50 ಲಕ್ಷ ರೂ ಲೂಟಿಗೈದ ದರೋಡೆಕೋರನ ಕಾಲಿಗೆ ಪೊಲೀಸ್ ಗುಂಡು
Team Udayavani, Dec 9, 2018, 10:30 AM IST
ಬೆಂಗಳೂರು: ನಗರದಲ್ಲಿ ಪೊಲೀಸರು ಮತ್ತೆ ರೌಡಿ ಶೀಟರ್ ವೊಬ್ಬನ ಕಾಲಿಗೆ ಗುಂಡು ಹಾರಿಸಿದ್ದು, ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಭಾನುವಾರ ಬೆಳಗ್ಗೆ 7 ಗಂಟೆ ವೇಳೆಗೆ ರಾಜೇಶ್ ಮುಕುಂದೇಗೌಡ ಎಂಬ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
50 ಲಕ್ಷ ರೂ ದರೋಡೆ ಮಾಡಿದ ಆರೋಪಿಗಳಾಗಿದ್ದ ರಾಜೇಶ್, ನಂದಕುಮಾರ್ ಮತ್ತು ಬಸವರಾಜ್ರನ್ನು ಸೆರೆ ಹಿಡಿಯಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾಗಿದ್ದಾನೆ.
ಮಹೇಶ್ ಎಂಬ ಪೇದೆಯ ಮೇಲೆ ಹಲ್ಲೆ ನಡೆಯುತ್ತಿದ್ದಂತೆ ಇನ್ಸ್ಪೆಕ್ಟರ್ ಬಿ.ಸಿ.ರಾಜಶೇಖರಯ್ಯ ಅವರು ಗುಂಡು ಹಾರಿಸಿದ್ದಾರೆ. ಗುಂಡು ರಾಜೇಶ್ ಕಾಲಿಗೆ ತಗುಲಿ ಸ್ಥಳದಲ್ಲೇ ಕುಸಿದಿದ್ದಾನೆ.
ತಕ್ಷಣ ಆತನನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಕುಮಾರ್ ಮತ್ತು ಬಸವರಾಜ್ರನ್ನು ಬಂಧಿಸಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ