ಟ್ವಿಸ್ಟ್: ಯುವಕನೇ ನಾಲಗೆ,ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದೇಕೆ?
Team Udayavani, Mar 19, 2017, 1:45 PM IST
ಬೆಂಗಳೂರು: ವೈಟ್ಫೀಲ್ಡ್ನಲ್ಲಿ ಒಡಿಶಾ ಮೂಲದ ಯುವಕ ಬಿಜು ನಾಯಕ್(20) ನಾಲಿಗೆ ಮತ್ತು ಮರ್ಮಾಂಗ ಕತ್ತರಿಸಿರುವ ಪ್ರಕರಣಕ್ಕೆ ತಿರುವು ಬಂದಿದೆ. ದುಷ್ಕರ್ಮಿಗಳು ದಾಳಿ ನಡೆಸಿ ನಾಲಿಗೆ ಮತ್ತು ಮರ್ಮಾಂಗ ಕತ್ತರಿಸಿಲ್ಲ ಬದಲಾಗಿ ದೇವರನ್ನು ಒಲಿಸಿಕೊಳ್ಳುವ ಸಲುವಾಗಿ ಬಿಜುವೇ ಕೊಯ್ದು ಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಮ್ಮಡಿಹಳ್ಳಿ ಬಳಿಯಿರುವ ಕರಿಯಮ್ಮ ದೇವಾಲಯದ ಸಮೀಪದ ಕಾರ್ಮಿಕರ ಶೆಡ್ನಲ್ಲಿ ವಾಸವಿರುವ ವೃತ್ತಿಯಲ್ಲಿ ಕಾಪೆìಂಟರ್ ಆಗಿರುವ ಬಿಜು ನಾಯಕ್ ಕಾಳಿಯನ್ನು ಒಲಿಸಿಕೊಳ್ಳಲು ಅಂಗಾಂಗಗಳನ್ನು ಬಲಿ ನೀಡಬೇಕು ಆಗ ನಾವು ಬಯಸಿದ್ದನ್ನು ಪಡೆಯಬಹುದು ಎಂಬ ಬಿಹಾರ ಮೂಲದ ಸ್ನೇಹಿತರ ಸಲಹೆಯಂತೆ ಗುಪ್ತಾಂಗ ಮತ್ತು ನಾಲಗೆಯನ್ನು ಮಧ್ಯರಾತ್ರಿ ಕತ್ತರಿಸಿಕೊಂಡಿದ್ದಾನೆ. ಬಳಿಕ ನೋವಿನಿಂದ ಚೀರುತ್ತಾ ತನ್ನ ಮೇಲೆ ದಾಳಿ ನಡೆದಿದೆ ಎಂದು ಕತೆ ಕಟ್ಟಿದ್ದ.
ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮೂತ್ರ ವಿಸರ್ಜನೆಗೆಂದು ಶೆಡ್ನಿಂದ ಹೊರಬಂದಾಗ ನಾಲ್ಕೈದು ಮಂದಿ ಮುಸುಕುಧಾರಿಗಳು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ನಾಲಿಗೆ ಮತ್ತು ಮರ್ಮಾಂಗವನ್ನು ಕತ್ತರಿಸಿ. ಬಳಿಕ ಶೆಡ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಹೇಳಿದ್ದ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ವೈಟ್ಫೀಲ್ಡ್ ಠಾಣೆ ಪೊಲೀಸರು ವಿಚಾರಣೆ ವೇಳೆ ಬಿಜುವೇ ಕತ್ತರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.
ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜು ಮಾತನಾಡಲು ಸಾಧ್ಯವಾಗದೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ