ದೇಶದ ಮೆಟ್ರೋ ಯೋಜನೆಗಳಿಗೆ ತಾಂತ್ರಿಕ ತಂತ್ರಜ್ಞರ ಕೊರತೆ: ಶ್ರೀಧರನ್‌


Team Udayavani, Mar 19, 2017, 11:51 AM IST

ceio.jpg

ಬೆಂಗಳೂರು: “ದೇಶದ ಮೆಟ್ರೋ ಯೋಜನೆಗಳಿಗೆ ಸುರಂಗ ಕೊರೆಯುವ “ಟನಲ್‌ ಬೋರಿಂಗ್‌ ಮೆಷಿನ್‌’ (ಟಿಬಿಎಂ)ಗಳು ಹಾಗೂ ತಾಂತ್ರಿಕ ತಜ್ಞರ ಅಭಾವವಿದೆ. ಹೀಗಾಗಿ ಕಾಮಗಾರಿಗಳು ವಿಳಂಬವಾಗುತ್ತಿದೆ,” “ಮೆಟ್ರೋ ಮ್ಯಾನ್‌’ ಖ್ಯಾತಿಯ, ದೆಹಲಿ ಮೆಟ್ರೋನ ಹಿರಿಯ ಸಲಹೆಗಾರ ಡಾ.ಇ.ಶ್ರೀಧರನ್‌ ಹೇಳಿದ್ದಾರೆ. 

ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇಶದಲ್ಲಿ 12 ಕಡೆ ಮೆಟ್ರೋ ಯೋಜನೆಗಳು ಪ್ರಗತಿಯಲ್ಲಿವೆ. ಟಿಬಿಎಂ ಯಂತ್ರಗಳಿಗೆ ಭಾರಿ ಬೇಡಿಕೆಯಿದೆ. ಅಲ್ಲದೇ ಸುರಂಗ ನಿರ್ಮಾಣ ಕಾಮಗಾರಿ ಎತ್ತರಿಸಿದ ಮಾರ್ಗದ ಕಾಮಗಾರಿಗಳಿಗಿಂತ ನಿಧಾನಗತಿಯಲ್ಲಿ ನಡೆಯಲಿವೆ,” ಎಂದು ಹೇಳಿದರು.

“ದೆಹಲಿ ಮೆಟ್ರೋ ಯೋಜನೆ ಅನುಷ್ಠಾನದ ವೇಳೆ ಐಐಟಿ ಸಂಸ್ಥೆಯಲ್ಲಿ ಎಂ.ಟೆಕ್‌ ಕೋರ್ಸ್‌ ಆರಂಭಿಸಿ ತಾಂತ್ರಿಕ ತಜ್ಞರನ್ನು ರೂಪಿಸಲಾಯಿತು. ಆದರೆ ಇಂದು ದೇಶದ ವಿವಿಧೆಡೆ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ತಾಂತ್ರಿಕ ತಜ್ಞರ ಕೊರತೆಯೂ ಕಾಡುತ್ತಿರಬಹುದು. ಇದು ಸಹಜವಾಗಿಯೇ ಕಾಮಗಾರಿ ಮೇಲೆ ಪರಿಣಾಮ ಬೀರಲಿದೆ,” ಎಂದು ಅಭಿಪ್ರಾಯಪಟ್ಟರು. 

“ನಮ್ಮ ಮೆಟ್ರೋ ಯೋಜನೆಯಲ್ಲಿ ಎಲ್ಲ ರೀತಿಯ ತಂತ್ರಜ್ಞಾನ ಬಳಸಲಾ­ಗುತ್ತಿದೆ. ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಜನಸಾಂದ್ರತೆಯೂ ಹೆಚ್ಚಿದ್ದು, ನಾನಾ ಸೇವೆಗಳ ಸಂಪರ್ಕ ಜಾಲ ಸ್ಥಳಾಂತರ, ಭೂಸ್ವಾಧೀನ ಪ್ರಕ್ರಿ­ಯೆಯಿಂದಾಗಿ ಯೋಜನೆ ಅನುಷ್ಠಾನ‌­ದಲ್ಲಿ ತಡವಾಗಿರಬಹುದು. ಟಿಬಿಎಂ ಯಂತ್ರಗಳಲ್ಲಿ ಬಳಸುವ ಕೆಲ ಉಪಕರಣಗಳು, ಪರಿಕರಗಳ ದುರಸ್ತಿ­ಯಿಂದಲೂ ವಿಳಂಬವಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ,” ಎಂದು ಹೇಳಿದರು.

“ಯೋಜನೆಗೆ ಸಂಬಂಧಪಟ್ಟಂತೆ ತ್ವರಿ­ತವಾಗಿ ನಿರ್ಧಾರ ಕೈಗೊಳ್ಳುವುದು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದು “ವಿಶೇಷ ಉದ್ದೇಶಿತ ಯೋಜನೆ’ಯ ಉದ್ದೇಶ. ಆದರೆ “ನಮ್ಮ ಮೆಟ್ರೋ’ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸುವ ಕಾಲಮಿತಿ ವಿಸ್ತರಣೆಯಾಗುತ್ತಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ,” ಎಂದರು.

“ಮೆಟ್ರೋ ಯೋಜನೆಗೆ ಅಗತ್ಯವಾದ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡುವುದು ಕೂಡ ಮುಖ್ಯವಾಗಿದೆ. ಸೂಕ್ತ ಮೇಲ್ವಿಚಾರಣೆಯೂ ಅಗತ್ಯವಾಗಿರುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ನಗರದಲ್ಲಿ ಅಗತ್ಯವಿರುವ ಕಡೆ ಮೆಟ್ರೋ ಸೇವೆ ವಿಸ್ತರಣೆಗೆ ಒಲವು ತೋರಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಹೈಸ್ಪೀಡ್‌ ರೈಲು ಮಾತ್ರ ಪರ್ಯಾಯ 
ಬಸವೇಶ್ವರ ವೃತ್ತದಿಂದ ಹೆಬ್ಟಾಳದ ವರೆಗೆ ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಉಕ್ಕಿನ ಸೇತುವೆಯನ್ನು ವಿರೋಧಗಳ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ. ಹೀಗಾಗಿ ಪರ್ಯಾಯವೇನು ಎಂಬ ಪ್ರಶ್ನೆ ಎದ್ದಿದೆ. ಇದೇ ಹೊತ್ತಿನಲ್ಲೇ ಆ ಮಾರ್ಗದಲ್ಲಿ ಹೈಸ್ಪೀಡ್‌ ರೈಲು ಸೂಕ್ತ ಎಂದು ಮೆಟ್ರೋ ತಜ್ಞ ಶ್ರೀಧರನ್‌ ಅಬಿಪ್ರಾಯಪಟ್ಟಿದ್ದಾರೆ. ಬೆಂಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಗಮ ಸಂಚಾರಕ್ಕಾಗಿ ಹೈಸ್ಪೀಡ್‌ ರೈಲು ಸೂಕ್ತವೆನಿಸಿದೆ.

ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಹೈಸ್ಪೀಡ್‌ ರೈಲು ಸಂಪರ್ಕ ಕಲ್ಪಿಸಬಹುದು. ಇಲ್ಲವೇ ಮೆಟ್ರೋ ರೈಲು ಮಾರ್ಗವನ್ನೇ ವಿಸ್ತರಿಸಬಹುದು. ಮೆಟ್ರೋ ಹಾಕುವುದಾದರೆ, ನಿಲ್ದಾಣಗಳನ್ನು ಕಡಿಮೆ ಮಾಡಿ ವೇಗ ಹೆಚ್ಚಿಸುವುದು ಸೂಕ್ತ ಎಂದು ಮೆಟ್ರೋ ತಜ್ಞ ಇ.ಶ್ರೀಧರನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.