ಗಾಂಜಾ, ಚರಸ್‌ ಮಾರುತ್ತಿದ್ದ ನೆರೆರಾಜ್ಯಗಳ ಏಳು ಮಂದಿ ಬಂಧನ


Team Udayavani, Nov 15, 2017, 11:36 AM IST

ganja-charas.jpg

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಚರಸ್‌ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ನೆರೆರಾಜ್ಯಗಳ ಏಳು ಮಂದಿಯನ್ನು ಆಗ್ನೇಯ ವಿಭಾಗದ ಮೈಕೋ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ರಾಹುಲ್‌ ಕುಮಾರ್‌(24), ರಾಮ್‌ದೀನ್‌ ಜಾಧವ್‌(26), ಶ್ಯಾಮ್‌ ಕುಮಾರ್‌ ಯಾದವ್‌(21),  ಉತ್ತರ ಪ್ರದೇಶದ ದಾನೇಶ್‌(23), ಶಬ್ಬು(23) ಹಾಗೂ ಕೇರಳ ಮೂಲದ ಮೊಹಮ್ಮದ್‌ ಅಶ್ರಫ್ (25), ರಾಜೇಶ್‌(24) ಬಂಧಿತರು. ಆರೋಪಿಗಳಿಂದ 22 ಕೆ.ಜಿ.ಗಾಂಜಾ ಹಾಗೂ 100 ಗ್ರಾಂ ಚರಸ್‌ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಹಾರ ಮತ್ತು ಉತ್ತರಪ್ರದೇಶ ಮೂಲದ ಆರೋಪಿಗಳು ಎಚ್‌ಎಸ್‌ಆರ್‌ ಲೇಔಟ್‌ ಮತ್ತು ಮಾರತ್‌ಹಳ್ಳಿ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದು, ಪೇಟಿಂಗ್‌, ಕಾರು ಚಾಲನೆ ಹಾಗೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಇದರ ಜತೆಗೆ ರಾಹುಲ್‌ ಕುಮಾರ್‌ ಸಿಂಗಸಂದ್ರದ ದಿಲೀಪ್‌ ಎಂಬಾತನ ಮೂಲಕ ಬಿಹಾರದಿಂದ ರೈಲಿನಲ್ಲಿ ಗಾಂಜಾವನ್ನು ತರಿಸುತ್ತಿದ್ದ.

ನಂತರ ಇದನ್ನು 10, 50 ಮತ್ತು 100 ಗ್ರಾಂ ತೂಕದಲ್ಲಿ ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನು ಮಾಡಿ ಪರಿಚಯಸ್ಥರು, ತಮ್ಮ ರಾಜ್ಯದ ಬೀಡಾ ಸ್ಟಾಲ್‌ಗ‌ಳಲ್ಲಿ ಮಾರಾಟ ಮಾಡಿಸುತ್ತಿದ್ದರು. ಸ್ಟಾಲ್‌ಗ‌ಳಿಗೆ ಕಮಿಷನ್‌ ನೀಡುತ್ತಿದ್ದರು. ಜೊತೆಗೆ ವಿದ್ಯಾರ್ಥಿಗಳಿಗೂ ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಮತ್ತೂಂದು ಪ್ರಕರಣದಲ್ಲಿ ಬಂಧಿತರಾಗಿರುವ ಕೇರಳದ ಕಣ್ಣೂರು ಮೂಲದ ಆರೋಪಿಗಳಾದ ಮೊಹಮ್ಮದ್‌ ಅಶ್ರಫ್ ಮತ್ತು ರಾಜೇಶ್‌ ಬಾಬುಸಾಬ್‌ ಪಾಳ್ಯದಲ್ಲಿ ನಲೆಸಿದ್ದು, ಕಾರು ಚಾಲನೆ ಹಾಗೂ ಇತರೆ ಕೆಲಸ ಮಾಡಿಕೊಂಡಿದ್ದಾರೆ. ಈ ಪೈಕಿ ರಾಜೇಶ್‌ ತನಗೆ ಪರಿಚಯವಿರುವ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದ ವ್ಯಕ್ತಿಯಿಂದ ಗಾಂಜಾ ಮತ್ತು ಚರಸ್‌ ಅನ್ನು ನಗರಕ್ಕೆ ತರಿಸುತ್ತಿದ್ದ.

ಬಳಿಕ ಅಶ್ರಪ್‌ ಮನೆಯಲ್ಲಿ ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ಕೇರಳ ಮೂಲದ ವಿದ್ಯಾರ್ಥಿಗಳು ಹಾಗೂ ಸಾಫ್ಟ್ವೇರ್‌ ಎಂಜಿನಿಯರ್‌ಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದರು. ಅಲ್ಲದೇ ಸಾರ್ವಜನಿಕವಾಗಿ ಪಾರ್ಕ್‌, ಬಸ್‌ ನಿಲ್ದಾಣ ಇತರೆಡೆ ಮಾದಕ ವಸ್ತು ವ್ಯಸನಿಗಳನ್ನು ಪತ್ತೆಹಚ್ಚಿ ಅವರಿಗೆ ಮಾರುತ್ತಿದ್ದರು.ಇತ್ತೀಚೆಗೆ ಆರೋಪಿಗಳು ಮೈಕೋ ಲೇಔಟ್‌ನ ಮಡಿವಾಳ ಕೆರೆಯ ಬಳಿ ಗಾಂಜಾ ಮಾರುತ್ತಿದ್ದಾಗ ಎಲ್ಲ ಆರೋಪಿಗಳನ್ನು ಮಾಲು ಸಮೇತ ಬಂಧಿಸಲಾಗಿದೆ ಎಂದು ಸುನೀಲ್‌ ಕುಮಾರ್‌ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌, ಆಗ್ನೇಯ ವಿಭಾಗದ ಡಿಸಿಪಿ ಡಾ ಬೋರಲಿಂಗಯ್ಯ, ಮೈಕೋ ಲೇಔಟ್‌ ಉಪವಿಭಾಗದ ಎಸಿಪಿ ಕರಿಬಸವನಗೌಡ ಮತ್ತು ಮೈಕೋಲೇಔಟ್‌ ಠಾಣೆ ಪಿಐ ಅಜಯ್‌ ಇತರೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.