಸಿದ್ದರು. ಅದಾದ ಬಳಿಕ ಮಾಡುತ್ತಿರುವ ಮೂರನೇ ಚಿತ್ರವಿದು. ಹದಿನೈದು ವರ್ಷಗಳ ದೊಡ್ಡ ಗ್ಯಾಪ್‌ ಬಳಿಕ ಸಕ್ಸಸ್‌ ಜೋಡಿ ಮತ್ತೆ ಒಂದಾಗಿ “ಡಿ 55′ ಚಿತ್ರ ಮಾಡುತ್ತಿದೆ ಎಂಬುದು ಈ ಹೊತ್ತಿನ ವಿಶೇಷ. ಎಲ್ಲವೂ ಸರಿ, ಈ “ಡಿ 55′ ಅಂದರೇನು? ಎಲ್ಲರಿಗೂ “ಡಿ 55′ ಅಂದರೆ ದರ್ಶನ್‌ ಅವರ 55 ನೇ ಸಿನಿಮಾದ ಹೆಸರು ಎಂಬ ಪ್ರಶ್ನೆ ಇದೆ.

ಆ ಕುತೂಹಲ ಇಲ್ಲಿಯವರೆಗೆ ಹಾಗೆಯೇ ಇರುವುದು ನಿಜ. ಆದರೆ, ದರ್ಶನ್‌ ಅವರ ಹೊಸ ಚಿತ್ರಕ್ಕೆ “ಡಿ 55′ ಎಂಬ ಶೀರ್ಷಿಕೆಯೇ ಅಂತಿಮವಾಗುತ್ತಾ? ಗೊತ್ತಿಲ್ಲ. ಆದರೆ, ನಿರ್ಮಾಣ ಮಾಡಲಿರುವ ಎಂ.ಜಿ.ರಾಮಮೂರ್ತಿ ಅವರು ಸದ್ಯಕ್ಕೆ ದರ್ಶನ್‌ ಅವರಿಗೆ ಚಿತ್ರ ನಿರ್ಮಿಸಲು ತಯಾರಾಗಿದ್ದು, ಅದೊಂದು ಬಿಗ್‌ಬಜೆಟ್‌ ಚಿತ್ರ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸದ್ಯ ಕೈಯಲ್ಲಿರುವ ಚಿತ್ರಗಳ ಜೊತೆಗೆ “ಡಿ 55′ ಚಿತ್ರ ಶುರುವಾದರೂ ಅಚ್ಚರಿ ಇಲ್ಲ. “ಡಿ 55′ ಅನ್ನುವುದೇ ಅಷ್ಟೊಂದು ಪವರ್‌ಫ‌ುಲ್‌ ಆಗಿರುವಾಗ, ಇನ್ನು ಕಥೆ ಹೇಗಿರುತ್ತೆ ಎಂಬ ಪ್ರಶ್ನೆ ಕೂಡ ಬರುತ್ತದೆ. ಆದರೆ, ಆ ಚಿತ್ರದ ಕಥೆ ಏನು, ನಿರ್ದೇಶಕರು ಯಾರು, ಯಾರೆಲ್ಲಾ ಕಲಾವಿದರು ಇರುತ್ತಾರೆ, ತಾಂತ್ರಿಕ ವರ್ಗದಲ್ಲಿ ಯಾರೆಲ್ಲಾ ಕೆಲಸ ಮಾಡುತ್ತಾರೆ ಎಂಬುದಕ್ಕೆ “ಡಿ 55′ ಸೆಟ್ಟೇರುವವರೆಗೂ ಕಾಯಬೇಕು.

ದರ್ಶನ್‌ ಅವರಿಗೆ “ಮೆಜೆಸ್ಟಿಕ್‌’ ದೊಡ್ಡ ಯಶಸ್ಸು ತಂದುಕೊಟ್ಟಿದ್ದು ನಿಜ. ಆ ಚಿತ್ರ ನಿರ್ಮಿಸಿದ್ದ ಎಂ.ಜಿ.ರಾಮಮೂರ್ತಿ ಅವರಿಗೂ ದರ್ಶನ್‌ ಜೊತೆ ಕೆಲಸ ಮಾಡಬೇಕು ಎಂಬ ಆಸೆ ಇತ್ತಾದರೂ, ಅದು ಕಳೆದ ಒಂದುವರೆ ದಶಕಗಳ ಕಾಲ ಆಗಿರಲಿಲ್ಲ. ಈಗ ಅದಕ್ಕೊಂದು ಒಳ್ಳೆಯ ಸಮಯ ಬರುತ್ತಿದೆ. ಈ ಹಿಂದೆ ಎಂ.ಜಿ.ರಾಮಮೂರ್ತಿ ಅವರು ದರ್ಶನ್‌ ಅವರಿಗಾಗಿಯೇ “ಮದಗಜ’ ಎಂಬ ಶೀರ್ಷಿಕೆ ನೋಂದಣಿ ಮಾಡಿಸಿ, ಚಿತ್ರ ನಿರ್ಮಿಸಲು ರೆಡಿಯಾಗಿದ್ದರು. ಆದರೆ, ದರ್ಶನ್‌ ಅವರೇ ಸ್ವತಃ ಆ ಶೀರ್ಷಿಕೆಯನ್ನು ಶ್ರೀಮುರಳಿ ಚಿತ್ರಕ್ಕೆ ಬಿಟ್ಟುಕೊಡುವ ಮೂಲಕ ಪ್ರೀತಿ ತೋರಿದ್ದರು.

ನಿರ್ಮಾಪಕರು ದರ್ಶನ್‌ ಜೊತೆಗೆ ಸಿನಿಮಾ ಮಾಡಬೇಕು ಅಂತ ಇಷ್ಟು ವರ್ಷ ಕಾದಿದ್ದರು. ದರ್ಶನ್‌ ಬಿಜಿಯಿದ್ದ ಕಾರಣ, ಅದು ಸಾಧ್ಯವಾಗಿರಲಿಲ್ಲ. ಈಗ ‘ಡಿ 55′ ಮೂಲಕ ಈಡೇರುತ್ತಿದೆ ಎನ್ನಲಾಗಿದ್ದು, ದರ್ಶನ್‌ ಅವರ ಬರ್ತ್‌ಡೇ ದಿನ “ಡಿ 55′ ಫ‌ಸ್ಟ್‌ಲುಕ್‌ನ ಝಲಕ್‌ ಕಾಣಲಿದೆ. ಅದು ಅಭಿಮಾನಿಗಳ ಪಾಲಿಗೆ ಮತ್ತೂಂದು ಸಂತಸದ ವಿಷಯವಂತೂ ಹೌದು. ಅಂದಹಾಗೆ, “ಡಿ.55’ ದರ್ಶನ್‌ ಅವರ 55 ನೇ ಸಿನಿಮಾ. ಆದರೆ, ಇದೇ ಆ ಚಿತ್ರದ ಶೀರ್ಷಿಕೆ ಎಂಬುದಕ್ಕಿನ್ನೂ ಉತ್ತರ ಸಿಕ್ಕಿಲ್ಲ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.