ಥ್ರಿಲ್ಲರ್‌ ಮೋಕ್ಷದಲ್ಲಿ ಮಾಸ್ಕ್ ಮ್ಯಾನ್ ಆಟ


Team Udayavani, Mar 18, 2019, 5:48 AM IST

moksha.jpg

ಕನ್ನಡದಲ್ಲಿ ಈಗಾಗಲೇ ಹಲವು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಗಳು ಬಂದಿವೆ. ಬರುತ್ತಲೂ ಇವೆ. ಆ ಸಾಲಿಗೆ ಈಗ “ಮೋಕ್ಷ’ ಎಂಬ ಸಿನಿಮಾ ಕೂಡ ಬರುತ್ತಿದೆ. ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿದೆ. ಈ ಚಿತ್ರದ ಮೂಲಕ ಸಮರ್ಥ್ ನಾಯ್ಕ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.

ಸಮರ್ಥ್ ಇದಕ್ಕೂ ಮುನ್ನ ಸಾಫ್ಟ್ವೇರ್‌ ಕಂಪೆನಿಯಲ್ಲಿ ಕೆಲಸ ಮಾಡಿದವರು. ಎಂಜಿನಿಯರಿಂಗ್‌, ಎಂಬಿಎ ಮಾಡಿರುವ ಅವರು ಡೆಲ್‌ ಸೇರಿದಂತೆ ಇತರೆ ಕಂಪೆನಿಗಳಲ್ಲಿ ಐದು ವರ್ಷ ಕೆಲಸ ಮಾಡುತ್ತಲೇ, ಸಿನಿಮಾ ಆಸಕ್ತಿ ಇಟ್ಟುಕೊಂಡವರು. ಕೆಲಸದಲ್ಲಿರುವಾಗಲೇ ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದರು. ಆದರೆ, ನಿರ್ಮಾಪಕರು ಸಿಗುವುದು ಕಷ್ಟ ಅಂದೆನಿಸಿ, ಕೊನೆಗೆ ತಮ್ಮ ಕೆಲಸಕ್ಕೆ ಗುಡ್‌ ಬೈ ಹೇಳಿ, ಅವರೇ ನಿರ್ಮಾಣಕ್ಕೆ ಮುಂದಾದರು.

ಅದಕ್ಕೂ ಮುನ್ನ ಅವರೇ ಸ್ವಂತದ್ದೊಂದು ಆ್ಯಡ್‌ ಏಜೆನ್ಸಿ ಶುರು ಮಾಡಿ, ಅಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಪೋರೇಟ್‌ ಜಾಹಿರಾತುಗಳನ್ನು ನಿರ್ದೇಶನ ಮಾಡಿದ ಅನುಭವ ಪಡೆದಿದ್ದಾರೆ. ಆ ಅನುಭವದ ಮೇಲೆ “ಮೋಕ್ಷ’ ಚಿತ್ರ ಮಾಡಿದ್ದಾರೆ. ಅವರೇ ಹೇಳುವಂತೆ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಹಾಗಂತ ರೆಗ್ಯುಲರ್‌ ಮರ್ಡರ್‌ ಮಿಸ್ಟ್ರಿ ಇಲ್ಲಿಲ್ಲ. ನಾರ್ಮಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾ ಕೂಡ ಅಲ್ಲ.

ಬಾಲಿವುಡ್‌ನ‌ಲ್ಲಿ ಬಂದ “ಬಾಜಿಗಾರ್‌’, “ರೇಸ್‌’ ಚಿತ್ರಗಳ  ಕೆಟಗರಿಗೆ ಸೇರುವ ಚಿತ್ರ ಇದಾಗಿದ್ದು, ಕನ್ನಡಿಗರಿಗೆ ಹೊಸತನ ಚಿತ್ರ ಕೊಡುವ ಪ್ರಯತ್ನ ಮಾಡಲಾಗಿದೆ ಎನ್ನುವ ನಿರ್ದೇಶಕರು, ಇಲ್ಲಿ ಮಾಸ್ಕ್ಮ್ಯಾನ್‌ ಒಬ್ಬನ ವಿಚಿತ್ರ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಒಬ್ಬ ಮಾಸ್ಕ್ ಮ್ಯಾನ್‌ ಚಿತ್ರದ ಹೈಲೈಟ್‌. ಜೊತೆಗೊಂದು ಲವ್‌ಸ್ಟೋರಿ ಸಹ ಚಿತ್ರದ ಜೀವಾಳ.

ಇಲ್ಲಿ ಮಾಸ್ಕ್ಮ್ಯಾನ್‌ ಮೂಡಿಸುವ ಅಚ್ಚರಿಗಳು, ಊಹಿಸಲಾಗದಂತೆ ಕೊಡುವ ಟ್ವಿಸ್ಟ್‌ಗಳು, ಬರುವ ಪ್ರತಿ ಪಾತ್ರದ ಭಾವನೆಗಳ ತೊಳಲಾಟ, ಹುಚ್ಚು ಪ್ರೀತಿ, ದ್ವೇಷ, ಅಸೂಯೆ, ಒಂಟಿತನ, ಹತಾಶೆ ಮತ್ತು ಸಂಬಂಧಗಳ ಘರ್ಷಣೆ ಇತ್ಯಾದಿ ವಿಷಯಗಳು ಅಡಕವಾಗಿವೆ’ ಎನ್ನುತ್ತಾರೆ ಸಮರ್ಥ್. ಚಿತ್ರಕ್ಕೆ ಮೋಹನ್‌ ಧನ್‌ರಾಜ್‌ ನಾಯಕರಾಗಿದ್ದಾರೆ. ಬಾಲಿವುಡ್‌ನ‌ ಐದಾರು ಚಿತ್ರಗಳಲ್ಲಿ ನಟಿಸಿರುವ ಮೋಹನ್‌ ಧನ್‌ರಾಜ್‌ ಮೂಲತಃ ಕನ್ನಡಿಗ.

ಎಂಬಿಎ ಓದಿ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದವರು ಬಾಲಿವುಡ್‌ಗೆ ಬಂದು, ಅಲ್ಲಿಂದ ಈಗ ಸ್ಯಾಂಡಲ್‌ವುಡ್‌ಗೆ ಬಂದಿದ್ದಾರೆ. ಇನ್ನು, ಆರಾಧ್ಯ ಲಕ್ಷ್ಮಣ್‌ ನಾಯಕಿ. ಇವರಿಗೆ ಇದು ಮೊದಲ ಚಿತ್ರ. ಮಾಡೆಲ್‌ ಆಗಿರುವ ಆರಾಧ್ಯ ಹಲವು ಕಮರ್ಷಿಯಲ್‌ ಆ್ಯಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು 70 ದಿನಗಳ ಕಾಲ ಬೆಂಗಳೂರು, ಹಾಸನ, ಕಾರವಾರ, ಗೋಕಾಕ್‌, ಗೋವಾ ಸಮೀಪದ ಹಲವು ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ಚಿತ್ರಕ್ಕೆ ಗುರುಪ್ರಶಾಂತ್‌ ರೈ, ಹಾಲಿವುಡ್‌ನ‌ ಜೋಮ್‌ ಜೋಸೆಫ್, ಕಿರಣ್‌ ಹಂಪಾಪುರ ಛಾಯಾಗ್ರಹಣ ಮಾಡಿದರೆ, ಕಿಶನ್‌ ಮೋಹನ್‌ ಹಾಗೂ ಸಚಿನ್‌ ಬಾಲು ಸಂಗೀತವಿದೆ. ಇಬ್ಬರು ಒಂದೊಂದು ಹಾಡು ಮಾಡಿದ್ದಾರೆ. ಜಯಂತ್‌ ಕಾಯ್ಕಿಣಿ ಹಾಗು ಕುಮಾರ್‌ ದತ್‌ ಸಾಹಿತ್ಯವಿದೆ.  ದೀಪಕ್‌ ದೊಡ್ಡೇರ, ಅನುರಾಧ ಭಟ್‌ ಹಾಡಿದ್ದಾರೆ. ಇಷ್ಟರಲ್ಲೇ ಪ್ರೇಕ್ಷಕರ ಮುಂದೆ “ಮೋಕ್ಷ’ ಬರಲಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.