ದೇಶದ ಮೆಟ್ರೋ ಯೋಜನೆಗಳಿಗೆ ತಾಂತ್ರಿಕ ತಂತ್ರಜ್ಞರ ಕೊರತೆ: ಶ್ರೀಧರನ್‌


Team Udayavani, Mar 19, 2017, 11:51 AM IST

ceio.jpg

ಬೆಂಗಳೂರು: “ದೇಶದ ಮೆಟ್ರೋ ಯೋಜನೆಗಳಿಗೆ ಸುರಂಗ ಕೊರೆಯುವ “ಟನಲ್‌ ಬೋರಿಂಗ್‌ ಮೆಷಿನ್‌’ (ಟಿಬಿಎಂ)ಗಳು ಹಾಗೂ ತಾಂತ್ರಿಕ ತಜ್ಞರ ಅಭಾವವಿದೆ. ಹೀಗಾಗಿ ಕಾಮಗಾರಿಗಳು ವಿಳಂಬವಾಗುತ್ತಿದೆ,” “ಮೆಟ್ರೋ ಮ್ಯಾನ್‌’ ಖ್ಯಾತಿಯ, ದೆಹಲಿ ಮೆಟ್ರೋನ ಹಿರಿಯ ಸಲಹೆಗಾರ ಡಾ.ಇ.ಶ್ರೀಧರನ್‌ ಹೇಳಿದ್ದಾರೆ. 

ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇಶದಲ್ಲಿ 12 ಕಡೆ ಮೆಟ್ರೋ ಯೋಜನೆಗಳು ಪ್ರಗತಿಯಲ್ಲಿವೆ. ಟಿಬಿಎಂ ಯಂತ್ರಗಳಿಗೆ ಭಾರಿ ಬೇಡಿಕೆಯಿದೆ. ಅಲ್ಲದೇ ಸುರಂಗ ನಿರ್ಮಾಣ ಕಾಮಗಾರಿ ಎತ್ತರಿಸಿದ ಮಾರ್ಗದ ಕಾಮಗಾರಿಗಳಿಗಿಂತ ನಿಧಾನಗತಿಯಲ್ಲಿ ನಡೆಯಲಿವೆ,” ಎಂದು ಹೇಳಿದರು.

“ದೆಹಲಿ ಮೆಟ್ರೋ ಯೋಜನೆ ಅನುಷ್ಠಾನದ ವೇಳೆ ಐಐಟಿ ಸಂಸ್ಥೆಯಲ್ಲಿ ಎಂ.ಟೆಕ್‌ ಕೋರ್ಸ್‌ ಆರಂಭಿಸಿ ತಾಂತ್ರಿಕ ತಜ್ಞರನ್ನು ರೂಪಿಸಲಾಯಿತು. ಆದರೆ ಇಂದು ದೇಶದ ವಿವಿಧೆಡೆ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ತಾಂತ್ರಿಕ ತಜ್ಞರ ಕೊರತೆಯೂ ಕಾಡುತ್ತಿರಬಹುದು. ಇದು ಸಹಜವಾಗಿಯೇ ಕಾಮಗಾರಿ ಮೇಲೆ ಪರಿಣಾಮ ಬೀರಲಿದೆ,” ಎಂದು ಅಭಿಪ್ರಾಯಪಟ್ಟರು. 

“ನಮ್ಮ ಮೆಟ್ರೋ ಯೋಜನೆಯಲ್ಲಿ ಎಲ್ಲ ರೀತಿಯ ತಂತ್ರಜ್ಞಾನ ಬಳಸಲಾ­ಗುತ್ತಿದೆ. ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಜನಸಾಂದ್ರತೆಯೂ ಹೆಚ್ಚಿದ್ದು, ನಾನಾ ಸೇವೆಗಳ ಸಂಪರ್ಕ ಜಾಲ ಸ್ಥಳಾಂತರ, ಭೂಸ್ವಾಧೀನ ಪ್ರಕ್ರಿ­ಯೆಯಿಂದಾಗಿ ಯೋಜನೆ ಅನುಷ್ಠಾನ‌­ದಲ್ಲಿ ತಡವಾಗಿರಬಹುದು. ಟಿಬಿಎಂ ಯಂತ್ರಗಳಲ್ಲಿ ಬಳಸುವ ಕೆಲ ಉಪಕರಣಗಳು, ಪರಿಕರಗಳ ದುರಸ್ತಿ­ಯಿಂದಲೂ ವಿಳಂಬವಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ,” ಎಂದು ಹೇಳಿದರು.

“ಯೋಜನೆಗೆ ಸಂಬಂಧಪಟ್ಟಂತೆ ತ್ವರಿ­ತವಾಗಿ ನಿರ್ಧಾರ ಕೈಗೊಳ್ಳುವುದು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದು “ವಿಶೇಷ ಉದ್ದೇಶಿತ ಯೋಜನೆ’ಯ ಉದ್ದೇಶ. ಆದರೆ “ನಮ್ಮ ಮೆಟ್ರೋ’ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸುವ ಕಾಲಮಿತಿ ವಿಸ್ತರಣೆಯಾಗುತ್ತಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ,” ಎಂದರು.

“ಮೆಟ್ರೋ ಯೋಜನೆಗೆ ಅಗತ್ಯವಾದ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡುವುದು ಕೂಡ ಮುಖ್ಯವಾಗಿದೆ. ಸೂಕ್ತ ಮೇಲ್ವಿಚಾರಣೆಯೂ ಅಗತ್ಯವಾಗಿರುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ನಗರದಲ್ಲಿ ಅಗತ್ಯವಿರುವ ಕಡೆ ಮೆಟ್ರೋ ಸೇವೆ ವಿಸ್ತರಣೆಗೆ ಒಲವು ತೋರಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಹೈಸ್ಪೀಡ್‌ ರೈಲು ಮಾತ್ರ ಪರ್ಯಾಯ 
ಬಸವೇಶ್ವರ ವೃತ್ತದಿಂದ ಹೆಬ್ಟಾಳದ ವರೆಗೆ ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಉಕ್ಕಿನ ಸೇತುವೆಯನ್ನು ವಿರೋಧಗಳ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ. ಹೀಗಾಗಿ ಪರ್ಯಾಯವೇನು ಎಂಬ ಪ್ರಶ್ನೆ ಎದ್ದಿದೆ. ಇದೇ ಹೊತ್ತಿನಲ್ಲೇ ಆ ಮಾರ್ಗದಲ್ಲಿ ಹೈಸ್ಪೀಡ್‌ ರೈಲು ಸೂಕ್ತ ಎಂದು ಮೆಟ್ರೋ ತಜ್ಞ ಶ್ರೀಧರನ್‌ ಅಬಿಪ್ರಾಯಪಟ್ಟಿದ್ದಾರೆ. ಬೆಂಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಗಮ ಸಂಚಾರಕ್ಕಾಗಿ ಹೈಸ್ಪೀಡ್‌ ರೈಲು ಸೂಕ್ತವೆನಿಸಿದೆ.

ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಹೈಸ್ಪೀಡ್‌ ರೈಲು ಸಂಪರ್ಕ ಕಲ್ಪಿಸಬಹುದು. ಇಲ್ಲವೇ ಮೆಟ್ರೋ ರೈಲು ಮಾರ್ಗವನ್ನೇ ವಿಸ್ತರಿಸಬಹುದು. ಮೆಟ್ರೋ ಹಾಕುವುದಾದರೆ, ನಿಲ್ದಾಣಗಳನ್ನು ಕಡಿಮೆ ಮಾಡಿ ವೇಗ ಹೆಚ್ಚಿಸುವುದು ಸೂಕ್ತ ಎಂದು ಮೆಟ್ರೋ ತಜ್ಞ ಇ.ಶ್ರೀಧರನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.