ಸೈನಿಕರ ಸಂಭಾಷಣೆ ಕದ್ದಾಲಿಸಲಾಗದ ರೇಡಿಯೋ ಅನ್ವೇಷಣೆ
Team Udayavani, Feb 17, 2017, 11:53 AM IST
ಬೆಂಗಳೂರು: ಭಾರತೀಯ ಸೈನಿಕರು ರೇಡಿಯೋ ಮೂಲಕ ನಡೆಸುವ ಸಂವಹನವನ್ನು ಶತ್ರುಗಳು ಹ್ಯಾಕ್ ಮಾಡಲು ಸಾಧ್ಯವಾಗದಂತಹ ಅತ್ಯಾಧುನಿಕ ರೇಡಿಯೋವನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಅಭಿವೃದ್ಧಿ ಪಡಿಸಿದೆ.
“ಸ್ಟಾರ್-ವಿ-ಎಮ್ ಕೆ-3 ರೇಡಿಯೋ’ವನ್ನು ಸದ್ಯದಲ್ಲೇ ಭಾರತೀಯ ಸೇನೆಗೆ ಹಸ್ತಾಂತರಿಸಲು ಬಿಇಎಲ್ ಸಿದ್ಧತೆ ನಡೆಸಿದೆ. ಅನಾಲಾಗ್ ಮಾದರಿಯಲ್ಲಿದ್ದ ರೇಡಿಯೋವನ್ನು ಡಿಜಿಟಲ್ ಮಾದರಿಗೆ ಉನ್ನತೀಕರಿಸಲಾಗಿದೆ. ಬಿಇಎಲ್ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಕಿರಣ್.ವಿ., ಏರ್ ಇಂಡಿಯಾ ಪ್ರದರ್ಶನದಲ್ಲಿ ಗುರುವಾರ ಇದನ್ನು ಅನಾವರಣಗೊಳಿಸಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಗಡಿಯಲ್ಲಿ ಕಾರ್ಯ ನಿರ್ವಹಿಸುವ ಸೈನಿಕರ ಸಂವಹನದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಬೇಕಾಗುತ್ತದೆ. ಪ್ರಸ್ತುತ ಇರುವ ರೇಡಿಯೋ ಮೂಲಕ ನಡೆಸುವ ಸಂವಹನವನ್ನು ಶತ್ರುಗಳು ಹ್ಯಾಕ್ ಮಾಡುವ ಸಾಧ್ಯತೆ ಇದೆ. ಹೀಗಾಗಿ ಶತ್ರುಗಳು ಹ್ಯಾಕ್ ಮಾಡುವುದನ್ನು ತಡೆಯುವ ದೃಷ್ಟಿಯಿಂದ ಹೊಸ ರೇಡಿಯೋವನ್ನು ಆವಿಷ್ಕರಿಸಲಾಗಿದೆ ಎಂದು ಹೇಳಿದರು.
ಈಗಿರುವ ರೇಡಿಯೋದಿಂದ 7-8 ಕಿ.ಮೀ.ನಷ್ಟು ದೂರ ಮಾತ್ರ ಸಂವಹನ ನಡೆಸಬಹುದಾಗಿದ್ದು, ಹೊಸದಾಗಿ ಸಿದ್ಧಪಡಿಸಿರುವ ರೇಡಿಯೋದಿಂದ 15 ಕಿ.ಮೀ.ಅಂತರದವರೆಗೆ ಸಂಪರ್ಕಿಸಬಹುದು. ಈ ತಂತ್ರಜ್ಞಾನವು ದೇಶದ ಸೈನಿಕ ವಲಯಕ್ಕೆ ಸಹಕಾರಿಯಾಗುತ್ತದೆ. ಇದು ಡಿಜಿಟಲ್ ತಂತ್ರಜಾnನವನ್ನು ಒಳಗೊಂಡಿದೆ. ಇದರ ಆವಿಷ್ಕಾರಕ್ಕೆ ಬಿಇಎಲ್ ಸಂಸ್ಥೆಯ ಸಿಬ್ಬಂದಿ 18 ತಿಂಗಳು ದುಡಿದಿದ್ದಾರೆ ಎಂದು ತಿಳಿಸಿದರು.
ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಮಾದರಿಯ ರೇಡಿಯೋವನ್ನು ಅಭಿವೃದ್ಧಿಪಡಿಸಲಾಗಿದೆ. ವಿದೇಶಗಳಲ್ಲಿರುವ ರೇಡಿಯೋಗಳಿಗೆ ಸರಿಸಾಟಿಯಾಗಿ ಇದು ನಿಲ್ಲಲಿದೆ. ಹೊಸ ಮಾದರಿಯ ರೇಡಿಯೋಗೆ ಶ್ರೀಲಂಕಾ, ಆಫ್ರಿಕಾ, ವಿಯೆಟ್ನಾಂ, ಥಾಯ್ಲೆಂಡ್, ಚೀನಾ, ನೈಜೀರಿಯಾ, ದಕ್ಷಿಣ ಆಫ್ರಿಕಾ, ಗಲ್ಫ್ ರಾಷ್ಟ್ರಗಳಿಂದ ಬೇಡಿಕೆ ಬಂದಿದೆ. ಭಾರತೀಯ ಸೇನೆಗೆ ಸರಬರಾಜು ಮಾಡುವುದರ ಜತೆಗೆ ಮುಂದಿನ ದಿನದಲ್ಲಿ ವಿದೇಶಗಳಿಗೆ ರಫ್ತು ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ