ಬುಧವಾರ ಮಧ್ಯರಾತ್ರಿವರೆಗೆ ಚಿಂತಿಸುತ್ತಲೇ ಇದ್ದ ಶಶಿಕಲಾ
Team Udayavani, Feb 17, 2017, 12:04 PM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬುಧವಾರ ಮಧ್ಯರಾತ್ರಿವರೆಗೂ ನಿದ್ದೆ ಮಾಡಿರಲಿಲ್ಲ. ಬುಧವಾರ ರಾತ್ರಿ ನೋಂದಣಿ ಕೊಠಡಿಯಲ್ಲೇ ಇದ್ದ ಶಶಿಕಲಾ ಏಕಾಂಗಿಯಾಗಿ ಗಾಢ ಚಿಂತೆಯಲ್ಲಿ ಮುಳುಗಿ ಮಧ್ಯರಾತ್ರಿವರೆಗೂ ನಿದ್ರಿಸಿರಲಿಲ್ಲ. ಆ ನಂತರ ನಿದ್ರೆಗೆ ಜಾರಿದ್ದರು ಎಂದು ಜೈಲು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರಾತ್ರಿ ಊಟಕ್ಕೆ ನಿಗದಿಯಾದಂತೆ 2 ಚಪಾತಿ ಹಾಗೂ ಒಂದು ಕಪ್ ರೈಸ್ ಹಾಗೂ ಸಾಂಬಾರು, ಮೊಸರು ನೀಡಲಾಗಿತ್ತು. ರಾತ್ರಿ 11 ಗಂಟೆಯಾದರೂ ಶಶಿಕಲಾ ಊಟ ಮಾಡದೆ ಮೌನಕ್ಕೆ ಶರಣಾಗಿದ್ದರು. ಆಗ ಇಳವರಸಿ ಬಲವಂತಪಡಿಸಿದ ನಂತರ ಮೊಸರನ್ನ ಸೇವಿಸಿದರು. ಗುರುವಾರ ಮುಂಜಾನೆ 5.30ರ ಸುಮಾರಿಗೆ ಎಚ್ಚರಗೊಂಡ ಶಶಿಕಲಾ, ಕಾರಾಗೃಹದ ಕೊಠಡಿಯಲ್ಲೇ ವಾಯುವಿಹಾರ ಮಾಡಿದರು.
6.30ಕ್ಕೆ ಸಿಬ್ಬಂದಿ ಕಾಫಿ ನೀಡಿದ್ದು, ತಿಂಡಿಗೆ ಪೊಂಗಲ್ ನೀಡುವಂತೆ ಶಶಿಕಲಾ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅದರಂತೆ ಪೊಂಗಲ್ ನೀಡಲಾಯಿತು. ನ್ಯಾಯಾಲಯ ಅನುಮತಿ ನೀಡಿರುವಂತೆ ತಮಿಳು ಪತ್ರಿಕೆ ಮತ್ತು ಇಂಗ್ಲೀಷ್ ಪತ್ರಿಕೆಗಳನ್ನು ಓದಲು ಅವಕಾಶ ಕಲ್ಪಿಸಲಾಗಿತ್ತು. ಬುಧವಾರ ಕೈದಿ ಸಮವಸ್ತ್ರ ಧರಿಸದ ಶಶಿಕಲಾ ಗುರುವಾರ ಜೈಲು ಸಿಬ್ಬಂದಿ ನೀಡಿದ್ದ ಸಮವಸ್ತ್ರ ಧರಿಸಿದರು.
ಶಶಿಕಲಾಗೆ ಬಿಗಿಭದ್ರತೆ: ಜೈಲಿನಲ್ಲಿ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಶಿಕಲಾ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಜೈಲಿನ ಕೊಠಡಿ ಸುತ್ತಮುತ್ತ ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಸಾಮಾನ್ಯ ಕೈದಿಯಾಗಿದ್ದರೂ ಸುರಕ್ಷತೆ ದೃಷ್ಟಿಯಿಂದ ಭದ್ರತೆ ನೀಡಲಾಗಿದೆ. ಒಂದೊಮ್ಮೆ ಅಹಿತಕರ ಘಟನೆ ನಡೆದರೆ ಕರ್ನಾಟಕ ಜೈಲು ಸುರಕ್ಷಿತವಲ್ಲ ಎಂದು ಚೆನ್ನೈ ಕಾಧಿರಾಗೃಹಕ್ಕೆ ವರ್ಗಾಯಿಸುವಂತೆ ಶಶಿಕಲಾ ಕಾನೂನು ಮೊರೆಹೋಗಬಹುದು.
ಹೀಗಾಗಿ, ಸಾಕಷ್ಟು ಭದ್ರತೆ ನೀಡಲಾಗಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ಶಶಿಕಲಾ ಅವರು ತಮ್ಮ ವಕೀಲರ ಮೂಲಕ ಚೆನ್ನೈ ಕಾರಾಗೃಹಕ್ಕೆ ತಮ್ಮನ್ನು ವರ್ಗಾಯಿಸುವಂತೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವೂ ಇದೆ ಎನ್ನಲಾಗಿದೆ.
ಭೇಟಿಗೆ ನಕಾರ
ಜೈಲಿನಲ್ಲಿರುವ ಶಶಿಕಲಾ ಅವರನ್ನು ಭೇಟಿಯಾಗುವ ಸಲುವಾಗಿ ಗುರುವಾರ ಮಾಜಿ ಶಾಸಕ ಗೋಪಾಲಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡಿನಿಂದ ಆಗಮಿಸಿದ್ದರು. ಆದರೆ ಭದ್ರತೆ ಹಿನ್ನೆಲೆಯಲ್ಲಿ ಪ್ರವೇಶ ದ್ವಾರದ ಬಳಿಯೇ ಪೊಲೀಸರು ಅವರು ತಡೆದರು.
ಶಶಿಕಲಾ ಅವರ ಭೇಟಿಗೆ ಬಂದಿದ್ದ ಕರ್ನಾಟಕದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪುಗಳೇಂದಿ, ಮಾಜಿ ಶಾಸಕ ಗೋಪಾಲಸ್ವಾಮಿ, ಕಾರ್ಮಿಕ ಘಟಕದ ಅಧ್ಯಕ್ಷ ಮಲಾರ್ ವೇಂದನ್, ಮಹೇಂದ್ರನ್ ಮತ್ತು ಆಸೈತಂಬಿ ಅವರಿಗೆ ಪೊಲೀಸರು ಅವಕಾಶ ನೀಡಲಿಲ್ಲ.
ಹೀಗಾಗಿ, ಬೆಂಬಲಿಗರು ನಿರಾಸೆಯಿಂದ ಹಿಂದಿರುಗುವಂತಾಯಿತು. ಗುರುವಾರ ಬೆಳಗ್ಗೆ ಶಶಿಕಲಾ ಅವರೊಂದಿಗೆ ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಚರ್ಚಿಸಲು ಆಗಮಿಸಿದ್ದ ಅವರ ವಕೀಲ ಮೂರ್ತಿ ಅವರಿಗೂ ಜೈಲು ಅಧಿಕಾರಿಗಳು ಅವಕಾಶ ಕಲ್ಪಿಸಿಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ