ರಾಹುಲ್ ಭಸ್ಮಾಸುರ ಎಂದ ಡಿವಿಎಸ್
Team Udayavani, Mar 19, 2017, 11:59 AM IST
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಸ್ಮಾಸುರ ಇದ್ದಂತೆ. ಅವರ ಜತೆ ಹೋದವರೆಲ್ಲರೂ ಸುಟ್ಟುಹೋಗುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಶನಿವಾರ ತಮ್ಮ 62ನೇ ಜನ್ಮದಿನ ಆಚರಿಸಿಕೊಂಡ ಅವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿ, “ರಾಹುಲ್ ಗಾಂಧಿ ಅವರು ಭಸ್ಮಾಸುರ ಇದ್ದಂತೆ. ಹೀಗಾಗಿ ಅವರ ಪಕ್ಷದೊಂದಿಗೆ ಹೋದವರು ಸುಟ್ಟು ಹೋಗುತ್ತಾರೆ. ಇದಕ್ಕೆ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಸಾಕ್ಷಿ. ಅಲ್ಲಿ ಕಾಂಗ್ರೆಸ್ ಜತೆ ಹೋದ ಎಸ್ಪಿ ಕೂಡ ಹೀನಾಯವಾಗಿ ಸೋತಿತು. ಮುಂದೆ ಕರ್ನಾಟಕದಲ್ಲೂ ಅದೇ ರೀತಿ ಆಗಲಿದೆ,” ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಮುಖಂಡರು ಮತ್ತು ಸಚಿವರ ಮೇಲೆ ಆದಾಯ ತೆರಿಗೆ ಇಲಾಖೆಯವರು ನಡೆಸುತ್ತಿರುವ ದಾಳಿ ರಾಜಕೀಯ ಪ್ರೇರಿತ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೂರು ನೀಡಿದ ಮಾತ್ರಕ್ಕೆ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡುವುದಿಲ್ಲ. ಪ್ರಾಥಮಿಕ ತನಿಖೆ ನಡೆಸಿ ಮೇಲ್ನೋಟಕ್ಕೆ ಆರೋಪ ಸಾಬೀತಾಗುತ್ತದೆ ಎಂಬುದನ್ನು ಖಾತರಿಪಡಿಸಿಕೊಂಡೇ ದಾಳಿ ನಡೆಸುತ್ತಾರೆ ಎಂದರು.
ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ನೂರಾರು ಹಗರಣಗಳು ನಡೆದಿದ್ದವು. ಆ ಯುಪಿಎನ ಸಂತತಿಯೇ ಈ ಕಾಂಗ್ರೆಸ್ನವರು. ಹೀಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉಕ್ಕಿನ ಮೇಲ್ಸೇತುವೆಯಿಂದ ಹಿಡಿದು ಪರಿಶಿಷ್ಟ ಜಾತಿ ಮತ್ತು ಪಂಗಡವರಿಗೆ ನೀಡುವ ಹಾಸಿಗೆ, ದಿಂಬಿನವರೆಗೂ ಹಗರಣಗಳು ನಡೆಯುತ್ತಿವೆ. ಹೀಗಾಗಿಯೇ ಅವರಿಗೆ ಹೆದರಿಕೆ ಆರಂಭವಾಗಿ ಸಿಬಿಐ ಗುಮ್ಮ ಕನಸ್ಸಿನಲ್ಲಿ ಬರುತ್ತಿದೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್