ಕನ್ನಡ ಬಂದರೂ ಮಾತಾಡಲ್ಲ
Team Udayavani, Oct 30, 2017, 11:42 AM IST
ಬೆಂಗಳೂರು: “ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವ ಶೇ. 95ರಷ್ಟು ಸಾಹಿತ್ಯಾಸಕ್ತರಿಗೆ ಕನ್ನಡ ಬಂದರೂ ಮಾತನಾಡುತ್ತಿಲ್ಲ’ ಎಂದು ಬೊಳುವಾರು ಮಹಮ್ಮದ್ ಕುಂಞ ಬೇಸರ ವ್ಯಕ್ತಪಡಿಸಿದರು.
ಲಲಿತ್ ಅಶೋಕ್ ಹೋಟೆಲ್ನಲ್ಲಿ ಹಮ್ಮಿಕೊಂಡ ಎರಡು ದಿನಗಳ ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾನುವಾರ ನಗರದ ಪುಸ್ತಕ ಅಂಗಡಿಯೊಂದು ನೀಡುವ “ಆಟಾ ಗಲಾಟಾ-ಬೆಂಗಳೂರು ಸಾಹಿತ್ಯ ಉತ್ಸವ ಪುಸ್ತಕ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.
ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವ ಶೇ. 95ರಷ್ಟು ಸಾಹಿತ್ಯಾಸಕ್ತರಿಗೆ ಕನ್ನಡ ಬರುತ್ತದೆ. ಆದರೆ, ಯಾರೂ ಮಾತನಾಡುವುದಿಲ್ಲ. ಇದು ನನ್ನ ಆರೋಪ ಮಾಡುತ್ತಿಲ್ಲ. ನನ್ನ ಮೊಮ್ಮಗನೂ ಸೇರಿದಂತೆ ಕನ್ನಡ ಮಾತನಾಡಬೇಕು ಎಂದು ಹೇಳುತ್ತಿದ್ದೇನೆ. ಕನ್ನಡವನ್ನು ಮತ್ತಷ್ಟು ಚೆಂದಗೊಳಿಸಬೇಕು ಎಂದು ಮನವಿ ಮಾಡಿದರು.
ಅದೇ ರೀತಿ, ಸಾಹಿತ್ಯ ಉತ್ಸವ ಅತ್ಯುತ್ತಮವಾಗಿ ಆಯೋಜನೆ ಮಾಡಲಾಗಿದೆ. ಆದರೆ, ಪಂಚತಾರಾ ಹೋಟೆಲ್ನಲ್ಲಿ ಇದನ್ನು ಆಯೋಜಿಸಿರುವುದರಿಂದ ಬಡ ಕನ್ನಡಿಗರಿಗೆ ಇಲ್ಲಿ ಭಾಗವಹಿಸಲು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಪಂಚತಾರಾ ಹೋಟೆಲ್ ಹೊರತುಪಡಿಸಿ, ಸಾಮಾನ್ಯರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದಾದ ಸ್ಥಳಗಳಲ್ಲಿ ಏರ್ಪಡಿಸಬೇಕು ಎಂದು ಕೋರಿದರು.
ಇನ್ನು ಕನ್ನಡ ಪತ್ರಿಕೆಗಳಲ್ಲಿ ಕನ್ನಡ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರಚಾರ ಸಿಗುತ್ತಿದೆ. ಆದರೆ, ವಿಮರ್ಶೆಗೆ ಜಾಗ ಇಲ್ಲವಾಗಿದೆ. ಮೊದಲು ಪ್ರತಿ ವಾರ ವಿಮರ್ಶೆಗೆ ಜಾಗ ಮೀಸಲಿರುತ್ತಿತ್ತು. ಅದೇ ರೀತಿ, ಮುಂದಿನ ದಿನಗಳಲ್ಲೂ ವಾರಕ್ಕೊಮ್ಮೆ ಅರ್ಧಪುಟವಾದರೂ ಕತೆ, ಕವನ ಮತ್ತಿತರ ವಿಮರ್ಶೆಗೆ ಜಾಗ ಮೀಸಲಿಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಬಾಲಿವುಡ್ ನಟಿ ಟ್ವಿಂಕಲ್ ಖನ್ನಾ, ಅನೀಸ್ ಸಲೀಂ ಅವರಿಗೂ ಪ್ರಶಸಿ ಪ್ರದಾನ ಮಾಡಲಾಯಿತು.
ಜಿರಳೆಯಷ್ಟೂ ಸುದ್ದಿ ಮಾಡ್ತಿಲ್ಲ; ಬೇಸರ
ಇಂದಿರಾ ಕ್ಯಾಂಟೀನ್ನಲ್ಲಿಯ ಪ್ಲೇಟ್ನಲ್ಲಿ ಬಿದ್ದ ಜಿರಳೆ ಮಾಡುವಷ್ಟು ಸುದ್ದಿಯನ್ನೂ ಕನ್ನಡ ಸಾಹಿತ್ಯ ಮಾಡುತ್ತಿಲ್ಲ ಎಂದು ಬೊಳುವಾರು ಮಹಮ್ಮದ್ ಕುಂಞ ಬೇಸರ ವ್ಯಕ್ತಪಡಿಸಿದರು. ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠಗಳು, ಹೆಚ್ಚು ಸಾಹಿತ್ಯದ ಕಾರ್ಯಕ್ರಮಗಳು, ಅತಿ ಹೆಚ್ಚು ಕನ್ನಡ ಪುಸ್ತಕಗಳು ಪ್ರಕಟವಾಗಲು ಕನ್ನಡ ಪತ್ರಿಕೆಗಳ ಸಹಕಾರವೇ ಕಾರಣ. ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿದೆ. ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಪ್ರಚಾರ ಅವಶ್ಯಕತೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ