ನಗರದ ಮೂಲ ಸೌಕರ್ಯಕ್ಕೆ ಆದ್ಯತೆ: ದೇಶಪಾಂಡೆ


Team Udayavani, Apr 21, 2017, 11:58 AM IST

rv-deshpande.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಸ್ಥಾಪನೆಯಾಗಿರುವ ಕೈಗಾರಿಕೆಗಳಿಗೆ ಸುಗಮ ಸಂಪರ್ಕ ವ್ಯವಸ್ಥೆ ಕಲ್ಪಿಸುವ ಜತೆಗೆ ಇಡೀ ನಗರದಲ್ಲಿ ಸಂಚಾರ ಸುಗಮಗೊಳಿಸಲು ಪೂರಕವಾದ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು.

ಸಂಚಾರ ದಟ್ಟಣೆ, ಮಾಲಿನ್ಯ ಇತರೆ ಕಾರಣಗಳಿಂದ ಬೆಂಗಳೂರಿನಲ್ಲಿ ಕೈಗಾರಿಕೆಗಳ ಸ್ಥಾಪನೆಗಿಂತ ಇತರೆ ಪ್ರದೇಶಗಳಲ್ಲಿ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ನಗರದಲ್ಲಿನ ಕೈಗಾರಿಕಾ ಪ್ರದೇಶಗಳಿಗೆ ಸುಗಮ ಸಂಪರ್ಕ ಕಲ್ಪಿಸಲು ಸರ್ಕಾರ ಗಮನ ಹರಿಸಿದೆ ಎಂದು ಅವರು “ಉದಯವಾಣಿ’ಗೆ ಹೇಳಿದ್ದಾರೆ. 

ಮೆಟ್ರೋ ಮೊದಲ ಹಂತದ ಯೋಜನೆ ಬಹುತೇಕ ಪೂರ್ಣಗೊಂಡಿದ್ದು, ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಇನೋವೇಟಿವ್‌ ಅನುದಾನದಡಿ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌.ಪುರ ನಡುವೆ 17 ಕಿ.ಮೀ. ಉದ್ದದ ಕಾರಿಡಾರ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೂ ಮೆಟ್ರೋ ಸಂಪರ್ಕ ಕಲಿಸುವ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ಹೇಳಿದರು.

ನಗರದ ಕೇಂದ್ರ ಭಾಗವನ್ನು ಹೊರಭಾಗದ ಹೆದ್ದಾರಿಗಳಿಗೆ ಸಂಪರ್ಕಿಸುವ ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣದ ಪ್ರಸ್ತಾವವೂ ಇದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಭಾರಿ ಮೊತ್ತದ ಅನುದಾನ ನೀಡಿದ್ದು, ಮೂಲ ಸೌಕರ್ಯ ಕಲ್ಪಿಸುವ ಕಾರ್ಯ ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ಮಾಹಿತಿ ನೀಡಿದರು.

ದೇಶದ ಮೂರನೇ ಅತಿ ದೊಡ್ಡ ವಿಮಾನನಿಲ್ದಾಣವೆಂಬ ಹೆಗ್ಗಳಿಕೆಗೆ ಪಾತ್ರವಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಎರಡನೇ ರನ್‌ ವೇ ಹಾಗೂ ಎರಡು ಟರ್ಮಿನಲ್‌ಗ‌ಳ ನಿರ್ಮಾಣ ಕಾರ್ಯ ನಡೆದಿದೆ. ಆ ಭಾಗದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸಮ್ಮೇಳನ ಕೇಂದ್ರ, ಬಿಜಿನೆಸ್‌ ಪಾರ್ಕ್‌ ಸ್ಥಾಪಿಸಲು ಪ್ರಯತ್ನ ನಡೆದಿದೆ ಎಂದರು.

ಡೈನಾಮಿಕ್‌ ಸಿಟಿ ಎಂಬ ಖ್ಯಾತಿ ನಗರಕ್ಕೆ 
ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಸಂತ ನರಸಾಪುರದಲ್ಲಿ ಮಿಷನ್‌ ಟೂಲ್‌ ಪಾರ್ಕ್‌ ನಿರ್ಮಾಣವಾಗಲಿದೆ. ಹಾಗೆಯೇ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೆರವಾಗಲು “ಕಾಮನ್‌ ಫೆಸಿಲಿಟಿ ಸೆಂಟರ್‌’ ನಿರ್ಮಾಣವಾಗಲಿದೆ.

ಹ್ಯಾವೆಲ್ಸ್‌, ಪೆಪ್ಸಿ, ಏಷಿಯನ್‌ ಪೇಂಟ್ಸ್‌, ಬಯೋಕಾನ್‌ (ಮಂಗಳೂರು, ಬೆಂಗಳೂರು), ಒರಾಕಲ್‌ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳು ರಾಜ್ಯದಲ್ಲಿ ಉದ್ಯಮ ನಡೆಸುತ್ತಿವೆ. 400ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಹೊಂದಿವೆ. ಆ ಮೂಲಕ ಬೆಂಗಳೂರು ವಿಶ್ವದ ಡೈನಾಮಿಕ್‌ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.