ಬೆಂಗಳೂರು:ಹಲ್ಲೆಗೆ ಮುಂದಾದ ಕಳ್ಳರಿಬ್ಬರ ಕಾಲಿಗೆ ಪೊಲೀಸ್ ಗುಂಡು
Team Udayavani, Sep 22, 2017, 12:01 PM IST
ಬೆಂಗಳೂರು: ಕಳ್ಳತನಕ್ಕೆ ಯತ್ನಿಸುತ್ತಿದ್ದ ಕಳ್ಳರು ಹಲ್ಲೆಗೆ ಮುಂದಾದಾಗ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಖಚಿತ ಮಾಹಿತಿಯ ಮೇರಗೆ ವಿದ್ಯಾರಣ್ಯಪುರ ಪೊಲೀಸರು ಇನ್ಸ್ಪೆಕ್ಟರ್ ಪುನೀತ್, ವಿದ್ಯಾರಣ್ಯಪುರ ಎಸ್ಐ ಅಣ್ಣಯ್ಯ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದಿದ್ದು ಈ ವೇಳೆ ಮೂವರು ಕಳ್ಳರು ಶೆಟರ್ ಮುರಿದು ಕಳ್ಳತನ ನಡೆಸುತ್ತಿದ್ದರು. ಬಂಧಿಸಲು ಮುಂದಾದಾಗ ಅಣ್ಣಯ್ಯ ಮೇಲೆ ಇರಿಯಲು ಮುಂದಾಗಿದ್ದಾರೆ. ಕೂಡಲೇ ಆತ್ಮರಕ್ಷಣೆಗೆ ಕಳ್ಳರಿಬ್ಬರ ಕಾಲಿಗೆ ಗುರಿಯಾಗಿ ಗುಂಡು ಹಾರಿಸಿದ್ದಾರೆ. ಇನ್ನೋರ್ವನನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.
ಗುಂಡೇಟು ತಿಂದ ಖದೀಮ ಕಳ್ಳರು ನಾರಾಯಣ ಸ್ವಾಮಿ, ಅಶೋಕ್ ಎನ್ನುವವರಾಗಿದ್ದು ಇನ್ನೋರ್ವ ಬಂಧಿತ ಸುಧಾಕರ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಹೇಳಿದರೂ ಬಗ್ಗದಿದ್ದಾಗ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪಶ್ಚಿವ ವಲಯ ಡಿಸಿಪಿ ಶಿವಕುಮಾರ್ ತಿಳಿಸಿದ್ದಾರೆ.
ಮೂವರ ವಿರುದ್ಧ ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಗಾಯಗೊಂಡಿರುವ ಕಳ್ಳರಿಬ್ಬರಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ