ವಿವಾಹಿತ ಭಗ್ನ ಪ್ರೇಮಿಯಿಂದ ಯುವತಿ ಕಗ್ಗೊಲೆ; ಮಹಿಳೆಗೂ ಇರಿತ !
Team Udayavani, Apr 11, 2017, 4:14 PM IST
ಬೆಂಗಳೂರು: ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ವಿವಾಹಿತನೊಬ್ಬ ಇರಿದು ಹತ್ಯೆಗೈದಿದ್ದು, ತಡೆಯಲು ಬಂದ ಮಹಿಳೆಗೂ ಇರಿದ ಅಮಾನುಷ ಘಟನೆ ಮಂಗಳವಾರ ಮಧ್ಯಾಹ್ನ ಇಲ್ಲಿನ ದೀಪಾಂಜಲಿ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿ ಗಿರೀಶ್ (35) ಎಂಬಾತ ಕೃತ್ಯ ಎಸಗಿದ್ದು, ಶೋಭಾ ಎಂಬ ಯುವತಿ ಹತ್ಯೆ ಗೀಡಾಗಿದ್ದು, ವಿಜಯಮ್ಮ ಎನ್ನುವ ಮಹಿಳೆ ಗಂಭೀರವಾಗಿ ಗಾಯಗೊಂಡವರು.
ಗಿರೀಶ್ನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಶೋಭಾಳಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇಂದು ಚೂರಿ ಸಮೇತ ಬಂದಿದ್ದ ಆತ ಪ್ರೀತಿಸುವಂತೆ ಪೀಡಿಸಿದ್ದು ನಿರಾಕರಿಸಿದಾಗ ಬಲವಾಗಿ ಹೊಟ್ಟೆಯ ಭಾಗಕ್ಕೆ ಇರಿದಿದ್ದಾನೆ. ಈ ವೇಳೆ ನೆರಮನೆ ವಿಜಯಮ್ಮ ಬಂದು ತಡೆಯಲು ಮುಂದಾಗಿದ್ದು ಅವರಿಗೂ ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ.
ಗಂಭೀರವಾಗಿ ರಕ್ತಸ್ರಾವಕ್ಕೊಳಗಾಗಿದ್ದ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೋಭಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ವಿಜಯಮ್ಮ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯ ಬಳಿಕ ಗಿರೀಶ್ ತಲೆ ಮರೆಸಿಕೊಂಡಿದ್ದು,ಆತನಿಗಾಗಿ ಬ್ಯಾಟರಾಯನಪುರ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಗಿರೀಶ್ ಪೈಂಟರ್ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದ್ದು, 500 ಮೀಟರ್ ದೂರದಲ್ಲಿ ಶೋಭಾ ಅಣ್ಣನೊಂದಿಗೆ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್