ಇಂದಿರಾ ಕ್ಯಾಂಟೀನ್ ಗಳಿಗೆ ಉದ್ಘಾಟನೆಯ ಭಾಗ್ಯವಿಲ್ಲ
Team Udayavani, Nov 2, 2017, 4:23 PM IST
ಬೆಂಗಳೂರು: ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳು ಕಳೆದಿದೆ. ಆದರೆ, ಜನ ಪ್ರತಿನಿಧಿಗಳ ದಿನಾಂಕ ದೊರೆಯದ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ಗಳಿಗೆ ಉದ್ಘಾಟನೆ ಭಾಗ್ಯದೊರಕಿಲ್ಲ.
ನಗರದ ಬಡವರು ಹಾಗೂ ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ತಿಂಡಿ ಒದಗಿಸಲು ಆರಂಭಿಸಿರುವ ಇಂದಿರಾ ಕ್ಯಾಂಟಿನ್ ಎಲ್ಲ 198 ವಾರ್ಡ್ಗಳಲ್ಲಿ ಆರಂಭಿಸಲು ಮುಖ್ಯಮಂತ್ರಿಗಳು ನೀಡಿದ್ದ ಗಡವು ಮುಗಿದಿದೆ. ಈಗಾಗಲೇ 151 ಕಡೆಗಳಲ್ಲಿ ಕ್ಯಾಂಟೀನ್ಗಳು ಉದ್ಘಾಟನೆಗೆ ಸಿದ್ಧವಾಗಿವೆ. ಆದರೆ, ಸಚಿವರು ಹಾಗೂ ಶಾಸಕ ದಿನಾಂಕಗಳು ದೊರೆಯದ ಹಿನ್ನೆಲೆಯಲ್ಲಿ ಕ್ಯಾಂಟೀನ್ಗಳಲ್ಲಿ ಆಹಾರ ವಿತರಣೆ ಆರಂಭವಾಗಿಲ್ಲ.
ನ.1ರಂದು ಎಲ್ಲ 198 ವಾರ್ಡ್ಗಳಲ್ಲಿ ಕ್ಯಾಂಟೀನ್ಗಳು ಕಾರ್ಯನಿರ್ವಹಿಸಲಿವೆ ಎಂಬ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದರಾದರೂ, ಈವರೆಗೆ 198 ವಾಡ್ ìಗಳಲ್ಲಿ ಕ್ಯಾಂಟೀನ್ಗಳು ಆರಂಭವಾಗಿಲ್ಲ. ಈಗಾಗಲೇ ನಗರದಲ್ಲಿ 151 ಕ್ಯಾಂಟೀನ್ಗಳು ಪೂರ್ಣಗೊಂಡಿದ್ದು, 128 ಕ್ಯಾಂಟೀನ್ಗಳಲ್ಲಿ ಮಾತ್ರ ಆಹಾರ ವಿತರಣೆಯಾಗುತ್ತಿದೆ.
ಆಹಾರ ವಾಪಸ್: ಬಿಬಿಎಂಪಿ ಅಧಿಕಾರಿಗಳು ಉದ್ಘಾಟನೆಯಾಗದಿದ್ದರೂ ಆಹಾರ ವಿತರಣೆ ಆರಂಭಿಸುವಂತೆ ಸ್ಥಳ ಜನಪ್ರತಿನಿಧಿಗಳನ್ನು ಕೋರಿದ್ದಾರೆ. ಇದರೊಂದಿಗೆ ಕೆಲವು ಕಡೆಗಳಿಗೆ ಆಹಾರವನ್ನು ಪೂರೈಕೆ ಮಾಡಿದರೂ ಅಲ್ಲಿನ ಸ್ಥಳೀಯ ನಾಯಕರು ತಮ್ಮ ಪ್ರತಿನಿಧಿಗಳಿಂದ ಕ್ಯಾಂಟೀನ್ಗಳನ್ನು ಉದ್ಘಾಟಿಸಬೇಕು ಎಂಬ ಕಾರಣದಿಂದ ಪೂರೈಕೆಯಾದ ಆಹಾರವನ್ನು ವಾಪಸ್ ಕಳುಹಿಸಿದ ಘಟನೆಗಳು ನಡೆದಿವೆ.
ಕಾಮಗಾರಿ ಅಪೂರ್ಣ: ಬಿಬಿಎಂಪಿ 198 ವಾರ್ಡ್ಗಳ ಪೈಕಿ 151 ಕಡೆಗಳಲ್ಲಿ ಈಗಾಗಲೇ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿವೆ. 30 ವಾರ್ಡ್ಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, 17 ಕಡೆಗಳಲ್ಲಿ ಈವರೆಗೆ ಕ್ಯಾಂಟೀನ್ ನಿರ್ಮಾಣಕ್ಕೆ ಜಾಗ ಸಿಕ್ಕಲ್ಲ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಎರಡು ಬಾರಿ ಗಡುವು ನೀಡಿದರೂ ಈವರೆಗೆ 198 ವಾರ್ಡ್ಗಳಲ್ಲಿ ಕ್ಯಾಂಟೀನ್ ಆರಂಭವಾಗಿಲ್ಲ.
ಖಾಸಗಿ ಜಾಗ ಪಡೆಯಲು ಸಿದ್ಧತೆ: ಕ್ಯಾಂಟೀನ್ ನಿರ್ಮಾಣಕ್ಕೆ ಕೆಲವೊಂದು ವಾರ್ಡ್ಗಳಲ್ಲಿ ಜಾಗ ದೊರೆಯದ ಹಿನ್ನೆಲೆಯಲ್ಲಿ ಈಗಾಗಲೇ ಬೆಸ್ಕಾಂ, ಆರೋಗ್ಯ, ಶಿಕ್ಷಣ, ಸಾರಿಗೆ, ಜಲಮಂಡಳಿ, ಬಿಡಿಎ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಿಂದ ಜಾಗ ಪಡೆಯಲಾಗಿದೆ. ಆ ನಡುವೆಯೂ ಜಾಗ ದೊರೆಯದ ಹಿನ್ನೆಲೆಯಲ್ಲಿ ಕೆಲವೊಂದು ಕಡೆಗಳಲ್ಲಿ ಖಾಸಗಿ ಜಾಗವನ್ನು ಪಡೆಯಲು ತೀರ್ಮಾನಿಸಲಾಗಿದೆ.
ರಾಜ್ಯೋತ್ಸವಕ್ಕೆ ಹಲವು ಕ್ಯಾಂಟೀನ್ಗಳು ಉದ್ಘಾಟನೆ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ಕಾಮಗಾರಿ ಪೂರ್ಣ ಗೊಂಡಿರುವ ಹಲವು ವಾರ್ಡ್ಗಳಲ್ಲಿನ ಇಂದಿರಾ ಕ್ಯಾಂಟೀನ್ಗಳನ್ನು ಸಚಿವರು ಹಾಗೂ ಶಾಸಕರು ಬುಧವಾರ ಉದ್ಘಾಟಿಸಿದರು. ಶಂಕರಾಂಬರಿನಗರ, ಸುಧಾಮನಗರ, ಕಾಮಾಕ್ಷಿನಗರ, ಮಾರುತಿ ಸೇವಾ
ನಗರ, ಅರಮನೆ ನಗರ, ಕೋನೆನ ಅಗ್ರಹಾರ ಸೇರಿದಂತೆ ಹಲವು ವಾರ್ಡ್ಗಳಲ್ಲಿ ಇಂದಿರಾ ಕ್ಯಾಂಟೀನ್ಗಳು ಉದ್ಘಾಟನೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್