ದರೋಡೆ ನಡೆದ ಕೆಲವೇ ಗಂಟೆಯಲ್ಲಿ ಆರೋಪಿಗಳ ಬಂಧಿಸಿದ ಪೊಲೀಸರು
Team Udayavani, Apr 21, 2017, 11:33 AM IST
ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಬೆದರಿಸಿ ಏಳು ಲಕ್ಷ ರೂ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಯಶವಂತಪುರ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಗುಜರಾತ್ ಮೂಲದ ಅಹಮದ್ ಮೆಮನ್, ಆಸೀಂ, ಸುಹೈಲ್, ಮಕೀಬ್ ಪಠಾಣ್ ಬಂಧಿತರು.
ಯಶವಂತಪುರ ಆರ್ಎಂಸಿ ಯಾರ್ಡ್ನಲ್ಲಿ ಬೇಳೆ ವ್ಯಾಪಾರಿಯಾಗಿರುವ ಗುಜರಾತ್ ಮೂಲದ ಟಾಡಾ ಅಶ್ವಕ್ ಸಗಟು ವ್ಯಾಪಾರಿಗಳಿಂದ ಹಣ ಸಂಗ್ರಹಿಸಿಕೊಂಡು ಬುಧವಾರ ರಾತ್ರಿ 1-30ರಲ್ಲಿ ದ್ವಿಚಕ್ರ ವಾಹನದಲ್ಲಿ ಎಚ್ಎಂಟಿ ಲೇಔಟ್ನಲ್ಲಿರುವ ಮನೆಗೆ ವಾಪಸಾಗುತ್ತಿರುಧಿವಾಗ ಬಿ.ಕೆ ನಗರ ಎರಡನೇ ಮುಖ್ಯರಸ್ತೆಯಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಅಲ್ಲದೆ, ಹಲ್ಲೆ ನಡೆಸಿ ಅವರ ಬಳಿಯಿದ್ದ 7.11ಲಕ್ಷ ನಗದು ದೋಚಿ ಪರಾರಿಯಾದರು.
ಅಶ್ವಕ್ ಕೂಡಲೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಂಟ್ರೋಲ್ ರೂಂ ಸಿಬ್ಬಂದಿ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ವಿಷಯ ತಲುಪಿಸಿದ್ದರು. ಇದರಿಂದ ರಾತ್ರಿ ಪಾಳಿ ಸೇವೆಯಲ್ಲಿದ್ದ ಪೊಲೀಸರು ಜಾಗೃತಗೊಂಡಿದ್ದರು. ಎಂಟನೇ ಮೈಲಿಯಲ್ಲಿ ರಾತ್ರಿ ಪಾಳಿ ಗಸ್ತಿನಲ್ಲಿದ್ದ ಬಾಗಲೂರು ಠಾಣೆ ಪೇದೆ ಅಶೋಕ್ ಹಾಗೂ ಗೃಹರಕ್ಷಕ ದಳ ಗಾರ್ಡ್ ಗೌತಮ್ ಅವರಿಗೂ ದರೋಡೆ ವಿಷಯ ಗೊತ್ತಾಗಿ ಅವರೂ ಎಚ್ಚರವಹಿಸಿದ್ದರು.
ಸ್ವಲ್ಪ ಸಮಯದ ನಂತರ ಆರೋಪಿ ಮಕೀಬ್ ಪಠಾಣ್ ಇದೇ ಮಾರ್ಗದಲ್ಲಿ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ. ಆತನನ್ನು ಹಿಡಿದುಕೊಂಡು ವಿಚಾರಣೆಗೊಳಪಡಿಸಿದಾಗ ವ್ಯಾಪಾರಿ ದರೋಡೆ ಪ್ರಕರಣದ ಬಗ್ಗೆ ಆತ ಬಾಯ್ಬಿಟ್ಟ. ಕೂಡಲೇ ಕಾರ್ಯಪ್ರವೃತ್ತರಾದ ಯಶವಂತಪುರ ಠಾಣೆ ಪೊಲೀಸರು ಉಳಿದ ಮೂವರು ಆರೋಪಿಗಳನ್ನು ಬಂಧಿಸಿ ಕಳವು ಮಾಡಿದ್ದ ಹಣ ವಶಪಡಿಸಿಕೊಂಡರು.
ನಾಲ್ವರು ಆರೋಪಿಗಳು ಆರ್ಎಂಸಿ ಯಾರ್ಡ್ನಲ್ಲಿ ಲೆಕ್ಕಬರೆಯುವ ಕೆಲಸ ಮಾಡಿಕೊಂಡಿದ್ದಾರೆ. ದರೋಡೆಗೊಳಧಿಗಾಗಿದ್ದ ಅಶ್ವಕ್, ಪ್ರತಿದಿನ ಹಣ ಸಂಗ್ರಹ ಮಾಡಿಕೊಂಡು ಹೋಗುವ ಕುರಿತು ಆರೋಪಿಗಳು ಮಾಹಿತಿ ಪಡೆದುಕೊಂಡಿದ್ದರು. ಅದರಂತೆ ಬುಧವಾರ ರಾತ್ರಿ ದರೋಡೆ ಮಾಡಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ