ಶಾಸಕ ವಿಶ್ವನಾಥ್ ಮೇಲೆ ಶ್ರೀನಿವಾಸ್ ನೇರ ಆರೋಪ
Team Udayavani, Feb 17, 2017, 11:59 AM IST
ಬೆಂಗಳೂರು: ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲಿನ ಶೂಟೌಟ್ ಪ್ರಕರಣ ಹೊಸ ತಿರುವು ಪಡೆದಿದ್ದು, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ಆರೋಪ ಕೇಳಿಬಂದಿದೆ. ಗುಂಡಿನ ದಾಳಿಯಿಂದ ಆಸ್ಪತ್ರೆಗೆ ಸೇರಿ ಚೇತರಿಸಿಕೊಳ್ಳುತ್ತಿರುವ ಶ್ರೀನಿವಾಸ್ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿ, “”ನನ್ನ ಮೇಲಿನ ಗುಂಡಿನ ದಾಳಿಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಾರಣ,” ಎಂದು ಹೇಳಿದ್ದಾರೆ.
“ರೈತ ಸಂತೆಗೆ ಹೋಗಿ ವಾಪಸ್ ಆಗುವ ಸಂದರ್ಭದಲ್ಲಿ ನನಗೆ ಗೊತ್ತಿಲ್ಲದಂತೆ ಗನ್ನಿಂದ ಫೈರ್ ಮಾಡಿದ್ದಾರೆ. ಶೂಟೌಟ್ಗೆ ಎಂಎಲ್ಎ ವಿಶ್ವನಾಥ್, ಡಾನ್ ಸತೀಶ್ ಹಾಗೂ ಬೂನ್ ಬಾಬು ಕಾರಣ. ಈ ವಿಚಾರವನ್ನು ನಾನು ಎಲ್ಲಿಗೆ ಬೇಕಾದರು ಬಂದು ದೂರು ಕೊಡಲು ಸಿದ್ಧ. ಈ ಮಾಹಿತಿಯನ್ನು ಈಗಾಗಲೇ ಪೊಲೀಸರಿಗೆ ಮತ್ತು ನನ್ನ ಪರ ವಕೀಲರಿಗೆ ತಿಳಿಸಿದ್ದೇನೆ,” ಎಂದು ಹೇಳಿರುವುದಾಗಿ ತಿಳಿದು ಬಂದಿದೆ.
“ಗನ್ನಿಂದ ಮೂರು ಬಾರಿ ನನಗೆ ಹೊಡೆಯಲಾಯಿತು. ಮೂರು ಭಾಗದಲ್ಲಿ ಗಾಯವಾಗಿದೆ. ಈಗಷ್ಟೇ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದೇನೆ. ಪೂರ್ತಿ ಆರೋಗ್ಯವಾದರೆ ಈ ಬಗ್ಗೆ ದೂರು ಕೊಡುತ್ತೇನೆ,” ಎಂದು ಹೇಳಿಕೆಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಫೆ.3ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಯಲಹಂಕದ ಕೋಗಿಲು ಕ್ರಾಸ್ ಬಳಿ ಕಡಬಗೆರೆ ಶ್ರೀನಿವಾಸ್ ಮೇಲೆ ಗುಂಡಿನ ದಾಳಿ ನಡೆದಿತ್ತು. ದಾಳಿಯಿಂದ ಶ್ರೀನಿವಾಸ್ ದೇಹಕ್ಕೆ 3 ಗುಂಡು ಹೊಕ್ಕಿದ್ದವು.
ಹೊಟ್ಟೆಯ ಭಾಗಕ್ಕೆ ಎರಡು ಮತ್ತು ಭುಜಕ್ಕೆ ಒಂದು ಗುಂಡು ತಗುಲಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೈಲಿನಲ್ಲಿರುವ ಆರೋಪಿಗಳು: ಕಡಬಗೆರೆ ಶ್ರೀನಿವಾಸ್ ಆರೋಪಿಸಿರುವಂತೆ ಡಾನ್ ಸತೀಶ್ ಅಲಿಯಾಸ್ ನಾಗಶೆಟ್ಟಿಹಳ್ಳಿ ಸತೀಶ್ ಹಾಗೂ ಬೂನ್ ಬಾಬು ಈಗಾಗಲೇ ಬಂಧಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು