ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸದೊಂದು ತಿರುವು


Team Udayavani, Sep 14, 2017, 1:09 PM IST

14-BAN-3.jpg

ಬೆಂಗಳೂರು: ಬಾಗಲಗುಂಟೆ ಠಾಣೆ ವ್ಯಾಪ್ತಿಯ ಟಿ.ದಾಸರಹಳ್ಳಿಯ ಖಾಸಗಿ ಶಾಲೆ ಯೊಂದರ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಹೊಸ ತಿರುವು ಪಡೆದಿದೆ.

ಶಾಲೆಯ ಸಿಸಿಟಿವಿ ದೃಶ್ಯಗಳ ಪ್ರಕಾರ ಬಾಲಕಿ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಆದರೆ, ಬಾಲಕಿ ಗೊಂದ ಲದ ಹೇಳಿಕೆ ನೀಡುತ್ತಿದ್ದು, ಗಾಬರಿಗೊಂಡಿ ರುವ ಸಾಧ್ಯತೆಯಿದೆ. ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಕೌನ್ಸಿಲಿಂಗ್‌ ನಡೆಸಿ ಆಕೆಯಿಂದ ಘಟನೆಯ ಸತ್ಯಾಂಶ ತಿಳಿಯ ಬೇಕಿದೆ ಎಂದು ಡಿಸಿಪಿ ಚೇತನ್‌ ಕುಮಾರ್‌ ರಾಥೋಡ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಿ.ದಾಸರಹಳ್ಳಿಯಲ್ಲಿನ ಬಾಲಕಿ, ಮನೆ ಸಮೀಪದ ಖಾಸಗಿ ಶಾಲೆಯಲ್ಲಿ ಎಲ್‌ಕೆಜೆ ವ್ಯಾಸಂಗ ಮಾಡುತ್ತಿದ್ದು, ಬೆಳಗ್ಗೆ 10 ಗಂಟೆಗೆ ಶಾಲೆಗೆ ಹೋಗಿ ಮಧ್ಯಾಹ್ನ 2 ಗಂಟೆಗೆ ಮನೆಗೆ ಮರಳುತ್ತಿದ್ದಳು. ಮಂಗಳವಾರ ಮನೆಗೆ ಬಂದ ಬಾಲಕಿ ಐದಾರು ಬಾರಿ ವಾಂತಿ ಮಾಡಿ ದ್ದಾಳೆ. ಗಾಬರಿಗೊಂಡ ಪೋಷಕರು ವಿಚಾರಿಸಿ ದಾಗ “ಸೆಕ್ಯೂರಿಟಿ ಗಾರ್ಡ್‌ ಅಂಕಲ್‌ ಮೈ, ಕೈ ಮುಟ್ಟಿ, ಬಾತ್‌ರೂಮ್‌ನಲ್ಲಿ ಪ್ಯಾಂಟ್‌
ಬಿಚ್ಚಿದರು’ ಎಂದು ಹೇಳಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು, ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯದ ಬಗ್ಗೆ ಶಂಕಿಸಿದ್ದಾರೆ. ಬಳಿಕ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದು, ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಧು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಯಾವು ದಕ್ಕೂ ಒಮ್ಮೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ. ಅದರಂತೆ ಪೋಷಕರು
ದೂರು ನೀಡಿದ್ದರು. ತಕ್ಷಣ ಬಾಲಕಿ ಹೇಳಿಕೆ ಪಡೆದ ಪೊಲೀಸರು, ಶಾಲೆಯ ಐವರು ಸೆಕ್ಯೂರಿಟಿ ಗಾರ್ಡ್‌ಗಳನ್ನು ವಿಚಾರಣೆ ಒಳ ಪಡಿಸಿದ್ದಾರೆ. ಬುಧವಾರ ಬೆಳಗ್ಗೆ ಮತ್ತೂಮ್ಮೆ ಬಾಲಕಿಯ ಹೇಳಿಕೆ ದಾಖಲಿಸಿಕೊಂಡು, ಆರೋಪಿಗಳನ್ನು ಪತ್ತೆ ಹಚ್ಚಲು ಸೂಚಿಸಿದಾಗ ಬಾಲಕಿ ಸ್ಪಷ್ಟವಾಗಿ ಗುರುತಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಮ್ಮೆ ವಿಚಾರಣೆ: ಘಟನೆಯಿಂದ ಆತಂಕಗೊಂಡಿರುವ ಬಾಲಕಿ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯತ್ತಿದ್ದಾಳೆ. ಆಕೆ ಚೇತರಿಸಿಕೊಂಡ ಬಳಿಕ ಕೌನ್ಸೆಲಿಂಗ್‌ ನಡೆಸಿ ಸತ್ಯಾಂಶ ತಿಳಿಯಬೇಕಿದೆ. ಅದುವರೆಗೂ ಐವರು ಸೆಕ್ಯೂರಿಟಿ ಗಾರ್ಡ್‌ಗಳಿಗೆ ಎಲ್ಲಿಗೂ ಹೋಗದ್ದಂತೆ ಸೂಚಿಸಲಾಗಿದೆ.

ಪೋಷಕರ ಪ್ರತಿಭಟನೆ: ಶಾಲೆಯಲ್ಲಿ ಅಪ್ರಾಪೆ¤ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಇತರೆ ಮಕ್ಕಳ ಪೋಷಕರು ಶಾಲೆಯ
ಮುಂದೆ ಪ್ರತಿಭಟನೆ ನಡೆಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪೋಷಕರಿಗೆ ವಸ್ತು ಸ್ಥಿತಿ ವಿವರಿಸಿ, ಸಂತ್ರಸ್ತೆಯ ಪೋಷಕರು ಮತ್ತು ಪ್ರತಿಭಟನಾಕಾರರಿಗೆ ಸಿಸಿಟಿವಿ ದೃಶ್ಯಾವಳಿ ತೋರಿಸಿದ್ದು, ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ. ಶಾಲೆಯಲ್ಲಿ ಮಗು ಊಟ ಮಾಡಿದ ಬಳಿಕ ಕೊಠಡಿಯ ಟೆಬಲ್‌ ಗೆ ತಲೆ ಕೊಟ್ಟು ಮಲಗಿದೆ. ಇದಾದ ಒಂದು ಗಂಟೆ ಬಳಿಕ ಅಲ್ಲಿಯೇ ವಾಂತಿ ಮಾಡಿದೆ. ಆದರೆ, ಎಲ್ಲಿಯೂ ಮಗುವನ್ನು ಯಾರೂ ಮುಟ್ಟಿ ರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡು ಬಂದಿಲ್ಲ. 

ಮಗಳಿಗೆ ಮಾಹಿತಿ ನೀಡಿದ್ದರಾ ಪೋಷಕರು?
ಇತ್ತೀಚೆಗೆ ಹರಿಯಾಣದ ಗುರುಗ್ರಾಮದ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅಲ್ಲಿನ ಸಿಬ್ಬಂದಿ ಕೊಂದಿದ್ದರು. ಕಳೆದ ಎರಡು ದಿನಗಳಿಂದ ಈ ಘಟನೆ ಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಇದನ್ನು ಕಂಡ ತಾಯಿ, ತನ್ನ ಮಗಳಿಗೆ ಆ ಶಾಲೆಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಯಾವುದು? ಪುರುಷರು ಎಲ್ಲಿ ಸ್ಪರ್ಶಿಸಿದರೆ ಏನಾಗುತ್ತದೆ ಎಂದೆಲ್ಲ ತಿಳಿ ಹೇಳಿರಬೇಕು. ಇದನ್ನೇ ಸಂತ್ರಸ್ತೆ ಅಂದು ಶಾಲೆಯಿಂದ ಬಂದಾಗ ಹೇಳಿರುವ ಸಾಧ್ಯತೆಯಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮಗುವಿನ ಹೇಳಿಕೆಯೇ ಅಂತಿಮ. ಆಕೆಯ ನೀಡುವ ಹೇಳಿಕೆ ಮೇಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.