ಗೆಳೆಯನನ್ನೇ ಕೊಂದ ಆರೋಪಿ ಬಂಧನ


Team Udayavani, Nov 9, 2017, 11:27 AM IST

arrested.jpg

ಬೆಂಗಳೂರು: ಹಣಕಾಸು ವಿಚಾರದಲ್ಲಿ ಭಾವಿ ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನನ್ನು ಆಲೋಬ್ಲಾಕ್‌ ಇಟ್ಟಿಗೆ ಎತ್ತಿಹಾಕಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ರಾಯಚೂರಿನ ಸಿಂಧನೂರಿನಲ್ಲಿ ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸವಲಿಂಗ (21) ಬಂಧಿತ. ಮೃತ ಗುಂಡನಗೌಡ ಮತ್ತು ಆರೋಪಿ
ಬಸವಲಿಂಗ ಬಾಲ್ಯ ಸ್ನೇಹಿತರಾಗಿದ್ದು, ಅ.12ರಂದು ಸುಂಕದಕಟ್ಟೆ ಬಳಿಯ ಬಾರ್‌ ವೊಂದರಲ್ಲಿ ಇಬ್ಬರು ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಈ ವೇಳೆ ತಾನು ಸಾಲವಾಗಿ ಕೊಟ್ಟಿದ್ದ 20 ಸಾವಿರ ರೂ. ವಾಪಸ್‌ ಕೊಡುವಂತೆ ಗುಂಡನಗೌಡ ಆರೋಪಿಗೆ ಒತ್ತಾಯಿಸಿದ. ಇದಕ್ಕೆ ಒಪ್ಪದಿದ್ದರೆ ನಿನ್ನ ಭಾವಿ ಪತ್ನಿಯನ್ನು ಒಂದು ದಿನದ ಮಟ್ಟಿಗೆ ನನ್ನೊಂದಿಗೆ ಕಳುಹಿಸಿಕೊಡುವಂತೆ ಬೇಡಿಕೆ ಇಟ್ಟಿದ್ದ. ಇದರಿಂದ ಆಕ್ರೋಶಗೊಂಡ ಆರೋಪಿ ಆಲೋಬ್ಲಾಕ್‌ ಇಟ್ಟಿಗೆ ಎತ್ತಿಹಾಕಿ ಕೊಲೆಗೈದಿದ್ದಾನೆ ಎಂದು ಪೊಲೀಸರು
ತಿಳಿಸಿದ್ದಾರೆ.

ಭಾವಿ ಪತ್ನಿಯ ಜತೆ ಮೊದಲ ರಾತ್ರಿಗೆ ಬೇಡಿಕೆ: ಅ.12ರಂದು ಬಾರ್‌ವೊಂದರಲ್ಲಿ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಗುಂಡನಗೌಡ ಹಣ ವಾಪಸ್‌ ಕೊಡುವಂತೆ ಒತ್ತಾಯಿಸಿದ್ದಾನೆ. ಹಣ ಕೊಡಲು ನಿರಾಕರಿಸಿದ ಆರೋಪಿ, ಮದುವೆಯ ನಂತರ ಕೊಡುತ್ತೇನೆ ಎಂದಿದ್ದ. ನಂತರ ಬಾರ್‌ನಿಂದ ಇಬ್ಬರು ಹೊರ ಬಂದಿದ್ದಾರೆ.

ಆಗ ಗುಂಡನಗೌಡ ಒಂದು ಒಪ್ಪಂದ ಮಾಡಿಕೊಳ್ಳೋಣ, “ನೀನು ಮದುವೆಯಾದ ನಂತರ ನಿನ್ನ ಪತ್ನಿಯೊಂದಿಗೆ ನಾನು ಮೊದಲ ರಾತ್ರಿ ಮುಗಿಸುತ್ತೇನೆ. ಆಗ ನೀನು ನನಗೆ ಹಣ ಕೊಡುವ ಅಗತ್ಯವಿಲ್ಲ. ಅಲ್ಲಿಗೆ ಎಲ್ಲವೂ ಮುಕ್ತಾಯವಾಗುತ್ತದೆ’ ಎಂದಿದ್ದ.

ಇದರಿಂದ ಕೋಪಗೊಂಡ ಬಸವಲಿಂಗ ಸುಂಕದಕಟ್ಟೆ ಪಾರ್ಕ್‌ ಬಳಿ ಹೋಗುತ್ತಿದ್ದಂತೆ ಗುಂಡನಗೌಡ ಮದ್ಯದ ಅಮಲಿನಲ್ಲಿ ನಿದ್ರೆಗೆ ಜಾರಿದ್ದಾನೆ. ಇದೇ ವೇಳೆ ಅಲ್ಲೇ ಇದ್ದ ಆಲೋಬ್ಲಾಕ್‌ ಇಟ್ಟಿಗೆಯನ್ನು ಗುಂಡನ ಗೌಡನ ಮೇಲೆ ಎತ್ತಿಹಾಕಿ ಕೊಲೆಗೈದಿದ್ದ. 

ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ: ಕೊಲೆ ನಡೆದ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿತ್ತು. ಅಲ್ಲದೆ ಮೃತನ ಭಾವನಿಗೆ ಈ ದೃಶ್ಯಾವಳಿಗಳನ್ನು ತೋರಿಸಿದಾಗ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದು, ಈತ ತನ್ನ ಭಾಮೈದುನನ ಆಪ್ತ ಸ್ನೇಹಿತ ಬಸವಲಿಂಗ ಎಂದಿದ್ದರು. ಬಳಿಕ ಬಸವಲಿಂಗನ ಬೆನ್ನು ಬಿದ್ದ ಪೊಲೀಸರಿಗೆ ಆರೋಪಿ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌ ಆರ್‌.ಜಿ.ರವಿಕುಮಾರ್‌, ಎಸ್‌ಐ ವಿ.ಕಿರಣ್‌ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾಯಚೂರಿನ ಸಿಂಧನೂರು ಬಸ್‌ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.