ಸರ್ಕಾರ, ಪಾಲಿಕೆ ವಿರುದ್ಧ ಹೋರಾಡಿ ಪಕ್ಷ ಸಂಘಟಿಸಿ


Team Udayavani, Feb 13, 2017, 12:17 PM IST

paksha-sangatisi.jpg

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಕಾಂಗ್ರೆಸ್‌ ನೇತೃತ್ವದ ಆಡಳಿತದ ವಿರುದ್ಧ ಬಿಜೆಪಿ ಬೆಂಗಳೂರು ನಗರ ಘಟಕ ಹೋರಾಟ ಕೈಗೊಳ್ಳುವಲ್ಲಿ ವಿಫ‌ಲವಾಗಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಕ್ಷಣದಿಂದಲೇ ಹೋರಾಟ ತೀವ್ರಗೊಳಿಸುವ ಮೂಲಕ ಪಕ್ಷದ ಸಂಘಟನೆ ಚುರುಕುಗೊಳಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ನಗರ ಜಿಲ್ಲೆಯಲ್ಲಿ 17 ಶಾಸಕರು, ಮೂವರು ಸಂಸದರು, 101 ಕಾರ್ಪೋರೇಟ್‌ಗಳು ಪಕ್ಷದಿಂದ ಆಯ್ಕೆಯಾಗಿದ್ದಾರೆ. ಆದರೆ, ಆಡಳಿತ ನಡೆಸುವವರ ಜನ ವಿರೋಧಿ ನೀತಿಗಳ ವಿರುದ್ಧ ಯಾವ ಪ್ರಮಾಣದಲ್ಲಿ ಹೋರಾಟ ನಡೆಯಬೇಕಿತ್ತೋ ಆ ಪ್ರಮಾಣದಲ್ಲಿ ಹೋರಾಟ ನಡೆದಿಲ್ಲ ಎಂಬುದನ್ನು ನೋವಿನಿಂದ ಹೇಳುತ್ತೇನೆ ಎಂದರು.

ಬಿಬಿಎಂಪಿಯಲ್ಲಿ ಕಸ ವಿಲೇವಾರಿಗೆ 350 ಕೋಟಿ ರೂ. ಇದ್ದ ಮೊತ್ತವನ್ನು ಈಗ 857 ಕೋಟಿ ರೂ.  ಹೆಚ್ಚಿಸಲಾಗಿದೆ. ಆದರೂ ಕಸ ವಿಲೇ ಆಗುತ್ತಿಲ್ಲ ಎಂದರೆ ಇದರಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಆದರೆ, ನಾವು ಹೋರಾಟಕ್ಕಿಳಿಯದೆ ತಿನ್ನುವವರಿಗೆ ಅವಕಾಶ ಮಾಡಿಕೊಟ್ಟು ಕೈಕಟ್ಟಿಕೊಂಡು ಕೂತಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಕೋಟ್ಯಂತರ ರೂ. ಲೂಟಿ ಮಾಡುತ್ತಿದ್ದರೂ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಹಿಳಾ ಕಾರ್ಪೋರೇಟರ್‌ ಒಬ್ಬರು ತಮ್ಮ ಬಳಿ ಬಂದು ಕಾಂಗ್ರೆಸ್‌ ಶಾಸಕ ಮುನಿರತ್ನಂ ನಾಯ್ಡು ತಮ್ಮ ಮೇಲೆ ನಡೆಸುತ್ತಿರುವ ಗೂಂಡಾಗಿರಿ, ವಿನಾ ಕಾರಣ ಪೊಲೀಸರಿಗೆ ದೂರು ನೀಡಿ ಕಿರುಕುಳ ನೀಡುತ್ತಿರುವ ಬಗ್ಗೆ ಹೇಳಿಕೊಂಡು ಕಣ್ಣೀರು ಸುರಿಸಿದರು. ಇಂತಹ ಕೃತ್ಯಗಳು ನಗರದಲ್ಲಿ ನಡೆಯುತ್ತಿದ್ದರೂ ನಮ್ಮವರು ಮಾತ್ರ ಮೌನವಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಅನ್ನಭಾಗ್ಯ ಯೋಜನೆ ತನ್ನದೇ ಎಂದು ಹೇಳಿಕೊಂಡು ಪ್ರಚಾರ ತೆಗೆದುಕೊಳ್ಳುತ್ತಿದೆ. ಆದರೆ, ಕೇಂದ್ರ ಸರ್ಕಾರ 32 ರೂ. ಅಕ್ಕಿಯನ್ನು ಕೇವಲ 3 ರೂ.ಗೆ ರಾಜ್ಯಕ್ಕೆ ನೀಡುತ್ತಿದೆ. ಆ ಮೂರು ರುಪಾಯಿಯನ್ನು ರಾಜ್ಯ ಸರ್ಕಾರ ಭರಿಸಿ ತಾನೇ ಉಚಿತ ಅಕ್ಕಿ ನೀಡುತ್ತಿರುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ, ಕೇಂದ್ರ ಸರ್ಕಾರ ಪ್ರತಿ ಕೆ.ಜಿ. ಅಕ್ಕಿಗೆ 29 ರೂ. ಸಬ್ಸಿಡಿ ನೀಡುತ್ತಿರುವುದನ್ನು ಹೇಳಬೇಕಾದ ಮುಖಂಡರು, ಪದಾಧಿಕಾರಿಗಳು ಸುಮ್ಮನಿರುವುದು ಸರಿಯಲ್ಲ ಎಂದರು.

ಕೇಂದ್ರ ಸಚಿವ ಅನಂತಕುಮಾರ್‌ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ನಗರಲ್ಲಿ ಬಿಜೆಪಿ 22ರಿಂದ 23 ಸ್ಥಾನಗಳನ್ನು ಗೆಲ್ಲಲು ಅವಕಾಶವಿದೆ. ಆ ನಿಟ್ಟಿನಲ್ಲಿ ಪಕ್ಷವನ್ನು ಸಿದ್ಧಪಡಿಸಬೇಕಿದೆ. ಅದಕ್ಕಾಗಿ ನೀರಿನ ಸಮಸ್ಯೆ ಸೇರಿದಂತೆ ಇತರೆ ಸಮಸ್ಯೆಗಳ ವಿರುದ್ಧ ನಿರಂತರ ಹೋರಾಟ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು. ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ವಿಧಾನಸ ಪರಿಷತ್‌ ಸದಸ್ಯ ರಾಮಚಂದ್ರಗೌಡ, ಶಾಸಕರು, ಬಿಬಿಎಂಪಿ ಸದಸ್ಯರು, ಬಿಜೆಪಿ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು.

ಆಧಿಕಾರವನ್ನು ಬಂಗಾರದ ತಟ್ಟೆಯಲ್ಲಿ ಇಟ್ಟು ಕೊಡ್ತಾರೆ ಜನ!
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತಧಿನಾಡಿ,  ಮತದಾರರಿಗಿಂತ ಹೆಚ್ಚಾಗಿ ಕಾರ್ಯಕರ್ತರು ಜವಾಬ್ದಾರಿಯುತ ಕೆಲಸ ಮಾಡಿದರೆ ಮಾತ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಹುದು. 2013ರಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನ ಗೆದ್ದಿತ್ತು. ಈ ಬಾರಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ.

ಅದಕ್ಕಾಗಿ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ರಾಜ್ಯದಲ್ಲಿ ಜನ ಅಧಿಕಾರವನ್ನು ಬಂಗಾರದ ತಟ್ಟೆಯಲ್ಲಿಟ್ಟು ಬಿಜೆಪಿಗೆ ಕೊಡಲು ಸಿದ್ಧವಾಗಿದ್ದಾರೆ. ಅದನ್ನು ಅಷ್ಟೇ ಜವಾಬ್ದಾರಿಯಿಂದ ನಾವು ತೆಗೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮಲ್ಲಿರುವ ಗೊಂದಲಗಳನ್ನು ಬದಿಗಿಟ್ಟು ಜನರ ಪ್ರೀತಿ ಗಳಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.