ಡಿಜಿಟಲ್‌ ದಂಡಕ್ಕೆ ಶುರುವಿನಲ್ಲೇ ವಿಘ್ನ


Team Udayavani, Apr 21, 2017, 12:08 PM IST

police-story-fine.jpg

ಬೆಂಗಳೂರು: ರಾಜಧಾನಿಯಲ್ಲಿ ಸಂಚಾರ ನಿಯಮ ಉಲ್ಲಂ ಸಿದವರಿಂದ ದಂಡ ಸಂಗ್ರಹಿಸಲು ಪೊಲೀಸ್‌ ಇಲಾಖೆ ಇತ್ತೀಚೆಗಷ್ಟೇ ಜಾರಿಗೆ ತಂದಿದ್ದ ಅತ್ಯಾಧುನಿಕ ಪರ್ಸನಲ್‌ ಡಿಜಿಟಲ್‌ ಅಸಿಸ್ಟೆಂಟ್‌(ಪಿಡಿಎ) ಯಂತ್ರಗಳ ಕಾರ್ಯನಿರ್ವಹಣೆ ಪ್ರಾರಂಭದಲ್ಲೇ ವಿಫ‌ಲವಾಗಿದೆ. 

ಸಂಚಾರ ನಿಯಮ ಉಲ್ಲಂ ಸಿದ ವಾಹನ ಸವಾರರಿಂದ ಪೊಲೀಸರು ಹಿಂದೆ ನಗದು ರೂಪದಲ್ಲಿ ದಂಡ ಸಂಗ್ರಹಿಸುತ್ತಿದ್ದರು. ಈ ರೀತಿ ಸಂಗ್ರಹವಾದ ಮೊತ್ತವನ್ನು ಸರ್ಕಾರದ ಖಜಾನೆಗೆ ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರು ಮೂಲಕ ಜಮೆ ಮಾಡುತ್ತಿದ್ದರು.

ನಗದು ಮೂಲಕ ದಂಡ ಸಂಗ್ರಹಿಸುವ ಪ್ರಕ್ರಿಯೆಯಲ್ಲಿ ಸಾಕಷ್ಟು ಲೋಪವಾಗುತ್ತಿದೆ ಎಂಬ ಕಾರಣಕ್ಕೆ ನಗದು ರಹಿತ ವ್ಯವಸ್ಥೆ ತರಲು ಸ್ಮಾರ್ಟ್‌ ಫೋನ್‌, ಪ್ರಿಂಟರ್‌ ಸೌಲಭ್ಯ, ಕ್ರೆಡಿಟ್‌, ಡೆಬಿಟ್‌ ಕಾರ್ಡ್‌, ಸ್ಟಿಲ್‌ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಜಿಪಿಎಸ್‌ ತಂತ್ರಜ್ಞಾನಗಳನ್ನೊಳಗೊಂಡ ಪರ್ಸನಲ್‌ ಡಿಜಿಟಲ್‌ ಅಸಿಸ್ಟೆಂಟ್‌ (ಪಿಡಿಎ) ಯಂತ್ರವನ್ನು ಇತ್ತೀಚೆಗೆ ಸಂಚಾರ ಪೊಲೀಸರಿಗೆ ವಿತರಿಸಲಾಯಿತು. 

ಆದರೆ, ಸಂಚಾರ ಪೊಲೀಸರಿಗೆ ವಿತರಿಸಿರುವ ಪಿಡಿಎ ಯಂತ್ರದಲ್ಲಿ ನಗದು ರಹಿತ ದಂಡ ಪಾವತಿಗೆ ಅವಕಾಶವಿದ್ದರೂ ಉಪಯೋಗವಾಗುತ್ತಿಲ್ಲ. ಕಾರಣ,  ಪಿಡಿಎ ಸಾಧನದೊಂದಿಗೆ ಲಿಂಕ್‌ ಆಗಿರುವ ಬ್ಯಾಂಕ್‌ ಇನ್ನೂ ಆನ್‌ಲೈನ್‌ ವ್ಯವಹಾರಕ್ಕೆ ಸಂಚಾರ ಪೊಲೀಸರಿಗೆ ಅನುಮತಿ ನೀಡಿಲ್ಲ. 

ಆನ್‌ಲೈನ್‌ ಪಾವತಿಗೆ ಅವಕಾಶ ನೀಡುವಂತೆ ಸಂಚಾರ ಪೊಲೀಸರು 2-3 ಬಾರಿ ಬ್ಯಾಂಕ್‌ ಅಧಿಕಾರಿಗಳ ಜತೆ ಪತ್ರ ವ್ಯವಹಾರವನ್ನೂ ನಡೆಸಿದ್ದಾರೆ. ಆದರೆ,  ಬ್ಯಾಂಕ್‌ ಅಧಿಕಾರಿಗಳು ಇನ್ನಷ್ಟು ಕಾಲಾವಕಾಶ ಬೇಕು ಎಂದು ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಪಿಡಿಎ ಯಂತ್ರಗಳ ಮೂಲಕ ಆನ್‌ಲೈನ್‌ನಲ್ಲಿ ದಂಡ ಸಂಗ್ರಹ ಪ್ರಕ್ರಿಯೆ ಸದ್ಯಕ್ಕೆ ನನೆಗುದಿಗೆ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ವ್ಯಾಪಕ ಪ್ರಚಾರ ಮಾಡಿದ್ದ ಪೊಲೀಸರು: ನಗರದ ಆಯ್ದ ಪ್ರದೇಶಗಳಲ್ಲಿ ಪಿಡಿಎ ಯಂತ್ರಗಳನ್ನು ಪರಿಚಯಿಸಿದ್ದ ಸಂಚಾರ ವಿಭಾಗದ ಪೊಲೀಸರು ಆ ಬಗ್ಗೆ ಪ್ರಚಾರವನ್ನೂ ಮಾಡಿದ್ದರು. ಇನ್ಮುಂದೆ  ಸಂಚಾರ ನಿಯಮ ಉಲ್ಲಂ ಸುವವರು ತಕ್ಷಣಕ್ಕೆ ನಗದು ಇಲ್ಲದೇ ಹೋದಲ್ಲಿ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ದಂಡ ಪಾವತಿಸಬಹುದು ಎಂದು ಹೇಳಿದ್ದರು.

ಆದರೆ, ಪೂರ್ವ ಸಿದ್ಧತೆ ಸಮಸ್ಯೆ ಯಿಂದಾಗಿ ಪಿಡಿಎ ಯಂತ್ರದ ಮೂಲಕ ದಂಡ ಸ್ವೀಕಾರ ಸಾಧ್ಯವಾಗುತ್ತಿಲ್ಲ. ಇದು ಕೆಲವೆಡೆ ಸಂಚಾರ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟಕ್ಕೂ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. 

ಜಗಳಕ್ಕೇ ಬರುತ್ತಿದ್ದಾರೆ ಜನ: ಅತ್ಯಾಧುನಿಕ ತಂತ್ರಜ್ಞಾನದ ಪರ್ಸನಲ್‌ ಡಿಜಿಟಲ್‌ ಅಸಿಸ್ಟೆಂಟ್‌(ಪಿಡಿಎ)ನಲ್ಲಿ ಎಲ್ಲ ರೀತಿಯ ತಂತ್ರಜ್ಞಾನವಿದೆ. ಕಾರ್ಡ್‌ಗಳ ಬಳಕೆಗೆ ಅವಕಾಶವಿದ್ದರೂ ಸದ್ಯಕ್ಕೆ ಬಳಸಲಾಗುತ್ತಿಲ್ಲ. ಇದರಿಂದ ವಾಹನ ಸವಾರರು ನಮ್ಮೊಂದಿಗೆ ಜಗಳಕ್ಕಿಳಿಯುತ್ತಿದ್ದಾರೆ. ಕಾರ್ಡ್‌ ಗಳ ಸ್ವೆ„ಪಿಂಗ್‌ಗೆ ಅವಕಾಶವಿದ್ದರೂ ಏಕೆ ಉಪಯೋಗಿಸುತ್ತಿಲ್ಲ ಎಂದು ಮರು ಪ್ರಶ್ನೆ ಕೇಳುತ್ತಾರೆ.

ಸಮಸ್ಯೆ ವಿವರಿಸಿದರೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಪೊಲೀಸ್‌ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಸಂಚಾರ ಪೊಲೀಸರಿಗೆ ವಿತರಿಸಿರುವ ಪಿಡಿಎ ಯಂತ್ರದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಮೂಲಕ ದಂಡ ಸಂಗ್ರಹ ಸಾಧ್ಯವಾಗುತ್ತಿಲ್ಲ. 10-15 ದಿನಗಳಲ್ಲಿ ಎಲ್ಲವೂ ಬಗಹರಿಯಲಿದೆ.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.