ಎಚ್.ಡಿ. ದೇವೇಗೌಡರ ಭದ್ರತೆಗೆ ಸಿಬ್ಬಂದಿ ಕೊರತೆ
Team Udayavani, Feb 17, 2017, 12:00 PM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಎಚ್.ಡಿ.ದೇವೇಗೌಡ ಹಾಗೂ ಅವರ ಕುಟುಂಬ ಸದಸ್ಯರ ಭದ್ರತೆಗೆ ಶಿಷ್ಟಾಚಾರ ಪ್ರಕಾರ 156 ಸಿಬ್ಬಂದಿ ನಿಯೋಜಿಸಬೇಕು. ಆದರೆ, ವಾಸ್ತವವಾಗಿ ಇರುವುದು 60 ಸಿಬ್ಬಂದಿ ಮಾತ್ರ. ಉಳಿದ ಸಿಬ್ಬಂದಿ ನಿಯೋಜನೆ ಮೇರೆಗೆ ಬೇರೆಡೆ ಕಾರ್ಯನಿರ್ವಹಿಸುತ್ತಿದ್ದಾರೆ.
ಒಬ್ಬರು ಡಿಸಿಪಿ, ಇಬ್ಬರು ಎಸಿಪಿ ಭದ್ರತಾ ಕಾರ್ಯಕ್ಕೆ ನಿಯೋಜಿಸಬೇಕಿದ್ದರೂ ಎಸಿಪಿಗಳ ಬದಲಿಗೆ ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗಿದೆ. ಮುಖ್ಯಪೇದೆ, ಪೇದೆಗಳ ಸಂಖ್ಯೆಯೂ ಕಡಿಮೆಯಿದೆ ಎಂದು ಹೇಳಲಾಗಿದೆ. ಮೊದಲು ಝಡ್ ಫ್ಲಸ್ ಶ್ರೇಣಿ ಭದ್ರತೆ ದೇವೇಗೌಡರಿಗೆ ಒದಗಿಸಲಾಗಿತ್ತು. ಆಗ 261 ಸಿಬ್ಬಂದಿ ಒದಗಿಸಲಾಗಿತ್ತು. ಆ ನಂತರ ದೇವೇಗೌಡರೇ ತಮಗೆ ಝಡ್ ಶ್ರೇಣಿ ಸಾಕು ಎಂದು ಹೇಳಿದ್ದರು.
ಆಗ 156 ಸಿಬ್ಬಂದಿ ನೇಮಿಸಲಾಗಿತ್ತು. 156 ಸಿಬ್ಬಂದಿಯ ಪೈಕಿ ಇದೀಗ 60 ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ದೇವೇಗೌಡ, ಪತ್ನಿ ಚೆನ್ನಮ್ಮ, ಪುತ್ರರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮಾತ್ರ ಭದ್ರತೆ ಒದಗಿಸಿದ್ದು ಇತರೆ ಸದಸ್ಯರಿಗೆ ಭದ್ರತೆ ಒದಗಿಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎನ್ನಲಾಗಿದೆ.
ಶಿಷ್ಟಾಚಾರದ ಪ್ರಕಾರ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ದೇವೇಗೌಡರ ಕುಟುಂಬಕ್ಕೆ ಭದ್ರತೆ ಒದಗಿಸುವ ವಿಚಾರದಲ್ಲಿ ಸಿಬ್ಬಂದಿ ಕೊರತೆ ಸರ್ಕಾರ ಅಥವಾ ಗೃಹ ಇಲಾಖೆ ಗಮನಕ್ಕೆ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ಬಗ್ಗೆ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು.
-ರಮೇಶ್ಬಾಬು, ವಿಧಾನಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ