ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ


Team Udayavani, Feb 17, 2017, 12:07 PM IST

bellandur-lake-fire_.jpg

ಮಹದೇವಪುರ: ಇಬ್ಬಲೂರು ಸಮೀಪದ ಬೆಳ್ಳಂದೂರು ಕೆರೆಯಲ್ಲಿ ಗುರುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಸ್ಥಳೀಯ ನಾಗಕರಿಕರು ಗಾಬರಿಗೊಂಡಿದ್ದಾರೆ. ಎರಡು ವರ್ಷದ ಹಿಂದೆ ಬೆಳ್ಳಂದೂರು ಕೆರೆ ಕೋಡಿಯ ಬಳಿ ನೊರೆಯಲ್ಲಿ ಬೆಂಕಿ ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟಾಗಿತ್ತು. ಈಗ ಮತ್ತೂಮ್ಮೆ ಕೆರೆಯಲ್ಲಿ ಬೆಂಕಿ ಆವರಿಸಿರುವುದು ಸ್ಥಳೀಯರು ಗಾಬರಿಗೊಳ್ಳುವಂತೆ ಮಾಡಿದೆ. 

ಸುಮಾರು 919 ಎಕರೆಯಷ್ಟು ವಿಸ್ತಾರದ ಬೆಳ್ಳಂದೂರು ಕೆರೆಯಲ್ಲಿ ಜೊಂಡು ಹುಲ್ಲು ಮತ್ತು ನೊರೆ ತುಂಬಿದೆ. ರಾಸಾಯನಿಕಯುಕ್ತವಾಗಿರುವ ನೊರೆಗೆ ಬೆಂಕಿ ತಗುಲಿರುವು ದರಿಂದ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಸುದ್ದಿ  ತಿಳಿಯುತ್ತಲೇ ಕೆರೆಯ ಬಳಿ ನೂರಾರು ಮಂದಿ ಜಮಾಯಿಸಿದ್ದರು. 

ಕೆರೆಗೆ ನೇರವಾಗಿ ರಾಸಾಯನಿಕಗಳು ಮತ್ತು ಒಳಚರಂಡಿ ನೀರು ಸೇರುತ್ತಿರುವುದರಿಂದ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಕಳೆದ ಎರಡು ವರ್ಷಗಳಿಂದ ನೊರೆ ಸಮಸ್ಯೆ ಕಾಣಿಸುತ್ತಿದ್ದು, ಮೂರು ಬಾರಿ ನೊರೆಗೆ ಬೆಂಕಿ ಬಿದ್ದಿದೆ. ಸಾಂಕ್ರಾಮಿಕ ರೋಗಗಳ ತಾಣವಾಗಿ ಮಾರ್ಪಟ್ಟಿರುವ ಈ ಕೆರೆ ಸ್ಥಳೀಯರಿಗೆ ನರಕ ಸದೃಶವಾಗಿ ಪರಿಣಮಿಸಿದೆ.

ಈಗಾಗಲೇ ಈ ಕೆರೆಯಿಂದ ನಾನಾ ರೋಗಗಳಿಗೆ ತುತ್ತಾಗಿರುವ ಸ್ಥಳೀಯರು ಕೆರೆಯ ಅಭಿವೃದ್ಧಿಗೆ ಎಲ್ಲಾ ಜನಪ್ರತಿನಿಧಿಗಳ ಮೊರೆ ಹೋಗಿದ್ದಾರೆ. ಆದರೆ ಇಂದಿಗೂ ಅವರ ಸಮಸ್ಯೆ ಮಾತ್ರ ದೂರವಾಗಿಲ್ಲ. ಕೇಂದ್ರ ಹಾಗೂ ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಯನ ತಂಡಗಳು ಇಲ್ಲಿಗೆ ಬಂದು ಹಲವು ಬಾರಿ ಪರಿಶೀಲನೆ ನಡೆಸಿ ಹೋಗಿವೆ. ಆದರೆ ಸಮಸ್ಯೆಗೆ ಶಾಶ್ವತ ಪರಿಹಾರ ಮಾತ್ರ ಸಿಕ್ಕಿಲ್ಲ.

ಎಚ್‌ಎಎಲ್‌, ಕೋರಮಂಗಲ, ದೊಮ್ಮಲೂರು, ಶಿವಾಜಿನಗರ, ಮತ್ತು ಹೆಚ್‌ಎಸ್‌ಆರ್‌ ಲೇಔಟ್‌ ಸೇರಿದಂತೆ ಸುತ್ತಮುತ್ತಲ ಒಳಚರಂಡಿ ನೀರು ಸೇರಿದಂತೆ ಕಾರ್ಖಾನೆಗಳ ತ್ಯಾಜ್ಯಗಳು ನೇರವಾಗಿ ಕೆರೆಗೆ ಸೇರುತ್ತಿರುವುದೇ ಕೆರೆಯ ಮಾಲಿನ್ಯಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಗುರುವಾರ ಸಂಜೆಯ ಹೊತ್ತಿಗೆ ಕೆರೆಯಲ್ಲಿ ಬೆಂಕಿಯಿಂದ ದಟ್ಟ ಹೊಗೆ ಆವರಿಸಿತ್ತು. ಆದರೆ ಬಿಬಿಎಂಪಿಯ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದಿರಲಿಲ್ಲ.

ಹೈನುಗಾರರ ಕೈವಾಡ?: ಬೇಸಿಗೆಯಾದ ಕಾರಣ ಕೆರೆಯಲ್ಲಿ ಹೊಸ ಹುಲ್ಲು ಚಿಗುರುತ್ತದೆ. ಇದೇ ಕಾರಣಕ್ಕಾಗಿಯೇ ಸ್ಥಳೀಯ ಹೈನುಗಾರರು ಕೆರೆಯ ಒಣಹುಲ್ಲಿಗೆ ಬೆಂಕಿ ಇಟ್ಟಿರುವ ಸಾದ್ಯತೆಗಳೂ ಇವೆ. ಕೆರೆಯಲ್ಲಿ ರಾಸಾಯನಿಕ ಮಿಶ್ರಿತ ನೊರೆ ಇರುವುದರಿಂದ ಬೆಂಕಿ ತೀವ್ರ ಗೊಂಡಿದೆ ಎಂದು ಪರಿಸರ ಪ್ರೇಮಿ ಮಂಜುನಾಥ್‌ ಅಭಿಪ್ರಾಯಪಟ್ಟಿದ್ದಾರೆ. 

ಕೆರೆಯಲ್ಲಿ ಆಗಾಗ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ನಾಗರಿಕರು ಭಯಭೀತರಾಗಿದ್ದಾರೆ. ಇನ್ನು ದುರ್ವಾಸನೆಯಂತೂ ಸಹಿಸಲಸಾಧ್ಯ. ಇಷ್ಟಾದರೂ ಸರ್ಕಾರ ಮಾತ್ರ ಈವರೆಗೆ ಶಾಶ್ವತ ಪರಿಹಾರ ಕೈಗೊಂಡಿಲ್ಲ. 
-ವೆಂಕಟೇಶ್‌, ಸ್ಥಳೀಯ ನಿವಾಸಿ

ಈ ಕೆರೆಯ ಪರಿಸ್ಥಿತಿ ಹೇಗಿದೆ ಎಂದರೆ, ಮಳೆ ಬಿದ್ದರೆ ದಟ್ಟ ನೊರೆ ಸಮಸ್ಯೆ ಕಾಡುತ್ತದೆ. ಅದು ರಸ್ತೆಯಲ್ಲಿ ಓಡಾಡುವ ಜನರ ಮುಖಕ್ಕೆ ಬೀಳುತ್ತದೆ.  ಮಳೆ ಬೀಳದೆ ಬಿಸಿಲು ಹೆಚ್ಚಾದರೆ ನೊರೆಗೆ ಬೆಂಕಿ ತಗುಲಿ ಆತಂಕ ಸೃಷ್ಟಿಸುತ್ತದೆ. 
-ಹರೀಶ್‌, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.